Don't Miss!
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್ ಬಗ್ಗೆ ಭಾರತದ ಮಾಜಿ ಆಟಗಾರರ ಅಭಿಪ್ರಾಯ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- News ಧಾರವಾಡ; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್, ಕಣದಲ್ಲಿ 17 ಮಂದಿ
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊನೆಗೂ ನಿರ್ಧಾರ ಘೋಷಿಸಿದ ಸುಮಲತಾ: ದರ್ಶನ್-ಯಶ್ ಗೆ ಗೆಲ್ಲಿಸುವ ಜವಾಬ್ದಾರಿ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುವುದು ಖಚಿತವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಮಲತಾ ಅಂಬರೀಶ್ ''ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ'' ಎಂದು ಘೋಷಿಸಿದ್ದಾರೆ. ''ನನ್ನ ಜೊತೆ ಅಂಬರೀಶ್ ಅಭಿಮಾನಿಗಳಿದ್ದಾರೆ, ನನ್ನ ಹಿತೈಷಿಗಳಿದ್ದಾರೆ ಎಂಬ ಆತ್ಮವಿಶ್ವಾಸದಿಂದ ನಾನು ಸ್ಪರ್ಧೆ ಮಾಡುತ್ತಿದ್ದೇನೆ'' ಎಂದು ಘೋಷಿಸಿದ್ದಾರೆ.
ದರ್ಶನ್-ಯಶ್ ಜೊತೆ ಸುಮಲತಾ ಸುದ್ದಿಗೋಷ್ಠಿ
''ಮಂಡ್ಯ ಜನರು ಅಂಬರೀಶ್ ಅವರ ಮೇಲೆ ಇಟ್ಟಿದ್ದ ಪ್ರೀತಿಯನ್ನ ನಾವು ಮರೆತಿಲ್ಲ. ಅವರು ಇದ್ದಾಗ ಇದ್ದ ಪ್ರೀತಿ ಈಗ ನಮ್ಮ ಕುಟುಂಬದ ಮೇಲೆ ತೋರಿಸುತ್ತಿದ್ದಾರೆ. ಹಾಗಾಗಿ, ಅವರ ಋಣವನ್ನ ನಾನು ತೀರಿಸಬೇಕಾಗಿದೆ'' ಎಂದು ಸುಮಲತಾ ಹೇಳಿದ್ದಾರೆ.
ಮಾರ್ಚ್ 20ಕ್ಕೆ ನಾಮಪತ್ರ ಸಲ್ಲಿಕೆ
ಇಂದು ಅಧಿಕೃತವಾಗಿ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಸುಮಲತಾ ಅಂಬರೀಶ್ ಅವರು, ಮಾರ್ಚ್ 20 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸುಮಲತಾ ಅವರಿಗೆ ಅಂಬರೀಶ್ ಅಭಿಮಾನಿಗಳು ಮತ್ತು ಚಿತ್ರರಂಗದವರು ಸಾಥ್ ನೀಡಲಿದ್ದಾರೆ.
''ಸುದೀಪ್ ಗೆ ತೊಂದರೆ ನೀಡಲು ಇಷ್ಟ ಪಡುವುದಿಲ್ಲ'' ಕಿಚ್ಚನ ಬಗ್ಗೆ ಸುಮಲತಾ ಹೇಳಿಕೆ
ದರ್ಶನ್-ಯಶ್ ಗೆ ಹೆಚ್ಚಿನ ಜವಾಬ್ದಾರಿ
ಸುಮಲತಾ ಅವರ ಪರ ಇಂಡಸ್ಟ್ರಿಯಲ್ಲಿ ಯಾರಿದ್ದಾರೆ ಎಂದು ಕೇಳುತ್ತಿದ್ದವರಿಗೆ ಇಂದು ಅಧಿಕೃತವಾಗಿ ಹೊರಬಿದ್ದಿದೆ. ನಟ ದರ್ಶನ್ ಮತ್ತು ಯಶ್ ಇಬ್ಬರು ಸುಮಲತಾ ಅವರ ಗೆಲುವಿಗಾಗಿ ಶ್ರಮಿಸಲಿದ್ದಾರೆ. ಸುಮಲತಾ ಪರ ಇವರಿಬ್ಬರ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ. ಇವರ ಜೊತೆ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ಸೇರಿದಂತೆ ಹಲವರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ದರ್ಶನ್ ಬಳಿಕ ಸುಮಲತಾ ಸಿಕ್ತು ಮನೆ ಮಗ ಯಶ್ ಬೆಂಬಲ!
ಅಂಬರೀಶ್ ಋಣ ತೀರಿಸಬೇಕಿದೆ
ಸುಮಲತಾ ಅಂಬರೀಶ್ ಅವರು ರಾಜಕೀಯಕ್ಕೆ ಬರುತ್ತಿರುವುದು ಯಾವುದೇ ಲಾಭಕ್ಕಾಗಿ ಬರ್ತಿಲ್ಲ. ಅಂಬರೀಶ್ ಅವರ ಪರಂಪರೆಯನ್ನ ಮುಂದುವರಿಸುವುದು ನನ್ನ ಜವಾಬ್ದಾರಿ. ಅವರ ಪ್ರೀತಿಸುತ್ತಿದ್ದ ಜನರ ಋಣ ಮತ್ತು ಅವರ ಕಷ್ಟಗಳಲ್ಲಿ ನಾನು ಇರಬೇಕಾಗಿದೆ. ಅದಕ್ಕಾಗಿ ನಾನು ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಿದ್ದೇನೆ'' ಎಂದು ಸುಮಲತಾ ಘೋಷಿಸಿದರು.
ಮಂಡ್ಯ ರಾಜಕೀಯ: ಸಿನಿಮಾರಂಗದಲ್ಲೇ ಎರಡು ಬಣ ಸಾಧ್ಯತೆ.?
ದರ್ಶನ್-ಯಶ್ ನನ್ನ ಜೊತೆ ಇದ್ದಾರೆ
ಚಿತ್ರರಂಗವೂ ನನ್ನ ಜೊತೆ ಇದೆ. ನಟ ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ಯಶ್ ಅವರು ನಮ್ಮ ಮನೆ ಮಗ. ಅಂಬರೀಶ್ ಮತ್ತು ನನ್ನ ಮೇಲಿನ ಪ್ರೀತಿಯಿಂದ ಅವರು ನನ್ನ ಜೊತೆಯಲ್ಲಿದ್ದಾರೆ'' ಎಂದು ಸುಮಲತಾ ತಿಳಿಸಿದ್ದಾರೆ.
ದರ್ಶನ್ ನನ್ನ ದೊಡ್ಡ ಮಗ, ಯಶ್ ಮನೆ ಮಗ: ಸುಮಲತಾ