Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ರಾಜವೀರ ಮದಕರಿನಾಯಕ' ಚಿತ್ರದಲ್ಲಿ ಸಂಸದೆ ಸುಮಲತಾ?
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ 'ರಾಜವೀರ ಮದಕರಿನಾಯಕ' ಸಿನಿಮಾದ ಮುಹೂರ್ತ ಇಂದು ಬೆಳ್ಳಂಬೆಳಗ್ಗೆ ನೆರವೇರಿದೆ. ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ 'ರಾಜವೀರ ಮದಕರಿನಾಯಕ' ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದುವರೆಗೂ ಚಿತ್ರಕ್ಕೆ 'ಗಂಡುಗಲಿ ಮದಕರಿನಾಯಕ' ಎಂದು ಹೇಳಲಾಗುತ್ತಿತ್ತು. ಆದರೆ ಇವತ್ತು ಚಿತ್ರದ ಅಧಿಕೃತ ಟೈಟಲ್ ಬಹಿರಂಗವಾಗಿದೆ.
ವಿಶೇಷ ಅಂದರೆ 'ರಾಜವೀರಾ ಮದಕರಿನಾಯಕ' ಚಿತ್ರದಲ್ಲಿ ಹಿರಿಯ ನಟಿ, ಸಂಸದೆ ಸುಮಲತಾ ಅಭಿನಯಿಸುತ್ತಾರೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿದೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಸುಮಲತಾ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಮಲತಾ ನಟಿಸುತ್ತಿದ್ದಾರೆ ಅಂದರೆ ಸಂಸದೆ ಆದ ನಂತರ ಮೊದಲ ಬಾರಿಗೆ ಬಣ್ಣಹಚ್ಚುತ್ತಿದ್ದಾರೆ.
'ಗಂಡುಗಲಿ ಮದಕರಿ ನಾಯಕ' ಚಿತ್ರದ ಟೈಟಲ್ ಅಲ್ಲ: ಅಧಿಕೃತ ಟೈಟಲ್ ಬಹಿರಂಗ
ಇಂದು ಬೆಳಗ್ಗೆ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಮಲತಾ ಅವರನ್ನು ಮಾಧ್ಯಮದವರು ಈ ಬಗ್ಗೆ ಕೇಳಿದಾಗ "ನೀವು ನಿರ್ದೇಶಕರನ್ನು ಕೇಳಬೇಕು, ನಾನು ಹೇಳಲಿಕ್ಕೆ ಆಗಲ್ಲ" ಎಂದು ಹೇಳಿದ್ದಾರೆ. ಇನ್ನು ಪಕ್ಕದಲ್ಲಿ ಇದ್ದ ದರ್ಶನ್ "ಸಿನಿಮಾಗೆ ಪ್ರಮುಖ ಪಾತ್ರ ಮಾತ್ರವಲ್ಲ, ಬಹುಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.
ಸುಮಲತಾ ಅಭಿನಯದ ಬಗ್ಗೆ ಚಿತ್ರತಂಡ ಇನ್ನು ಅಧಿಕೃತ ಗೊಳಿಸಿಲ್ಲ. ಆದರೆ ಚಿತ್ರದಲ್ಲಿ ಸುಮಲತ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನುತ್ತಿವೆ ಮೂಲಗಳು. ರಾಜವೀರ ಮದಕರಿನಾಯಕ ಚಿತ್ರಕ್ಕೆ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್, ರಾಕ್ ಲೈನ್ ವೆಂಕಟೇಶ್ ನಿರ್ಮಾಣ, ಹಸಲೇಖ ಸಂಗೀತ, ಅಶೋಕ್ ಕಶ್ಯಪ್ ಛಾಯಾಗ್ರಹಣ ಬಿಟ್ಟರೆ ಸದ್ಯಕ್ಕೆ ಇನ್ಯಾರು ಫೈನಲ್ ಆಗಿಲ್ಲ.
ಇಂದಿನಿಂದ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು ಪಾತ್ರಕ್ಕಾಗಿ ದರ್ಶನ್ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೆ ಚಿತ್ರೀಕರಣಕ್ಕೆ ಚಿತ್ರದುರ್ಗದಲ್ಲಿ ಕೋಟಿ ಕೋಟಿ ವೆಚ್ಚದ ಅದ್ದೂರಿ ಸೆಟ್ ಕೂಡ ನಿರ್ಮಾಣವಾಗುತ್ತಿದೆ. ಸಧ್ಯದಲ್ಲೇ ಚಿತ್ರೀಕರಣಕ್ಕೆ ಹೊರಡಲಿದ್ದು ದರ್ಶನ್ ರಾಜವೀರ ಮದಕರಿನನಾಯಕನಾಗಿ ಆಳ್ವಿಕೆ ಮಾಡಲಿದ್ದಾರೆ.