Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ಮಗನೇ ದರ್ಶನ್ ನೀನು ಈ ಕಾರಣಕ್ಕೆ ಇಷ್ಟ": ಸುಮಲತಾ ಹೀಗೆ ಹೇಳಿದ್ದೇಕೆ ?
Recommended Video
ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ನಟರಾದ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ದರ್ಶನ್ ಮತ್ತು ಯಶ್ ಹೋದ ಕಡೆಯಲೆಲ್ಲಾ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಜನ ಸಾಗರವೇ ಹರಿದು ಬರುತ್ತಿದೆ. ಗುರುವಾರ ಕೆ.ಆರ್ ಪೇಟೆಯಲ್ಲಿ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ಅಬ್ಬರದ ಪ್ರಚಾರದ ನಡುವೆ ಹಸುವಿನ ಹಾಲು ಕರೆದು ಅಚ್ಚರಿ ಮೂಡಿಸಿದ್ದಾರೆ.
ದರ್ಶನ್ ಕೈಗೆ ಪೆಟ್ಟಾಗಿದೆ. ಸುಮಲತಾ ಅವರನ್ನು ಗೆಲ್ಲಿಸಲೇ ಬೇಕೆಂದು ಪಣ ತೊಟ್ಟಿರುವ ಡಿ ಬಾಸ್ ಬ್ಯಾಂಡೇಜ್ ಹಾಕಿಕೊಂಡೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಕೈ ನೋವನ್ನು ಲೆಕ್ಕಿಸದೆ ಹಸುವಿನ ಹಾಲು ಕರೆದು ಗಮನ ಸೆಳೆದಿದ್ದಾರೆ. ಇದನ್ನ ನೋಡಿದ ಸುಮಲತಾ, ದರ್ಶನ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಹಸುವಿನ ಹಾಲು ಕರೆದು 'ರೈತ' ಎಂದು ಸಾಬೀತು ಮಾಡಿದ ದರ್ಶನ್
"ಮಗನೇ ದರ್ಶನ್ ನೀನು ಈ ಕಾರಣಕ್ಕೆ ಇಷ್ಟ" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಷ್ಟೆಯಲ್ಲ "ಕೈ ನೋವಿದ್ದರೂ ನೀನು ಇಂದು ಹಸುವಿನ ಹಾಲು ಕರೆದಿದ್ದು ನನ್ನನ್ನು ಮಂತ್ರಮುಗ್ಧಗೊಳಿಸಿದೆ. ಹ್ಯಾಟ್ಸಾಪ್ ಕಂದ" ಎಂದು ಪ್ರೀತಿಯ ದೊಡ್ಮಗನನ್ನು ಹಾಡಿ ಹೊಗಳಿದ್ದಾರೆ.
ದರ್ಶನ್ ಹೋದ ಕಡೆಯಲ್ಲ ಮಂಡ್ಯ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಜನಸಾಗರ ನೋಡಿ ಎಲ್ಲರೂ ಅಚ್ಚರಿ ಪಡುತ್ತಿದ್ದಾರೆ. ದರ್ಶನ್ ಹಸುವಿನ ಹಾಲು ಕರೆಯುವುದು ಇದೇ ಮೊದಲೇನಲ್ಲ. ಆದ್ರೆ ಪ್ರಚಾರದ ನಡುವೆ, ಜನಸಾಗರದ ಮಧ್ಯೆ, ಕೈ ನೋವಿದ್ದರು ಅಭಿಮಾನಿಯೊಬ್ಬನ ಮನೆಯ ಹಸುವಿನ ಹಾಲು ಕರೆದಿರುವುದು ಡಿ ಬಾಸ್ ಅಭಿಮಾನಿಗಳ ಸಂತಸ ಹೇಳತೀರದು.