Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲವೂ ಕೂಡಿ ಬಂದರೆ ಕಾಂಗ್ರೆಸ್ ಪಕ್ಷದಿಂದಲೇ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ.!
Recommended Video
'ಮಂಡ್ಯದ ಗಂಡು' ಎಂದೇ ಕರೆಯಿಸಿಕೊಳ್ಳುತ್ತಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸ್ಥಾನವನ್ನು ಮಂಡ್ಯ ಜಿಲ್ಲೆಯಲ್ಲಿ ತುಂಬಲು ಪತ್ನಿ ಸುಮಲತಾ ಅಂಬರೀಶ್ ಮಾತ್ರರಿಂದಲೇ ಸಾಧ್ಯ ಎಂಬುದು ಅಭಿಮಾನಿಗಳ ಮಾತು.
ಅಭಿಮಾನಿಗಳ ಆಸೆ, ಪ್ರೀತಿ, ಇಚ್ಛೆಗೆ ನೋವುಂಟು ಮಾಡದಿರಲು ನಿರ್ಧರಿಸಿರುವ ಸುಮಲತಾ ಅಂಬರೀಶ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
''ಅಭಿಮಾನಿಗಳ ಪ್ರೀತಿಯಿಂದ ಗೆಲುವಾಗಬೇಕು'' ಎಂದು ಬಯಸಿರುವ ಸುಮಲತಾ ಅಂಬರೀಶ್.. ಎಲ್ಲವೂ ಕೂಡಿ ಬಂದರೆ ಕಾಂಗ್ರೆಸ್ ಪಕ್ಷದಿಂದಲೇ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಮುಂದೆ ಓದಿರಿ...
ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಸುಮಲತಾ ಅಂಬರೀಶ್
ಇತ್ತೀಚೆಗಷ್ಟೇ ಆದಿಚುಂಚನಗಿರಿಗೆ ಪುತ್ರ ಅಭಿಷೇಕ್ ಜೊತೆಗೆ ಸುಮಲತಾ ಅಂಬರೀಶ್ ಭೇಟಿ ನೀಡಿದ್ದರು. ಕಾಲಭೈರವೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸುಮಲತಾ ಲೋಕಸಭಾ ಚುನಾವಣೆಗೆ: ಪ್ರಚಾರ ಜವಾಬ್ದಾರಿ ದರ್ಶನ್ ಹೆಗಲಿಗೆ.!
ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರಾ ಸುಮಲತಾ.?
ವಿಶೇಷ ಪೂಜೆ ಸಲ್ಲಿಸಿದ ಬಳಿಕ, ''ಚುನಾವಣೆಯಲ್ಲಿ ಅಭಿಮಾನಿಗಳ ಇಚ್ಛೆಯಂತೆ ಸುಮಲತಾ ಕಣಕ್ಕೆ ಇಳಿಯುತ್ತಾರಾ.?'' ಎಂಬ ಪ್ರಶ್ನೆ ಮಾಧ್ಯಮಗಳಿಂದ ತೂರಿ ಬಂತು. ಅದಕ್ಕೆ, ''ಅಂಬರೀಶ್ ಜೀವನದಲ್ಲಿ ಯಾರೇ ಗೆಲ್ಲಿಸಿದ್ದರೂ, ಸೋಲಿಸಿದ್ದರೂ.. ಅಭಿಮಾನಿಗಳು ಮಾತ್ರ ಅವರ ಜೊತೆಯಲ್ಲಿ ಸದಾ ಕಾಲ ಇದ್ದರು. ಅಭಿಮಾನಿಗಳ ಆಸೆ ನೆರವೇರಿಸಬೇಕು ಎಂಬ ಆಸೆ ನನಗೂ ಇದೆ. ಅಭಿಮಾನಿಗಳ ಪ್ರೀತಿಯನ್ನು ಬಿಟ್ಟುಕೊಡಲು ನನಗೂ ಇಷ್ಟ ಇಲ್ಲ. ಅಭಿಮಾನಿಗಳ ಆಸೆ ಸೋಲಾಗಬಾರದು, ಗೆಲುವಾಗಬೇಕು ಎಂಬ ಇಚ್ಛೆ ನನಗಿದೆ. ಸದ್ಯಕ್ಕೆ ನಿರ್ಧಾರ ನನ್ನ ಕೈಯಲ್ಲಿ ಮಾತ್ರ ಇಲ್ಲ. ಎಲ್ಲವೂ ಕೂಡಿ ಬಂದರೆ ಹಂಡ್ರೆಡ್ ಪರ್ಸೆಂಟ್ ಆಗುತ್ತೆ. ಇಲ್ಲಾಂದ್ರೆ, ನಾನು ಸ್ವಲ್ಪ ಯೋಚನೆ ಮಾಡಬೇಕಾಗುತ್ತದೆ'' ಎಂದು ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದರು.
ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ.?
ಯಾವ ಪಕ್ಷದಿಂದ ಸುಮಲತಾ ಸ್ಪರ್ಧಿಸುತ್ತಾರೆ.?
''ಅಂಬರೀಶ್ ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡಿದ್ದರು. ಹೀಗಾಗಿ ಹಂಡ್ರೆಡ್ ಪರ್ಸೆಂಟ್ ಕಾಂಗ್ರೆಸ್ ಪಕ್ಷದಿಂದಲೇ ಅಪೇಕ್ಷೆ ಪಡುತ್ತೇನೆ'' ಎಂದು ಸ್ಪಷ್ಟವಾಗಿ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಅಂಬಿ ಅಭಿಮಾನಿಯ ವಿಶಿಷ್ಟ ಪ್ರೀತಿ ಕಂಡು ಸಂತಸಗೊಂಡ ಸುಮಲತಾ
ಎಲ್ಲವೂ ಕೂಡಿ ಬರಬೇಕು ಅಷ್ಟೇ.!
ಒಟ್ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸುಮಲತಾ ಅಂಬರೀಶ್ ರೆಡಿ ಇದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅವರಿಗೆ ಟಿಕೆಟ್ ಸಿಕ್ಕರೆ, ಸುಮಲತಾ ಸ್ಪರ್ಧಿಸುವುದು ಗ್ಯಾರೆಂಟಿ.