Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಶ್ರೀ ದೇವಿ ನಿಧನಕ್ಕೆ ಸಂತಾಪ ಸೂಚಿಸಿದ ಸುಮಲತಾ, ಮೇಘನಾ
ಕನ್ನಡ ಚಿತ್ರರಂಗಕ್ಕೆ ಅನೇಕ ಸಿನಿಮಾಗಳನ್ನು ನೀಡಿದ್ದ ನಿರ್ಮಾಪಕಿ ಜಯಶ್ರೀ ದೇವಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಹೃದಯಘಾತದಿಂದ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕಿ ಜಯಶ್ರೀದೇವಿ ಇನ್ನಿಲ್ಲ
ಜಯಶ್ರೀಯವರ ನಿಧನಕ್ಕೆ ಕನ್ನಡ ಚಿತ್ರರಂಗದ ನಟಿಯರಾದ ಸುಮಲತಾ ಅಂಬರೀಶ್ ಹಾಗೂ ಮೇಘನಾ ರಾಜ್ ಕಂಪನಿ ಮಿಡಿದಿದ್ದಾರೆ. ಟ್ವಿಟ್ಟರ್ ಖಾತೆಯ ಮೂಲಕ ಈ ಇಬ್ಬರು ನಟಿಯರು ಸಂತಾಪ ಸೂಚಿಸಿದ್ದಾರೆ.
''ಜಯಶ್ರೀ ದೇವಿ ಅಮ್ಮನವರ ಅಕಾಲಿಕ ಮರಣದ ಸುದ್ದಿ ಕೇಳಿ ನನಗೆ ಆಘಾತ ಮತ್ತು ತುಂಬ ದುಃಖ ಆಗಿದೆ. 'ಕುರುಕ್ಷೇತ್ರ' ಸಿನಿಮಾದಲ್ಲಿ ನನಗೆ ಭಾಗಿ ಆಗುವಂತೆ ಮಾಡಿದ್ದಕ್ಕೆ ಧನ್ಯವಾದ. ಇದು ನನ್ನ ಇಡೀ ಜೀವನದಲ್ಲಿ ನೆನಪಿನಲ್ಲಿ ಇಟ್ಟುಕೊಳ್ಳುವಂತದ್ದು. ಅವರ ಆತ್ಮಕ್ಕೆ ಶಾಂತಿ ಸಿಗಲಿ.'' ಎಂದು ಮೇಘನಾ ರಾಜ್ ಟ್ವೀಟ್ ಮಾಡಿದ್ದಾರೆ.
Shocked and saddened by the sudden and untimely demise of Jayashri Devi amma... thank u for letting me be a part of #Kurukshetra .. something i will cherish my whole life...may her soul rest in peace 🙏🏻
— MEGHANA RAJ (@meghanasraj) February 13, 2019
''ಇದು ಆಘಾತ ಹಾಗೂ ದುಃಖದ ವಿಷಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಾನು ಹಾಗೂ ಅಂಬರೀಶ್ ಜಯಶ್ರೀ ಅವರ ಬ್ಯಾನರ್ ನಲ್ಲಿ ಬಂದ ಶ್ರೀ ಮಂಜುನಾಥ ಚಿತ್ರದಲ್ಲಿ ನಟಿಸಿದೆವು. 'ಹಬ್ಬ' ಹಾಗೂ 'ವಂದೇ ಮಾತರಂ' ಸಿನಿಮಾಗಳಲ್ಲಿ ಅಂಬರೀಶ್ ಅಭಿನಯಿಸಿದ್ದರು.'' ಎಂದು ಟ್ವಿಟ್ಟರ್ ನ ಮೂಲಕ ಸುಮಲತಾ ಸಂತಾಪ ಸೂಚಿಸಿದ್ದಾರೆ.
https://t.co/S42kK2XLP6
— sumalatha ambareesh 🇮🇳 (@sumalathaA) February 13, 2019
This is shocking & sad news , May her soul RIP 🙏, Ambareesh & myself had worked in her production Shri Manjunatha , apart from Habba & Vande Matharam that he did
'ಭವಾನಿ', 'ನಮ್ಮೂರ ಮಂದಾರ ಹೂವೆ', 'ಅಮೃತ ವರ್ಷಿಣಿ', 'ಶ್ರೀ ಮಂಜುನಾಥ', 'ನಿಶ್ಯಬ್ದ', 'ಕೋಣ ಈದೈತೆ' ಮುಂತಾದ ಚಿತ್ರಗಳನ್ನು ಜಯಶ್ರೀ ಅವರ ನಿರ್ಮಾಣ ಮಾಡಿದ್ದರು. ಮುಕುಂದ ಮುರಾರಿ ಅವರು ಕಾರ್ಯಕರಿ ನಿರ್ಮಾಪಕಿಯಾಗಿ ಕೆಲಸ ಮಾಡಿದ ಕೊನೆಯ ಸಿನಿಮಾವಾಗಿದೆ.