Don't Miss!
- News Dingaleshwar Swamiji: ಕೋಟಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿಯ ಆಸ್ತಿ ವಿವರ ತಿಳಿಯಿರಿ
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬೆಟ್ಟಿಂಗ್ ಆಡಬೇಡಿ ಪ್ಲೀಸ್' ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಮನವಿ
Recommended Video
ಮಂಡ್ಯ ಚುನಾವಣೆ ಅಭ್ಯರ್ಥಿಗಳಿಗೆ ಮಾತ್ರ ಪ್ರತಿಷ್ಠೆಯಾಗಿಲ್ಲ, ಮಂಡ್ಯ ಜನರಿಗೂ ಬಹುದೊಡ್ಡ ಪ್ರತಿಷ್ಠೆ. ಈ ಪ್ರತಿಷ್ಠೆಯ ಪ್ರತಿರೂಪವಾಗಿ ಮಂಡ್ಯ ಕ್ಷೇತ್ರದಲ್ಲಿ ಬೆಟ್ಟಿಂಗ್ ಸದ್ದು ಜೋರಾಗಿ ಕೇಳಿಬರುತ್ತಿದೆ. ನಿಖಿಲ್ ಮತ್ತು ಸುಮಲತಾ ಇಬ್ಬರಲ್ಲಿ ಯಾರು ಗೆಲ್ಲುತ್ತಾರೆ ಎಂದು ಬಾಜಿ ಶುರುವಾಗಿದೆ.
ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್ ಕಟ್ಟುತ್ತಿರುವ ಬೆಂಬಲಿಗರು, ಹಣ, ಜಮೀನು ಸೇರಿದಂತೆ ಇತರೆ ವಸ್ತುಗಳನ್ನ ಬಾಜಿಗೆ ಇಡುತ್ತಿದ್ದಾರಂತೆ. ಈ ಬಗ್ಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ''ಇದನ್ನ ನಾನು ಖಂಡಿಸುತ್ತೇನೆ'' ಎಂದಿದ್ದಾರೆ.
'ದಯವಿಟ್ಟು ಯಾರೂ ಬೆಟ್ಟಿಂಗ್ ಆಡಬೇಡಿ. ನಿಮ್ಮ ಜೀವನವನ್ನ ರಿಸ್ಕ್ ನಲ್ಲಿ ಇಡಬೇಡಿ. ನಿಮ್ಮ ಲೈಫ್ ಬಗ್ಗೆ ನೀವು ನೋಡಬೇಕು. ಒಮ್ಮೆ ಕಳೆದುಕೊಂಡಿದ್ದನ್ನ ಮತ್ತೆ ಪಡೆಯೋಕೆ ಆಗಲ್ಲ. ಇದು ಆರೋಗ್ಯಕರ ಬೆಳವಣಿಗೆಯಲ್ಲ'' ಎಂದು ತಿಳಿಸಿದ್ದಾರೆ.
ಮೊದಲು ವಿಷ್ಣು ಸ್ಮಾರಕ ಆಗಲಿ, ಆಮೇಲೆ ಅಂಬಿ ಸ್ಮಾರಕ ಮಾಡಲಿ: ಸುಮಲತಾ
ಮಂಡ್ಯದಲ್ಲಿ ಶೇಕಡಾ 80ರಷ್ಟು ಮತದಾನವಾಗಿದ್ದು, ಫಲಿತಾಂಶದ ಮೇಲೆ ಭಾರಿ ಕುತೂಹಲವಿದೆ. ಇಲ್ಲಿಯವರೆಗೂ ಯಾರೊಬ್ಬರು ಗೆಲ್ಲುವ ಅವಕಾಶ ಇದೆ ಎಂಬುದೇ ಗೊತ್ತಾಗದಷ್ಟು ಪೈಪೋಟಿ ಮಂಡ್ಯದಲ್ಲಿದೆ.
ನಿಖಿಲ್ ಗೆದ್ದರೇ ದರ್ಶನ್-ಯಶ್ ಗೆ ಎದುರಾಗುವ ಸವಾಲುಗಳು ಸಾಮಾನ್ಯವಲ್ಲ.!
ಮತ್ತೊಂದೆಡೆ ಚುನಾವಣೆ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡವರ ವಿರುದ್ಧ ಗೂಂಡಾ ಅಥವಾ ಕೋಕಾ ಕಾಯ್ದೆ ಜಾರಿಗೊಳಿಸುವಂತೆ ಡಿಜಿಪಿ ನೀಲಮಣಿ ಎನ್ ರಾಜು ಅವರು ಆದೇಶ ಹೊರಡಿಸಿದ್ದಾರೆ.