Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶ್ ಬಗ್ಗೆ ನಿಖಿಲ್ 'ಬಾಡಿಗೆ' ಬಾಣ: ಸುಮಲತಾ ಹೇಳಿದ್ದೇನು?
Recommended Video
'ಬಾಡಿಗೆ ಕಟ್ಟೋಕೆ ಆಗದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ' ಎಂದು ಮಂಡ್ಯ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರ್, ನಟ ಯಶ್ ವಿರುದ್ಧ ವಾಗ್ದಾಳಿ ಮಾಡಿದ್ದರು. ಇದಕ್ಕೆ ನಟ ಯಶ್ ಕೂಡ ತಿರುಗೇಟು ನೀಡಿದ್ದರು.
ಇದೀಗ, ಸುಮಲತಾ ಕೂಡ ನಿಖಿಲ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಅಭ್ಯರ್ಥಿಯ ಮಾತನ್ನ ಖಂಡಿಸಿದ್ದಾರೆ. 'ನಿಖಿಲ್ ಅವರ ವಯಸ್ಸು ಚಿಕ್ಕಿದು, ಒಬ್ಬ ಸಾಧನೆ ಮಾಡಿರುವ ನಟನ ಬಗ್ಗೆ ಅಗೌರವವಾಗಿ ಮಾತನಾಡಿದ್ದು ಅವರ ಅಹಂಕಾರ ಸೂಚಿಸುತ್ತೆ' ಎಂದಿದ್ದಾರೆ.
'ಬಾಡಿಗೆ' ವಿಷ್ಯ ಕೆದಕಿದ ನಿಖಿಲ್ ಗೆ ಯಶ್ ತಿರುಗೇಟು
''ಯಶ್ ಬಗ್ಗೆ ಆ ಮಾತುಗಳು ಬೇಕಾಗಿರಲಿಲ್ಲ. ಅವರಿಗಿನ್ನು ವಯಸ್ಸು ಚಿಕ್ಕಿದು. ಅವರ ಕೂಡ ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡಿದ್ದಾರೆ. ಎರಡು ಸಿನಿಮಾ ಮಾಡಿದ್ದಾರೆ. ಒಬ್ಬ ಹಿರಿಯ ನಟ, ಒಂದಿಷ್ಟು ಸಾಧನೆ ಮಾಡಿರುವ ನಟನ ಬಗ್ಗೆ ಗೌರವ ಇಲ್ಲದೇ ಮಾತನಾಡಿರುವುದು ಅವರ ಅಹಂಕಾರವನ್ನ ಸೂಚಿಸುತ್ತೆ, ಅದು ಒಳ್ಳೆಯದಲ್ಲ' ಎಂದು ಸುಮಲತಾ ತಿರುಗೇಟು ನೀಡಿದ್ದಾರೆ.
'ಬಾಡಿಗೆ ಕಟ್ಟದವರು ಮಾತನಾಡ್ತಾರೆ': ಯಶ್ ವಿರುದ್ಧ ಗುಡುಗಿದ ನಿಖಿಲ್
ನಿಖಿಲ್ ಹೇಳಿಕೆಗೆ ಟಾಂಗ್ ನೀಡಿದ್ದ ಯಶ್ ''ನಾವು ಕಷ್ಟಪಟ್ಟು ದುಡಿದು ತಂದ ದುಡ್ಡಿನಿಂದ ಉತ್ತರ ಕರ್ನಾಟಕದ ಜನತೆಗೆ ಸಹಾಯ ಮಾಡಿದ್ದೀವಿ. ಆಗ ಯಾವ ಸರ್ಕಾರವೂ ಬಂದಿರಲಿಲ್ಲ. ಅದಕ್ಕೆ ನಮಗೆ ಬಾಡಿಗೆ ಕಟ್ಟಲು ಕಷ್ಟವಾಗಿದೆ. ಮುಂದಿನ ದಿನದಲ್ಲಿ ನಮಗೆ ಈ ಸ್ಥಿತಿ ಬರಬಾರದು ಎಂದು ಕೇಳಿಕೊಳ್ಳುತ್ತೇನೆ'' ಎಂದಿದ್ದರು.