Don't Miss!
- Sports KKR vs RR: ಐಪಿಎಲ್ನ ಶತಕಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ಜೋಸ್ ಬಟ್ಲರ್
- News YouTube: ಬೆಂಗಳೂರಿನಲ್ಲಿ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ ಬಂಧನ: ಕಾರಣ ಇಲ್ಲಿದೆ!
- Technology ಅಧಿಕ ಬ್ಯಾಟರಿ ಇರುವ ಈ ಫೋನ್ ಬೆಲೆಯಲ್ಲಿ ಇಳಿಕೆ!..ಆಫರ್ ತಿಳಿದ್ರೆ, ವಾವ್ ಅಂತೀರಾ!
- Automobiles ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
- Finance ರಿಲಯನ್ಸ್ ಪವರ್ ಕಂಪೆನಿಯಲ್ಲಿ ಅನಿಲ್ ಅಂಬಾನಿಯ ಜೆಎಸ್ಡಬ್ಲ್ಯುನಿಂದ 132 ಕೋಟಿ ರೂ.ಗಳ ಹೂಡಿಕೆ
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಮಲತಾ ಪರ ರಜನಿಕಾಂತ್ ಪ್ರಚಾರ: ಏನಂದ್ರು ಮಂಡ್ಯ ಸೊಸೆ?
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ಅಂಬಿ ಪತ್ನಿ ಪರವಾಗಿ ನಟ ದರ್ಶನ್ ಮತ್ತು ಯಶ್ ನಿಂತಿದ್ದು, ಮತ್ತಷ್ಟು ಸ್ಟಾರ್ ನಟರು ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂಬ ಮಾತು ಕೇಳಿ ಬರ್ತಿದೆ.
ಅಂಬರೀಶ್ ಅವರಿಗೆ ಆಪ್ತರಾಗಿದ್ದ ಬಹುಭಾಷಾ ಸೂಪರ್ ಸ್ಟಾರ್ ಗಳು ಸುಮಲತಾ ಪರ ಪ್ರಚಾರಕ್ಕೆ ಬರಬಹುದು ಎಂಬ ನಿರೀಕ್ಷೆ ಇದೆ. ಸೂಪರ್ ಸ್ಟಾರ್ ರಜನಿಕಾಂತ್, ಚಿರಂಜೀವಿ, ಮೋಹನ್ ಬಾಬು, ಶತ್ರುಘ್ನ ಸಿನ್ಹಾ ಕರ್ನಾಟಕಕ್ಕೆ ಬರಬಹುದು ಎಂಬ ಲೆಕ್ಕಾಚಾರ ನಡೆಯುತ್ತಿದೆ.
ನಿರ್ಮಾಪಕ ಮುನಿರತ್ನ ಹೇಳಿಕೆ ವಿರುದ್ಧ ತಿರುಗಿಬಿದ್ದ ದರ್ಶನ್-ಅಂಬಿ ಫ್ಯಾನ್ಸ್
ಈ ಬಗ್ಗೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ''ರಜನಿಕಾಂತ್ ಅವರು ಬರಲ್ಲ. ನಾನು ಯಾರ ಬಳಿಯೂ ಪ್ರಚಾರಕ್ಕೆ ಬನ್ನಿ ಎಂದು ಕೇಳಿಲ್ಲ. ಅದೆಲ್ಲ ಸುಳ್ಳು' ಎಂದು ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಅಂಬಿ ಸಮಾಧಿ ಬಗ್ಗೆ ಮಾತನಾಡಿದ ಮುನಿರತ್ನಗೆ ಸುಮಲತಾ ತಿರುಗೇಟು
ಅಲ್ಲಿಗೆ ಸೂಪರ್ ಸ್ಟಾರ್ ಗಳು ಬರಲ್ಲ ಅನ್ನೋದು ಎಂದು ಪಕ್ಕಾ ಆಯ್ತು. ಹೀಗಾಗಿ, ಮಂಡ್ಯಕ್ಕೆ ದರ್ಶನ್ ಮತ್ತು ಯಶ್ ಅವರೇ ಸ್ಟಾರ್ ಪ್ರಚಾರಕರಾಗಿದ್ದು, ಸುಮಲತಾ ಅವರನ್ನ ಗೆಲ್ಲಿಸುವ ಸಂಪೂರ್ಣ ಜವಾಬ್ದಾರಿ ಹೊಂದಿದ್ದಾರೆ.
ದರ್ಶನ್ ಮತ್ತು ಯಶ್ ಅವರ ಪ್ರಚಾರ ಯಾವಾಗನಿಂದ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ.