Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಮಲತಾ ವೋಟ್ ಕಸಿದ್ರಾ ಮೂವರು ಸುಮಲತಾಗಳು?
ಈ ಭಾರಿಯ ಲೋಕಸಾಭ ಚುನಾವಣೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಕ್ಷೇತ್ರ ಮಂಡ್ಯ. ಸ್ವತಂತ್ರ ಅಭ್ಯರ್ಥಿ ಸುಮಲತಾ ಆರಂಭಿಕ ಮುನ್ನಡೆ ಕಂಡರು ನಂತರ ನಿಖಿಲ್ ಕುಮಾರ ಸ್ವಾಮಿ 2 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಆದ್ರೀಗ ಸುಮಲತಾ ಮತ್ತೆ ಮುನ್ನಡೆ ಸಾಧಿಸಿದ್ದಾರೆ.
ಇಬ್ಬರ ನಡುವೆ ತೀರಾ ಪೈಪೋಟಿ ಏರ್ಪಟ್ಟಿದೆ. ಮೊದಲ ಸುಮಲತಾ ಲೀಡ್ ನಲ್ಲಿ ಇದ್ದು ನಂತರ ಮತ್ತೆ ನಿಖಿಲ್ ಮುಂದೆ ಇದ್ದರು ಆದ್ರೀಗ ಸುಮಲತಾ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದ್ರೆ ದುರಂತ ಅಂದ್ರೆ ಸಮಲತಾ ಹಿನ್ನಡೆಗೆ ಕಾರಣವಾಗಿದ್ದು ಮೂವರು ಸುಮಲತಾಗಳು ಎಂದು ಹೇಳಲಾಗುತ್ತಿದೆ.
ಸುಮಲತಾ ಪಾಲಿನ ವೋಟ್ ಮೂವರು ಸಮಲತಾ ಪಾಲಾಗಿರುವ ಸಾಧ್ಯತೆ ಇದೆ. ಕೆಲವೆ ಅಂತರಗಳ ನಡುವೆ ನಿಖಿಲ್ ಮತ್ತು ಸುಮಲತಾ ನಡುವೆ ಪೈಪೋಟಿ ನಡೆಯುತ್ತಿದೆ. ಬೆಳಗ್ಗೆಯಿಂದ ಮುನ್ನಡೆ ಕಾಯ್ದುಕೊಂಡಿದ್ದ ನಿಖಿಲ್ ಗೆ ಈಗ ಹಿನ್ನಡೆಯಾಗಿದೆ. 1300 ಮತಗಳ ಅಂತರದಲ್ಲಿ ಸುಮಲತಾ ಮತ್ತೆ ಮುನ್ನಡೆ ಸಾಧಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಭಾರಿ ಕುತೂಹಲ ಮೂಡಿಸಿದ ಕ್ಷೇತ್ರ ಇದಾಗಿತ್ತು. ನಿಖಿಲ್ ಮತ್ತು ಸುಮಲತಾ ನಡುವೆ ಕೆಲವೇ ಕೆಲವು ಮತಗಳ ಅಂತರವಿದೆ. ಹಾಗಾಗಿ ಕೊನೆಯದಾಗಿ ಗೆಲುವಿನ ಮಾಲೆ ಯಾರಿಗೆ ಬೀಳುತ್ತೆ ಎನ್ನುವುದು ಕೆಲವೆ ಸಮಯದಲ್ಲಿ ಬಹಿರಂಗವಾಗಲಿದೆ.