twitter
    For Quick Alerts
    ALLOW NOTIFICATIONS  
    For Daily Alerts

    ಕೊನೆಗೂ ನಿರ್ಧಾರ ಘೋಷಿಸಿದ ಸುಮಲತಾ: ದರ್ಶನ್-ಯಶ್ ಗೆ ಗೆಲ್ಲಿಸುವ ಜವಾಬ್ದಾರಿ

    |

    ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುವುದು ಖಚಿತವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ.

    ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಮಲತಾ ಅಂಬರೀಶ್ ''ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ'' ಎಂದು ಘೋಷಿಸಿದ್ದಾರೆ. ''ನನ್ನ ಜೊತೆ ಅಂಬರೀಶ್ ಅಭಿಮಾನಿಗಳಿದ್ದಾರೆ, ನನ್ನ ಹಿತೈಷಿಗಳಿದ್ದಾರೆ ಎಂಬ ಆತ್ಮವಿಶ್ವಾಸದಿಂದ ನಾನು ಸ್ಪರ್ಧೆ ಮಾಡುತ್ತಿದ್ದೇನೆ'' ಎಂದು ಘೋಷಿಸಿದ್ದಾರೆ.

    ದರ್ಶನ್-ಯಶ್ ಜೊತೆ ಸುಮಲತಾ ಸುದ್ದಿಗೋಷ್ಠಿ ದರ್ಶನ್-ಯಶ್ ಜೊತೆ ಸುಮಲತಾ ಸುದ್ದಿಗೋಷ್ಠಿ

    ''ಮಂಡ್ಯ ಜನರು ಅಂಬರೀಶ್ ಅವರ ಮೇಲೆ ಇಟ್ಟಿದ್ದ ಪ್ರೀತಿಯನ್ನ ನಾವು ಮರೆತಿಲ್ಲ. ಅವರು ಇದ್ದಾಗ ಇದ್ದ ಪ್ರೀತಿ ಈಗ ನಮ್ಮ ಕುಟುಂಬದ ಮೇಲೆ ತೋರಿಸುತ್ತಿದ್ದಾರೆ. ಹಾಗಾಗಿ, ಅವರ ಋಣವನ್ನ ನಾನು ತೀರಿಸಬೇಕಾಗಿದೆ'' ಎಂದು ಸುಮಲತಾ ಹೇಳಿದ್ದಾರೆ.

    ಮಾರ್ಚ್ 20ಕ್ಕೆ ನಾಮಪತ್ರ ಸಲ್ಲಿಕೆ

    ಮಾರ್ಚ್ 20ಕ್ಕೆ ನಾಮಪತ್ರ ಸಲ್ಲಿಕೆ

    ಇಂದು ಅಧಿಕೃತವಾಗಿ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಸುಮಲತಾ ಅಂಬರೀಶ್ ಅವರು, ಮಾರ್ಚ್ 20 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸುಮಲತಾ ಅವರಿಗೆ ಅಂಬರೀಶ್ ಅಭಿಮಾನಿಗಳು ಮತ್ತು ಚಿತ್ರರಂಗದವರು ಸಾಥ್ ನೀಡಲಿದ್ದಾರೆ.

    ''ಸುದೀಪ್ ಗೆ ತೊಂದರೆ ನೀಡಲು ಇಷ್ಟ ಪಡುವುದಿಲ್ಲ'' ಕಿಚ್ಚನ ಬಗ್ಗೆ ಸುಮಲತಾ ಹೇಳಿಕೆ ''ಸುದೀಪ್ ಗೆ ತೊಂದರೆ ನೀಡಲು ಇಷ್ಟ ಪಡುವುದಿಲ್ಲ'' ಕಿಚ್ಚನ ಬಗ್ಗೆ ಸುಮಲತಾ ಹೇಳಿಕೆ

    ದರ್ಶನ್-ಯಶ್ ಗೆ ಹೆಚ್ಚಿನ ಜವಾಬ್ದಾರಿ

    ದರ್ಶನ್-ಯಶ್ ಗೆ ಹೆಚ್ಚಿನ ಜವಾಬ್ದಾರಿ

    ಸುಮಲತಾ ಅವರ ಪರ ಇಂಡಸ್ಟ್ರಿಯಲ್ಲಿ ಯಾರಿದ್ದಾರೆ ಎಂದು ಕೇಳುತ್ತಿದ್ದವರಿಗೆ ಇಂದು ಅಧಿಕೃತವಾಗಿ ಹೊರಬಿದ್ದಿದೆ. ನಟ ದರ್ಶನ್ ಮತ್ತು ಯಶ್ ಇಬ್ಬರು ಸುಮಲತಾ ಅವರ ಗೆಲುವಿಗಾಗಿ ಶ್ರಮಿಸಲಿದ್ದಾರೆ. ಸುಮಲತಾ ಪರ ಇವರಿಬ್ಬರ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ. ಇವರ ಜೊತೆ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ಸೇರಿದಂತೆ ಹಲವರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

    ದರ್ಶನ್ ಬಳಿಕ ಸುಮಲತಾ ಸಿಕ್ತು ಮನೆ ಮಗ ಯಶ್ ಬೆಂಬಲ!ದರ್ಶನ್ ಬಳಿಕ ಸುಮಲತಾ ಸಿಕ್ತು ಮನೆ ಮಗ ಯಶ್ ಬೆಂಬಲ!

    ಅಂಬರೀಶ್ ಋಣ ತೀರಿಸಬೇಕಿದೆ

    ಅಂಬರೀಶ್ ಋಣ ತೀರಿಸಬೇಕಿದೆ

    ಸುಮಲತಾ ಅಂಬರೀಶ್ ಅವರು ರಾಜಕೀಯಕ್ಕೆ ಬರುತ್ತಿರುವುದು ಯಾವುದೇ ಲಾಭಕ್ಕಾಗಿ ಬರ್ತಿಲ್ಲ. ಅಂಬರೀಶ್ ಅವರ ಪರಂಪರೆಯನ್ನ ಮುಂದುವರಿಸುವುದು ನನ್ನ ಜವಾಬ್ದಾರಿ. ಅವರ ಪ್ರೀತಿಸುತ್ತಿದ್ದ ಜನರ ಋಣ ಮತ್ತು ಅವರ ಕಷ್ಟಗಳಲ್ಲಿ ನಾನು ಇರಬೇಕಾಗಿದೆ. ಅದಕ್ಕಾಗಿ ನಾನು ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಿದ್ದೇನೆ'' ಎಂದು ಸುಮಲತಾ ಘೋಷಿಸಿದರು.

    ಮಂಡ್ಯ ರಾಜಕೀಯ: ಸಿನಿಮಾರಂಗದಲ್ಲೇ ಎರಡು ಬಣ ಸಾಧ್ಯತೆ.? ಮಂಡ್ಯ ರಾಜಕೀಯ: ಸಿನಿಮಾರಂಗದಲ್ಲೇ ಎರಡು ಬಣ ಸಾಧ್ಯತೆ.?

    ದರ್ಶನ್-ಯಶ್ ನನ್ನ ಜೊತೆ ಇದ್ದಾರೆ

    ದರ್ಶನ್-ಯಶ್ ನನ್ನ ಜೊತೆ ಇದ್ದಾರೆ

    ಚಿತ್ರರಂಗವೂ ನನ್ನ ಜೊತೆ ಇದೆ. ನಟ ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ಯಶ್ ಅವರು ನಮ್ಮ ಮನೆ ಮಗ. ಅಂಬರೀಶ್ ಮತ್ತು ನನ್ನ ಮೇಲಿನ ಪ್ರೀತಿಯಿಂದ ಅವರು ನನ್ನ ಜೊತೆಯಲ್ಲಿದ್ದಾರೆ'' ಎಂದು ಸುಮಲತಾ ತಿಳಿಸಿದ್ದಾರೆ.

    ದರ್ಶನ್ ನನ್ನ ದೊಡ್ಡ ಮಗ, ಯಶ್ ಮನೆ ಮಗ: ಸುಮಲತಾದರ್ಶನ್ ನನ್ನ ದೊಡ್ಡ ಮಗ, ಯಶ್ ಮನೆ ಮಗ: ಸುಮಲತಾ

    English summary
    Kannada actor, rebel star ambarish wife sumalatha ambarish announced, she will contest independently in mandya lok sabha election.
    Monday, March 18, 2019, 13:09
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X