Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 28, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ ಎಂದೆಂದಿಗೂ ನನ್ನ ಉಸಿರು'- ಕಿಚ್ಚ ಸುದೀಪ್
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಜೇತರನ್ನು ಪ್ರಕಟಿಸಲಾಗಿದೆ.
'ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ' ವಿಷಯದಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ನಟ ಸುದೀಪ್ ಶುಭ ಹಾರೈಸಿದ್ದಾರೆ.
ವರಲಕ್ಷ್ಮಿ ಶರತ್ಕುಮಾರ್ ಪ್ರಯತ್ನಕ್ಕೆ ಶುಭಕೋರಿದ ಕಿಚ್ಚ ಸುದೀಪ್
''ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ 304 ಜನ ವಿದ್ಯಾರ್ಥಿಗಳಿಗೆ ಅಭಿನಂದನೆ, "ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ" ಎಂದೆಂದಿಗೂ ನನ್ನ ಉಸಿರು. #ಮೊದಲು_ಮಾನವನಾಗು'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಅಪೂರ್ವ ಕೆಎಂ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಭವ್ಯ ಕೆಬಿ ದ್ವಿತೀಯ ಬಹುಮಾನ ಪಡೆದಿದ್ದರೆ ಚಂದನ ತೃತೀಯ ಬಹುಮಾನಕ್ಕೆ ಪಾತ್ರರಾಗಿದ್ದಾರೆ.
Recommended Video
ಪ್ರಥಮ ಬಹುಮಾನಕ್ಕೆ 20 ಸಾವಿರ ನಗದು, ಎರಡನೇ ಬಹುಮಾನಕ್ಕೆ 15 ಸಾವಿರ ನಗದು ಹಾಗೂ ಮೂರನೇ ಬಹುಮಾನಕ್ಕೆ 10 ಸಾವಿರ ನಗದು ನೀಡಲಾಗುತ್ತದೆ. ಒಟ್ಟು ಈ ಸ್ಪರ್ಧೆಯಲ್ಲಿ 304 ಜನರು ಭಾಗವಹಿಸಿದ್ದರು.