"ಮಗನೇ ದರ್ಶನ್ ನೀನು ಈ ಕಾರಣಕ್ಕೆ ಇಷ್ಟ": ಸುಮಲತಾ ಹೀಗೆ ಹೇಳಿದ್ದೇಕೆ ?

Recommended Video

ದರ್ಶನ್ ಹೇಗೆ ಹಾಲು ಕರೆಯುತ್ತಾರೆ ನೋಡಿ..

ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ನಟರಾದ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ದರ್ಶನ್ ಮತ್ತು ಯಶ್ ಹೋದ ಕಡೆಯಲೆಲ್ಲಾ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಜನ ಸಾಗರವೇ ಹರಿದು ಬರುತ್ತಿದೆ. ಗುರುವಾರ ಕೆ.ಆರ್ ಪೇಟೆಯಲ್ಲಿ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ಅಬ್ಬರದ ಪ್ರಚಾರದ ನಡುವೆ ಹಸುವಿನ ಹಾಲು ಕರೆದು ಅಚ್ಚರಿ ಮೂಡಿಸಿದ್ದಾರೆ.

ದರ್ಶನ್ ಕೈಗೆ ಪೆಟ್ಟಾಗಿದೆ. ಸುಮಲತಾ ಅವರನ್ನು ಗೆಲ್ಲಿಸಲೇ ಬೇಕೆಂದು ಪಣ ತೊಟ್ಟಿರುವ ಡಿ ಬಾಸ್ ಬ್ಯಾಂಡೇಜ್ ಹಾಕಿಕೊಂಡೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಕೈ ನೋವನ್ನು ಲೆಕ್ಕಿಸದೆ ಹಸುವಿನ ಹಾಲು ಕರೆದು ಗಮನ ಸೆಳೆದಿದ್ದಾರೆ. ಇದನ್ನ ನೋಡಿದ ಸುಮಲತಾ, ದರ್ಶನ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

"ಮಗನೇ ದರ್ಶನ್ ನೀನು ಈ ಕಾರಣಕ್ಕೆ ಇಷ್ಟ" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಷ್ಟೆಯಲ್ಲ "ಕೈ ನೋವಿದ್ದರೂ ನೀನು ಇಂದು ಹಸುವಿನ ಹಾಲು ಕರೆದಿದ್ದು ನನ್ನನ್ನು ಮಂತ್ರಮುಗ್ಧಗೊಳಿಸಿದೆ. ಹ್ಯಾಟ್ಸಾಪ್ ಕಂದ" ಎಂದು ಪ್ರೀತಿಯ ದೊಡ್ಮಗನನ್ನು ಹಾಡಿ ಹೊಗಳಿದ್ದಾರೆ.

sumalatha appreciate to darshan for cow milking

ದರ್ಶನ್ ಹೋದ ಕಡೆಯಲ್ಲ ಮಂಡ್ಯ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಜನಸಾಗರ ನೋಡಿ ಎಲ್ಲರೂ ಅಚ್ಚರಿ ಪಡುತ್ತಿದ್ದಾರೆ. ದರ್ಶನ್ ಹಸುವಿನ ಹಾಲು ಕರೆಯುವುದು ಇದೇ ಮೊದಲೇನಲ್ಲ. ಆದ್ರೆ ಪ್ರಚಾರದ ನಡುವೆ, ಜನಸಾಗರದ ಮಧ್ಯೆ, ಕೈ ನೋವಿದ್ದರು ಅಭಿಮಾನಿಯೊಬ್ಬನ ಮನೆಯ ಹಸುವಿನ ಹಾಲು ಕರೆದಿರುವುದು ಡಿ ಬಾಸ್ ಅಭಿಮಾನಿಗಳ ಸಂತಸ ಹೇಳತೀರದು.

More from Filmibeat

English summary
mandya lok sabha independent contestant sumalatha was appreciate to kannada actor darshan for cow milking in mandya lok sabha campaign.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X