Don't Miss!
- News ಸ್ಟಾರ್ ಪ್ರಚಾರಕರ ಜೊತೆ ವೇದಿಕೆ ಹಂಚಿಕೊಂಡರೆ ವೆಚ್ಚ ಅಭ್ಯರ್ಥಿ ಖಾತೆಗೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಕುಟುಂಬ ಕಲಹದ ಬಗ್ಗೆ ಸುಮಲತಾ ಪ್ರತಿಕ್ರಿಯೆ
Recommended Video
''ಇಂತಹ ಸುದ್ದಿಗಳು ಬರುತ್ತಲೇ ಇರುತ್ತದೆ. ನಾನು ಇಂತಹ ಸುದ್ದಿಗಳಿಗೆ ಪ್ರಾಮುಖ್ಯತೆ ನೀಡುವುದಿಲ್ಲ.'' ಎಂದು ದರ್ಶನ್ ಕುಟುಂಬ ಕಲಹದ ಬಗ್ಗೆ ನಟಿ, ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಡುವೆ ಮತ್ತೆ ಜಗಳ ಆಗಿದ್ದು, ದರ್ಶನ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಸುದ್ದಿ ಕೆಲವು ದಿನಗಳಿಂದ ಇತ್ತು. ಹಿರಿಯ ಪತ್ರಕರ್ತ ರವಿಬೆಳಗೆರೆ ಕೂಡ ಅದೇ ವಿಷಯದ ಬಗ್ಗೆ ಮಾತನಾಡಿದ್ದರು. ಇದರೊಂದಿಗೆ, ದರ್ಶನ್ ಹಾಗೂ ವಿಜಯಲಕ್ಷ್ಮಿ ಸಂಧಾನ ಸುಮಲತಾ ಮೂಲಕ ನಡೆಯುತ್ತಿದೆ ಎನ್ನಲಾಗಿತ್ತು.
ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಬುಸುಗುಟ್ಟಿದ 'ಬ್ಲ್ಯಾಕ್ ಕೋಬ್ರ'
ಆದರೆ, ಈ ಘಟನೆಯ ಬಗ್ಗೆ ಮಾತನಾಡಿರುವ ಸುಮಲತಾ, ಇದೆಲ್ಲ ಸುಳ್ಳು ಎಂದಿದ್ದಾರೆ. ''ನಾನು ಯಾವ ವಿಡಿಯೋವನ್ನು ನೋಡಿಲ್ಲ. ಇಂತಹ ಸುದ್ದಿಗಳು ಬರುತ್ತಲೇ ಇರುತ್ತದೆ. ನಾನು ಇಂತಹ ಸುದ್ದಿಗಳಗೆ ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವರು ಬೇಕು ಅಂತಲೇ ಸೃಷ್ಟಿ ಮಾಡುತ್ತಾರೆ. ಇದರ ಮೂಲಕ ಪ್ರಚಾರ ಪಡೆಯುತ್ತಾರೆ. ಗಂಡ - ಹೆಂಡತಿ ಮಧ್ಯೆ ಇಂತಹ ಸುದ್ದಿ ಹಬ್ಬಿಸುವುದು ತಪ್ಪು ಮನೆ ಮುರಿಸಯುವ ಕೆಲಸಗಳನ್ನು ಯಾರು ಮಾಡಬಾರದು.'' ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಅಂಬರೀಶ್ ಅವರ 9ನೇ ತಿಂಗಳ ಪುಣ್ಯ ತಿಥಿ ಇದ್ದ ಕಾರಣ ಅಂಬಿ ಸಮಾಧಿಗೆ ಸುಮಲತಾ ಪೂಜೆ ಸಲ್ಲಿಸಿದರು. ಈ ವೇಳೆ ದರ್ಶನ್ ವಿಚಾರವಾಗಿಯೂ ಮಾಡತನಾಡಿದರು.