Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಛಾಯಾಗ್ರಾಹಕ ಸುಂದರನಾಥ್ ಸುವರ್ಣ ಬೆಳ್ಳಿಹೆಜ್ಜೆ
ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಛಾಯಾಗ್ರಾಹಕರ ಕೈಚಳಕ ಮಹತ್ವದ ಪಾತ್ರವಹಿಸುತ್ತದೆ. ಕಲಾವಿದರ ಹಾವಭಾವಗಳು, ಸಂದರ್ಭ ಸನ್ನಿವೇಶಗಳನ್ನು ಸಮರ್ಥವಾಗಿ ತೆರೆಯ ಮೇಲೆ ತರುವ ಜಾಣ್ಮೆ ಅವರಿಗೆ ಇರಬೇಕು. ಹಾಗಿದ್ದರೆ ಮಾತ್ರ ಅವರು ಸಮರ್ಥ ಛಾಯಾಗ್ರಾಹಕರಾಗಲು ಸಾಧ್ಯ.
ಅಂತಹ ಒಬ್ಬ ಪ್ರತಿಭಾನ್ವಿತ ಛಾಯಾಗ್ರಾಹಕ ಎಂದರೆ ಸುಂದರನಾಥ ಸುವರ್ಣ. 'ಅಪರೂಪದ ಅತಿಥಿ' ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಟ್ಟ ಅವರು ಬಳಿಕ ಹಲವಾರು ಚಿತ್ರಗಳಿಗೆ ಅತ್ಯುತ್ತಮ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಸ್ವತಃ ಚಿತ್ರ ನಿರ್ದೇಶಕರೂ ಆಗಿರುವ ಕಾರಣ ಅವರ ಕ್ಯಾಮೆರಾ ಕಣ್ಣು ಬಲು ಚುರುಕು.
ಆರಂಭ, ಟೈಗರ್, ಅಗ್ನಿ ಪರ್ವ, ಶ್ರೀ ಮಂಜುನಾಥ, ಮುಸ್ಸಂಜೆ ಮಾತು, ಚೆಲ್ಲಾಟ, ಅಮೃತವರ್ಷಿಣಿ, ಗಂಡುಗಲಿ ಕುಮಾರರಾಮ, ಕಿಲಾಡಿ ತಾತ, ಆಪರೇಷನ್ ಅಂತ, ಅನುರಾಗ ಸಂಗಮ, ಲಾಕಪ್ ಡೆತ್, ಗೋಲಿಬಾರ್, ನಮ್ಮರ ಮಂದಾರ ಹೂವೆ...ಹೀಗೆ ಸುವರ್ಣ ಅವರ ಚಿತ್ರಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಗುತ್ತದೆ.
ಇಷ್ಟೆಲ್ಲಾ ಪೀಠಿಕೆ ಹಾಕಲು ಕಾರಣವೂ ಇದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ 'ಬೆಳ್ಳಿಹೆಜ್ಜೆ' ಕಾರ್ಯಮದಲ್ಲಿ ಈಗಾಗಲೆ ಹಲವಾರು ಕಲಾವಿದರು ತಮ್ಮ ಹೆಜ್ಜೆ ಗುರುತುಗಳನ್ನು ತಮ್ಮ ಅಭಿಮಾನಿಗಳ ಜೊತೆ ಮೆಲುಕು ಹಾಕಿದ್ದಾರೆ. ಆದರೆ ತಂತ್ರಜ್ಞರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಬಲು ಅಪರೂಪ ಎನ್ನಬಹುದು.
ಅಕಾಡೆಮಿ ಅಧಕ್ಷ ಸ್ಥಾನವನ್ನು ತಾರಾ ಅನುರಾಧಾ ಅಲಂಕರಿಸಿದ ಮೇಲೆ 'ಬೆಳ್ಳಿಹೆಜ್ಜೆ' ಕಾರ್ಯಕ್ರಮವನ್ನು ಸೊಗಸಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಈ ಹಿಂದೆ ಅಕಾಡೆಮಿ ಅಧಕ್ಷರಾಗಿದ್ದ ಟಿ.ಎಸ್.ನಾಗಾಭರಣ ಅವರು ಅಪರೂಪದ 'ಬೆಳ್ಳಿಹೆಜ್ಜೆ' ಕಾರ್ಯಕ್ರಮವನ್ನು ಆರಂಭಿಸಿದ್ದರು.
ಈ ಬಾರಿಯ ಬೆಳ್ಳಿಹೆಜ್ಜೆ ಕಾರ್ಯಕ್ರಮ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಬಾದಾಮಿ ಹೌಸ್ನ ಪ್ರಿಯದರ್ಶಿನಿ ಹಾಲ್ನಲ್ಲಿ ನಡೆಯಲಿದೆ. ಜೂ.23ರಂದು ಸಂಜೆ 5 ಗಂಟೆಗೆ ಸರಿಯಾಗಿ ಛಾಯಾಗ್ರಾಹಕ ಸುಂದರನಾಥ್ ಸುವರ್ಣ ಅವರನ್ನು ಮುಖಾಮುಖಿಯಾಗಿ ಭೇಟಿಯಾಗಬಹುದು. (ಒನ್ಇಂಡಿಯಾ ಕನ್ನಡ)