Don't Miss!
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Sports RCB vs KKR: ಚಿನ್ನಸ್ವಾಮಿಯಲ್ಲಿ ಮತ್ತೊಂದು ರೋಚಕ ಪಂದ್ಯ; ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮಿಂಗ್
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಸರು ಹೇಳದೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುಮಲತಾ ವಾಗ್ದಾಳಿ
ಸಂಸದೆ ಸುಮಲತಾ-ಸಂಸದ ಪ್ರತಾಪ್ ಸಿಂಹ ನಡುವಿನ ಶೀಥಲ ಸಮರ ಮುಂದುವರೆದಿದೆ. ಇಂದು (ನವೆಂಬರ್ 24) ಮದ್ದೂರಿನ ಹೊಟ್ಟೆಗೌಡನ ದೊಡ್ಡಿಯಲ್ಲಿ ನಡೆದ ಅಂಬಿ ಗುಡಿ ಅನಾವರಣ ಕಾರ್ಯಕ್ರಮದಲ್ಲಿ ಸುಮಲತಾ ಅವರು ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್ ನೀಡಿದ್ದಾರೆ.
Recommended Video
''ಅಂಬಿ ಹೆಸರು ಹೇಳದೆ ಮಾತನಾಡಲು ಬರುವುದಿಲ್ಲ'' ಎಂದಿದ್ದವರಿಗೆ ಹೇಳುತ್ತಿದ್ದೇನೆ, ನಾನು ಅಂಬಿ ಹೆಸರು ಯಾಕೆ ಬಳಸಬಾರದು, ನನ್ನ ಹೆಸರಲ್ಲೇ ಅಂಬಿ ಹೆಸರಿದೆ' ಎಂದರು ಅಬ್ಬರಿಸಿದರು ಸುಮಲತಾ.
ಹೊಟ್ಟೆಗೌಡನ ದೊಡ್ಡಿಯಲ್ಲಿ ಅಂಬಿ ಗುಡಿ: ಹಬ್ಬದಲ್ಲಿ ಪಾಲ್ಗೊಂಡ ದರ್ಶನ್, ಸುಮಲತಾ
'ಅಂಬಿ ಹೆಸರೇ ನನ್ನ ಸ್ಫೂರ್ತಿ, ಅಂಬರೀಶ್ ಹೆಸರೇ ನನ್ನ ಧೈರ್ಯ' ಎಂದ ಸುಮಲತಾ ಪರೋಕ್ಷವಾಗಿ ಪ್ರತಾಪ್ ಸಿಂಹ ಹೇಳಿಕಗೆ ಟಾಂಗ್ ನೀಡಿದರು.
ಮಂಡ್ಯ ಸಂಸದೆ ಸುಮಲತಾ ಸರಿಯಾಗಿ ಕೆಲಸ ಮಾಡುತ್ತಿಲ್ಲ, ಏನೇ ಕೆಲಸ ಇದ್ದರೂ ನನ್ನ ಬಳಿ ಹೇಳಿ ಎಂದು ಪ್ರತಾಪ್ ಸಿಂಹ ಫೋನಿನಲ್ಲಿ ಹೇಳುತ್ತಿದ್ದ ವಿಡಿಯೋ ಒಂದು ವೈರಲ್ ಆಗಿತ್ತು. ಇದಕ್ಕೆ ಸಂಸದೆ ಸುಮಲತಾ, 'ಅಂಬರೀಶ್ ಇದ್ದಾಗ ತುಟಿ ಬಿಚ್ಚಲು ಹೆದರುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ' ಎಂದು ಸುಮಲತಾ ಹೇಳಿದ್ದರು.
ಅಂಬರೀಶ್ ಅವರ ಎರಡನೇ ಪುಣ್ಯಸ್ಮರಣೆಯಾದ ಇಂದು ಸಂಸದ ಪ್ರತಾಪ್ ಸಿಂಹ ಇಂದು ಅಂಬರೀಶ್ ಅವರನ್ನು ನೆನೆಸಿ ಟ್ವೀಟ್ ಮಾಡಿದ್ದಾರೆ.