Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ: ಸುಮಲತಾ ಅಂಬರೀಶ್
ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳಿಗೆ ಸಂತದದ ಸುದ್ದಿ ಸಿಕ್ಕಿದೆ. ನೆಚ್ಚಿನ ನಟನ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಮೊದಲ ಹಂತದ ಪ್ರತಿಕ್ರಿಯೆ ನಡೆದಿದ್ದು, ಸರ್ಕಾರ 5 ಕೋಟಿ ರೂಪಾಯಿ ನೀಡಿದೆ. ಸ್ಮಾರಕ ನಿರ್ಮಾಣಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
Recommended Video
ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಅಂಬರೀಶ್ ಪ್ರತಿಷ್ಠಾನ ಸಮಿತಿಯನ್ನು ಜನವರಿಯಲ್ಲಿ ರಚಿಸಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಎಂಟು ಸದಸ್ಯರ ಈ ಸಮಿತಿಯು ಇದೇ ಮೊದಲ ಬಾರಿಗೆ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿತು.
ಅಂಬರೀಶ್ ಅಭಿಮಾನಿಗಳಿಗೆ ಖುಷಿ ಸುದ್ದಿ: ಸ್ಮಾರಕ ನಿರ್ಮಾಣದ ಜಮೀನಿಗೆ ಅನುಮೋದನೆ
ಇದರೆ ಬೆನ್ನಲ್ಲೆ ಇನ್ನೊಂದು ಕಡೆ ಡಾ.ವಿಷ್ಣುವರ್ಧನ್ ಸ್ಮಾರಕ ವಿಚಾರವನ್ನು ಕಡೆಗಣಿಸಲಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ವಿಷ್ಣುವರ್ಧನ್ ನಿಧನ ಹೊಂದಿ ಅನೇಕ ವರ್ಷಗಳಾದರು ಇನ್ನೂ ಸ್ಮಾರಕ ನಿರ್ಮಾಣವಾಗಿಲ್ಲ ಎನ್ನುವ ಬೇಸರ ಅಭಿಮಾನಿಗಳನ್ನು ಕಾಡುತ್ತಿದೆ. ಈ ವಿಚಾರಕ್ಕೆ ಸಂಬಂಧಿದ್ದಂತೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.
ವಿಷ್ಣುಸ್ಮಾರಕ ಅವರ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷದ ಹಿಂದೆಯೆ ಪ್ರಾರಂಭವಾಗಿದೆ. ಆದರೆ ಕಲೆವು ಅಭಿಮಾನಿಗಳಿಗೆ ತಿಳಿದುಬಂದಿಲ್ಲ. ಸರ್ಕಾರಾ 10 ಕೋಟಿಯಲ್ಲಿ 5 ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುಮಲತಾ ಅಂಬರೀಶ್,
"ನಮ್ಮ ಪ್ರೀತಿಯ ವಿಷ್ಣುವರ್ಧನ್ ರವರ ಸ್ಮಾರಕದ ಕೆಲಸ ಅವರ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷದ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದುಬಂದಿಲ್ಲ. ನನಗೆ ತಿಳಿದಿರುವಂತೆ ಸರಕಾರ ಘೋಷಿಸಿದ್ದ 10 ಕೋಟಿಯಲ್ಲಿ 5 ಕೋಟಿ ಬಿಡುಗಡೆ ಮಾಡಿದೆ. ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳೆಯೋದು ಬೇಡ" ಎಂದಿದ್ದಾರೆ.
ವಿಷ್ಣು ಮತ್ತು ಅಂಬಿ ಜೊತೆಗಿರುವ ಒಂದಿಷ್ಟು ಸುಂದರ ಫೋಟೋಗಳನ್ನು ಶೇರ್ ಮಾಡಿದ್ದಾರೆ. ವಿಷ್ಣು ಮತ್ತು ಅಂಬಿ ಅವರ ಸ್ನೇಹ ಎಂತಹದ್ದು ಎಂದು ಎಲ್ಲರಿಗೂ ಗೊತ್ತಿರೋದೆ. 'ನಿಜವಾದ ಸ್ಮೇಹಕ್ಕೆ ಹುಟ್ಟು ಸಾವು ಎನ್ನುವುದಿಲ್ಲ' ಎಂದು ಸುಮಲತಾ ಅವರೇ ಟ್ವೀಟ್ ನಲ್ಲಿ ಹೇಳಿದ್ದಾರೆ.