Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
ಚಂದನವನದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಡಿಸೆಂಬರ್ 28 ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿಹಾರಿಕಾ ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಹಸೆಮಣೆ ಏರಿದ್ದಾರೆ. ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ನೆರವೇರಿದೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಸರಳವಾಗಿ ಮದುವೆ ನೆರವೇರಿದೆ. ಕುಟುಂಬದವರು, ಸ್ನೇಹಿತರು ಮತ್ತು ಚಿತ್ರರಂಗದ ಕೆಲವು ಗಣ್ಯರು ಭಾಗಿಯಾಗಿ, ನವ ಜೋಡಿಗೆ ಶುಭಕೋರಿದ್ದರು. ಇದೀಗ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ.
ಆರತಕ್ಷತೆಯಲ್ಲಿ ಸುದೀಪ್, ಯಶ್, ಸುಮಲತಾ
ನಿಹಾರಿಕಾ-ಅಕ್ಷಯ್ ಆರತಕ್ಷತೆ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು ಮತ್ತು ರಾಜಕೀಯ ಗಣ್ಯರು ಭಾಗಿಯಾಗಿದ್ದಾರೆೆ. ಚಿತ್ರರಂಗದಿಂದ ಕಿಚ್ಚ ಸುದೀಪ್, ಯಶ್ ದಂಪತಿ ಮತ್ತು ಸುಮಲತಾ ಅಂಬರೀಶ್ ಭಾಗಿಯಾಗಿರುವ ಫೋಟೋ ಹರಿದಾಡುತ್ತಿದೆ.ರಮೇಶ್ ಅರವಿಂದ್ ಜೊತ ಮೂರು ಜನ ಒಟ್ಟಿಗೆ ಕ್ಯಾಮರಾಗೆ ಪೋಸ್ ಗೆ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಒಂದೇ ಫ್ರೇಮಿನಲ್ಲಿ ಸೆರೆಯಾದ ಕನ್ನಡದ ಸ್ಟಾರ್ಸ್
ವಿಶೇಷ ಎಂದರೆ ಸುದೀಪ್, ಯಶ್ ಮತ್ತು ಸುಮಲತಾ ಅಂಬರೀಶ್ ಸಹ ಒಂದೇ ಸಮಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಒಂದೇ ಫ್ರೇಮಿನಲ್ಲಿ ಸೆರೆಯಾಗಿರುವ ಮೂವರ ಫೋಟೋ ವೈರಲ್ ಆಗಿದೆ. ಅನೇಕ ಸಮಯದ ಬಳಿಕ ಸುದೀಪ್ ಮತ್ತು ಸುಮಲತಾ ಅಂಬರೀಶ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಗೋವಾದಿಂದ ವಾಪಸ್ ಆಗಿರುವ ಕಿಚ್ಚ
ಕಿಚ್ಚ ಸುದೀಪ್ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದರು. ಗೋವಾದಿಂದ ವಾಪಸ್ ಆಗಿರುವ ಸುದೀಪ್, ರಮೇಶ್ ಅರವಿಂದ್ ಮಗಳ ಮದುವೆಯಲ್ಲಿ ಭಾಗಿಯಾಗಿ ನವಜೋಡಿಗೆ ಶುಭೋರಿದ್ದಾರೆ.
ರಾಜಕೀಯ ಗಣ್ಯರು ಭಾಗಿ
ಚಿತ್ರರಂಗದ ಗಣ್ಯರ ಜೊತೆ ರಾಜಕೀಯ ಗಣ್ಯರಿಗೂ ಆಮಂತ್ರಣ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕರಿಗೆ ಆಮಂತ್ರಣ ನೀಡಿದ್ದಾರೆ. ಇಂದು ನಡೆಯುತ್ತಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು ಸಹ ಭಾಗಿಯಾಗಿ ನವ ಜೋಡಿಗೆ ಆಶೀರ್ವಾದ ಮಾಡುವ ಸಾಧ್ಯತೆ ಇದೆ.