Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ಹುಟ್ಟುಹಬ್ಬಕ್ಕೆ ಶುಭಕೋರಿದ ಸುದೀಪ್, ಪವನ್ ಒಡೆಯರ್
ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ತಲೈವಾ ಬರ್ತಡೇ ದೇಶಾದ್ಯಂತ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ.
ಸ್ಯಾಂಡಲ್ವುಡ್ನಿಂದಲೂ ಹಲವು ಕಲಾವಿದರು ರಜನಿ ಬರ್ತಡೇಗೆ ವಿಶ್ ಮಾಡಿದ್ದಾರೆ. ಜಗ್ಗೇಶ್, ಸುಮಲತಾ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದಾರೆ. ಇದೀಗ, ಸುದೀಪ್ ಮತ್ತು ನಿರ್ದೇಶಕ ಪವನ್ ಒಡೆಯರ್ ಸಹ ಸೂಪರ್ ಸ್ಟಾರ್ಗೆ ವಿಶ್ ಮಾಡಿದ್ದಾರೆ.
'ರಜನಿ-ಅಂಬಿ ಸ್ನೇಹದಲ್ಲಿ ನನ್ನದೂ ಚಿಕ್ಕ ಪಾಲಿದೆ': ತಲೈವಾಗೆ ಶುಭಕೋರಿದ ಸುಮಲತಾ
''ಕ್ಲಾಸ್ ಹಾಗೂ ಮಾಸ್ ಎರಡಲ್ಲೂ ಲೆಜೆಂಡ್, ಅಸಾಧ್ಯವೆನಿಸಿದ್ದನ್ನು ಸಾಧಿಸಬಲ್ಲ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಹಾಗೂ ನಿಮ್ಮ ರಾಜಕೀಯ ಜರ್ನಿಗೂ ಆಲ್ ದಿ ಬೆಸ್ಟ್'' ಎಂದು ನಟ ಕಿಚ್ಚ ಸುದೀಪ್ ಶುಭಕೋರಿದ್ದಾರೆ.
''ಹುಟ್ಟುಹಬ್ಬದ ಶುಭಾಶಯಗಳು ಸೂಪರ್ ಸ್ಟಾರ್ ರಜನಿ ಸರ್. ನಾನು ನಿಮ್ಮ ದೊಡ್ಡ ಅಭಿಮಾನಿ. ಇದು ರಣವಿಕ್ರಮ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಸಮಯದಲ್ಲಿ ಕ್ಲಿಕ್ಕಿಸಿದ ಫೋಟೋ. ಈ ಚಿತ್ರದ ಒಂದು ಹಾಡನ್ನು ಕೇಳಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದರು'' ಎಂದು ಪವನ್ ಒಡೆಯರ್ ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ.
ಯಾವ ನಾಡಿನಲ್ಲಿ ಧ್ವಜ ಹಾರಿಸಿ ಗೆದ್ದರು ಕನ್ನಡದ ಸಂಜಾತನಲ್ಲವೇ; ರಜನಿಕಾಂತ್ ಗೆ ಜಗ್ಗೇಶ್ ವಿಶ್
ಸದ್ಯ, ಸನ್ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಅಣ್ಣಾತ್ತೆ ಸಿನಿಮಾದಲ್ಲಿ ರಜನಿಕಾಂತ್ ನಟಿಸುತ್ತಿದ್ದಾರೆ. ಸಿರುತೈ ಶಿವ ಈ ಚಿತ್ರ ನಿರ್ದೇಶಿಸುತ್ತಿದ್ದು, ಕೀರ್ತಿ ಸುರೇಶ್, ನಯನತಾರ, ಮೀನಾ, ಖುಷ್ಬೂ ಸೇರಿದಂತೆ ಹಲವರು ಕಾಣಿಸಿಕೊಳ್ಳುತ್ತಿದ್ದಾರೆ.
Recommended Video
ಇನ್ನು ಡಿಸೆಂಬರ್ 31 ರಂದು ತಮ್ಮ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ಕುರಿತು ರಜನಿ ಖಚಿತಪಡಿಸಿದ್ದು, ಅಣ್ಣಾತ್ತೆ ಸಿನಿಮಾ ಮುಗಿಸಿ ಸಂಪೂರ್ಣವಾಗಿ ರಾಜಕೀಯವಾಗಿ ತೊಡಗಿಕೊಳ್ಳಲಿದ್ದಾರೆ.