Don't Miss!
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾಗೆ ಬೆಲೆ ಸಿಗೋದೇ ಥಿಯೇಟರ್ನಲ್ಲಿ ಬಿಡುಗಡೆಯಾದಾಗ- ಸುದೀಪ್
ಕೊರೊನಾ ಲಾಕ್ಡೌನ್ ಕಾರಣದಿಂದ ಆರೇಳು ತಿಂಗಳು ಚಿತ್ರಮಂದಿರಗಳು ಮುಚ್ಚಿದ್ದವು. ಇದೀಗ, ಸಿನಿಮಾ ಥಿಯೇಟರ್ಗೆ ಅವಕಾಶ ಸಿಕ್ಕಿದರೂ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ನಡುವೆ ಹಲವು ಚಿತ್ರಗಳು ಚಿತ್ರಮಂದಿರಕ್ಕೆ ಕಾಯದೇ ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡಿದ್ದಾರೆ.
ಕಾರ್ತಿಕ್ ಜಯರಾಂ ನಟನೆಯಲ್ಲಿ ತಯಾರಾಗುತ್ತಿರುವ ಐರಾವನ್ ಸಿನಿಮಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಟ ಸುದೀಪ್ ''ಐರಾವನ್ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್ ಆಗಲಿ, ಪ್ರತಿ ಸಿನಿಮಾಗೂ ಬೆಲೆ ಸಿಗೋದೇ ಥಿಯೇಟರ್ನಲ್ಲಿ ಬಿಡುಗಡೆಯಾದಾಗ'' ಎಂದು ಸುದೀಪ್ ಅಭಿಪ್ರಾಯ ಪಟ್ಟಿದ್ದಾರೆ.
ಐರಾವನ್ ಸಿನಿಮಾ ಆರಂಭಿಸಿದ ನಟ ಕಾರ್ತಿಕ್ ಜಯರಾಂ
ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರಕ್ಕಾಗಿ ಕಿಚ್ಚನ ಅಭಿಮಾನಿಗಳು ಕಾಯುತ್ತಿದ್ದರೂ ರಿಲೀಸ್ ಬಗ್ಗೆ ಸದ್ಯಕ್ಕೆ ಯಾವುದೇ ಅಪ್ಡೇಟ್ ನೀಡಿಲ್ಲ. ಬಹುಶಃ ಸಿನಿಮಾ ಥಿಯೇಟರ್ನಲ್ಲಿ ಶೇಕಡಾ 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ ಮೇಲೆ ಬರಬಹುದು ಎಂದು ಹೇಳಲಾಗಿದೆ.
ಇನ್ನು ಜೆಕೆ ನಟಿಸುತ್ತಿರುವ ಐರಾವನ್ ಚಿತ್ರವನ್ನು ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ನಲ್ಲಿ ನಿರ್ಮಿಸುತ್ತಿದ್ದು, ರಾಮ್ಸ್ ರಂಗಾ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.
ಮಲಯಾಳಂನ ಖ್ಯಾತ ನಟಿ ಮಂಜು ವಾರಿಯರ್ ಅವರನ್ನು ಭೇಟಿಯಾಗಿದ್ದೇಕೆ ಸುದೀಪ್ ದಂಪತಿ?
Recommended Video
ಸಸ್ಪೆನ್ಸ್ ಥ್ರಿಲ್ಲಿಂಗ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರದೀಪ್ ವರ್ಮಾ ಸಂಗೀತ ನೀಡುತ್ತಿದ್ದಾರೆ. ದೇವೇಂದ್ರ ಛಾಯಾಗ್ರಹಣ ಇದೆ. ಕೆ.ಎಂ.ಪ್ರಕಾಶ್ ಸಂಕಲನ ಒಳಗೊಂಡಿದೆ. ಕಾರ್ತಿಕ್ ಜಯರಾಂ ಜೊತೆ ವಿವೇಕ್, ಅದ್ವಿತಿ ಶೆಟ್ಟಿ, ಅವಿನಾಶ್, ಕೃಷ್ಣ ಹೆಬ್ಬಾರ್ ಮುಂತಾದವರ ಪ್ರಮುಖ ತಾರಾಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.