Don't Miss!
- News 1951 ರಿಂದ 2019 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇಲ್ಲಿದೆ ವಿವರ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕರ್ನಾಟಕ ಬುಲ್ಡೋಜರ್ಸ್' ತಂಡದ ಹೊಸ ಕ್ಯಾಪ್ಟನ್ ಗೆ ಶುಭ ಕೋರಿದ ಸುದೀಪ್
Recommended Video
ಕರ್ನಾಟಕ ಬುಲ್ಡೋಜರ್ಸ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಪ್ರದೀಪ್ ಅವರಿಗೆ ಕಿಚ್ಚ ಸುದೀಪ್ ಶುಭ ಕೋರಿದ್ದಾರೆ. ಫೆಬ್ರವರಿ 27ರಿಂದ ಆರಂಭವಾಗಲಿರುವ ಸಿಸಿಎಲ್ ಟಿ 10 ಕ್ರಿಕೆಟ್ ಲೀಗ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡ ಚಂಡೀಗಢಗೆ ನಿನ್ನೆ ಪ್ರಯಾಣ ಮಾಡಿದೆ.
ನೂತನ ನಾಯಕ ಪ್ರದೀಪ್, ನಿರೂಪ್ ಭಂಡಾರಿ, ಪೆಟ್ರೋಲ್ ಪ್ರಸನ್ನ, ಮದರಂಗಿ ಕೃಷ್ಣ, ರವಿಶಂಕರ್ ಗೌಡ, ಜೆಕೆ ಸೇರಿದಂತೆ ಹಲವು ಈಗಾಗಲೇ ಚಂಡಿಗಢ ಸೇರಿಕೊಂಡಿದ್ದಾರೆ. ಈ ಫೋಟೋವನ್ನ ನೂತನ ಕ್ಯಾಪ್ಟನ್ ಪ್ರದೀಪ್ ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು.
CCL ಟೂರ್ನಿಗೆ ಮುಹೂರ್ತ ಫಿಕ್ಸ್: ಕರ್ನಾಟಕ ತಂಡದಲ್ಲಿ ಮಹತ್ವದ ಬದಲಾವಣೆ?
ಈ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಸುದೀಪ್ ''ಹೊಸ ಕ್ಯಾಪ್ಟನ್ ಜೊತೆಯಲ್ಲಿ ನಾನು ಆಡಲು ಉತ್ಸುಕನಾಗಿದ್ದೇನೆ. ಆದಷ್ಟೂ ಬೇಗ ತಂಡ ಸೇರಿಕೊಳ್ಳಲಿದ್ದೇನೆ. ಜೈ ಕನ್ನಡ....ಜೈ ಕರ್ನಾಟಕ ಬುಲ್ಡೋಜರ್ಸ್'' ಎಂದು ಟ್ವೀಟ್ ಮಾಡಿದ್ದಾರೆ.
Joining u all soon @pradeepbogadi...
— Kichcha Sudeepa (@KicchaSudeep) February 27, 2019
Cheers captain... Do well...
Happy to be playing under u.
Jai Kannada,, Jai karnataka Bulldozers. 🙏🤗 https://t.co/MJQxgl2FTk
ಕಳೆದ ಕೆಲ ತಿಂಗಳಿನಿಂದ ಸುದೀಪ್ ಸಿಸಿಎಲ್ ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕನ ಸ್ಥಾನವನ್ನ ಬಿಟ್ಟುಕೊಟ್ಟಿದ್ದಾರೆ ಎಂಬ ಸುದ್ದಿ ಇತ್ತು. ಆದ್ರೀಗ, ಅದು ಅಧಿಕೃತವಾಗಿದೆ. ಈಗ ಸುದೀಪ್ ಕೇವಲ ಹಿರಿಯ ಆಟಗಾರನಾಗಿ ತಂಡದಲ್ಲಿ ಆಡಲಿದ್ದಾರೆ.
ಸುದೀಪ್ ತೊರೆದ 'ಕರ್ನಾಟಕ ಬುಲ್ಡೋಜರ್ಸ್' ನಾಯಕ ಸ್ಥಾನಕ್ಕೆ ಯುವ ನಟ.!
ಇನ್ನು ಫೆಬ್ರವರಿ 27, 28 ಹಾಗೂ ಮಾರ್ಚ್ 1 ಮತ್ತು 2 ರಂದು ಸಿಸಿಎಲ್ ಟಿ 10 ಟೂರ್ನಿ ನಡೆಯಲಿದ್ದು, ಒಟ್ಟು ಆರು ಇಂಡಸ್ಟ್ರಿಯ ಸಿನಿಮಾ ಕಲಾವಿದರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಬುಲ್ಡೋಜರ್ಸ್, ಮುಂಬೈ ಹೀರೋಸ್, ತೆಲುಗು ವಾರಿಯರ್ಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ದಿ ಶೇರ್, ಬೋಜ್ ಫುರಿ ದಬಾಂಗ್ಸ್ ತಂಡಗಳು ಭಾಗಿಯಾಗಲಿದೆ. ಒಟ್ಟು 200 ಸ್ಟಾರ್ ಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದು, 13 ಪಂದ್ಯಗಳು ನಡೆಯಲಿದೆ. ಚಂಡಿಘಡ್ ನ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆಯಲಿದೆ.