Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಗುರುನಂದನ್ ಸಹಾಯಕ್ಕೆ ಬಂದ ಸುದೀಪ್
ನಟ ಗುರುನಂದನ್ ಅವರ 'ರಾಜು ಕನ್ನಡ ಮೀಡಿಯಂ' ಸಿನಿಮಾದಲ್ಲಿ ಸುದೀಪ್ ಒಂದು ಪ್ರಮುಖ ಪಾತ್ರ ಮಾಡಿದ್ದರು. ಸಿನಿಮಾದ ಗೆಲುವಿಗೆ ಇದು ಕೂಡ ಒಂದು ಕಾರಣ ಆಗಿತ್ತು. ಕಳೆದ ವರ್ಷ ಈ ಸಿನಿಮಾ ಬಿಡುಗಡೆಯಾಗಿತ್ತು.
ಅಂದಹಾಗೆ, 'ರಾಜು ಕನ್ನಡ ಮೀಡಿಯಾ' ಬಳಿಕ ಗುರುನಂದನ್ ಅವರ ಮತ್ತೊಂದು ಸಿನಿಮಾಗೆ ಸುದೀಪ್ ಸಹಾಯ ಮಾಡುತ್ತಿದ್ದಾರೆ. ಹಾಗೆಂದ ಮಾತ್ರಕ್ಕೆ ಸುದೀಪ್ ಈ ಸಿನಿಮಾದಲ್ಲಿ ನಟಿಸುತ್ತಿಲ್ಲ ಬದಲಿಕೆ ಗುರು ಚಿತ್ರದ ಟ್ರೇಲರ್ ಅನ್ನು ಕಿಚ್ಚ ಬಿಡುಗಡೆ ಮಾಡಿಕೊಡುತ್ತಿದ್ದಾರೆ.
'ಇದು ನನ್ನ ಕೊನೆ ಪ್ರಯತ್ನ' ರಕ್ತದಲ್ಲಿ ಪತ್ರ ಬರೆದ ಅಭಿಮಾನಿ: ಸುದೀಪ್ ಬೇಸರ
ಗುರುನಂದನ್ ಮುಂದಿನ ಸಿನಿಮಾ 'ಮಿಸ್ಸಿಂಗ್ ಬಾಯ್' ಚಿತ್ರದ ಟ್ರೇಲರ್ ಸುದೀಪ್ ರಿಲೀಸ್ ಮಾಡಲಿದ್ದಾರೆ. ಈ ಚಿತ್ರದ ಟ್ರೇಲರ್ ಮಾರ್ಚ್ 7 ರಂದು ಬಿಡುಗಡೆಯಾಗಲಿದೆ. ಈ ವಿಷಯವನ್ನು ಚಿತ್ರದ ನಿರ್ದೇಶಕ ರಘುರಾಮ್ ಹಂಚಿಕೊಂಡಿದ್ದಾರೆ. ರಘುರಾಮ್ ಈ ಹಿಂದೆ 'ಚೆಲುವೆ ನಿನ್ನೆ ನೋಡಲು' ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದರು.
5 ವರ್ಷದ ಒಬ್ಬ ಹುಡುಗ ತಂದೆ, ತಾಯಿ ಇಂದ ತಪ್ಪಿಸಿಕೊಂಡು ಹೋಗುತ್ತಾನೆ. ಈ ರೀತಿ ಮಿಸ್ ಆದ ಹುಡುಗನ ಕಥೆಯೇ 'ಮಿಸ್ಸಿಂಗ್ ಬಾಯ್'. ಸಿನಿಮಾದ ಟೀಸರ್ ಈಗಾಗಲೇ ಹೊರಬಂದಿದ್ದು, ಒಳ್ಳೆಯ ಪ್ರತಿಕ್ರಿಯೆ ಪಡೆಕೊಂಡಿದೆ. ಈ ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಮಾರ್ಚ್ 22ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ.
ಮಕ್ಕಳು ತಾಯಿಯ ಹತ್ತಿರ, ವಿದ್ಯಾರ್ಥಿಗಳು ಶಿಕ್ಷಕರ ಹತ್ತಿರ,ಪ್ರೀತಿಗೆ ಕಲಿಕೆಗೆ ಹೋಗದು ವಾಡಿಕೆ.ನನ್ನಂಥ ನಿರ್ದೇಶಕನ ಕನಸಿಗೆ ಕಿಚ್ಚ ಹೆಗಲು ಕೊಡತ್ತಾರೆ ಅನ್ನೋದು ಮಿಸ್ಸಿಂಗ್ ಬಾಯ್ ತಂಡದ ನಂಬಿಕೆ.ಕಿಚ್ಚ ಸ್ನೇಹಕ್ಕೆ,ಪ್ರೀತಿಗೆ ,ನಂಬಿಕೆಗೆ ಹೆಸರು.ಅಭಿಮಾನಿಗಳ ಉಸಿರು.@KicchaSudeep Sir releasing #Missingboy trailer on March 7th pic.twitter.com/aQO3x0N3vB
— Raghuram (@raghuram9777) March 4, 2019