Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುನಿಲ್ ಶೆಟ್ಟಿ ಬಗ್ಗೆ ಕೇಳಿಬಂದಿದ್ದ ಸುದ್ದಿ ಸುಳ್ಳು
Recommended Video
ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರದಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಇದು ಇವರ ಮೊದಲ ಕನ್ನಡ ಸಿನಿಮಾ. ಇದೀಗ, ಎರಡನೇ ಕನ್ನಡವನ್ನ ಒಪ್ಪಿಕೊಂಡಿದ್ದಾರೆ ಎನ್ನಲಾಗಿತ್ತು. ಆದ್ರೆ, ಅದು ಸುಳ್ಳು ಎಂದು ಸ್ವತಃ ಸುನಿಲ್ ಶೆಟ್ಟಿ ಅವರೇ ಖಚಿತ ಪಡಿಸಿದ್ದಾರೆ.
ಸಂಚಾರಿ ವಿಜಯ್ ಅಭಿನಯದ 'ಪಿರಂಗಿಪುರ' ಚಿತ್ರತಂಡ ಇತ್ತೀಚಿಗಷ್ಟೆ ಸುನಿಲ್ ಶೆಟ್ಟಿ ಅವರನ್ನ ಭೇಟಿ ಮಾಡಿತ್ತು. ಈ ವೇಳೆ ಸಿನಿಮಾ ಬಗ್ಗೆ ಚರ್ಚೆಯೂ ಆಗಿದೆ. ಆದ್ರೆ, ಸುನಿಲ್ ಈ ಚಿತ್ರದಲ್ಲಿ ಅಭಿನಯಿಸುವುದಾಗಿಯೂ ಮತ್ತು ಕಾಲ್ ಶೀಟ್ ಕೊಟ್ಟಿರುವುದಾಗಿಯೂ ಹರಿದಾಡಿದ್ದ ಸುದ್ದಿ ಕೇವಲ ವದಂತಿ.
ಈ ಬಗ್ಗೆ ಟ್ವೀಟ್ ಮಾಡಿರುವ ಸುನಿಲ್ ಶೆಟ್ಟಿ ''ಸದ್ಯಕ್ಕೆ ನಾನು ಕೇವಲ 'ಪೈಲ್ವಾನ್' ಚಿತ್ರವನ್ನ ಮಾತ್ರ ಒಪ್ಪಿಕೊಂಡಿರುವುದು ಮತ್ತು ಕನ್ನಡದಲ್ಲಿ ಅಭಿನಯಿಸುತ್ತಿರುವುದು. ಬೇರೆ ಯಾವ ಚಿತ್ರಕ್ಕೂ ನಾನು ಒಪ್ಪಿಗೆ ಕೊಟ್ಟಿಲ್ಲ. ಆದ್ರೆ, ಹೆಚ್ಚು ಕನ್ನಡ ಸಿನಿಮಾಗಳನ್ನ ಮಾಡುವ ಆಸೆ ಇದೆ'' ಎಂದು ತಿಳಿಸಿದ್ದಾರೆ.
ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರದಲ್ಲಿ ಬಹುಮುಖ್ಯಪಾತ್ರವೊಂದನ್ನ ಸುನಿಲ್ ಶೆಟ್ಟಿ ನಿರ್ವಹಿಸುತ್ತಿದ್ದು, ಈಗಾಗಲೇ ಚಿತ್ರೀಕರಣದಲ್ಲೂ ಭಾಗಿಯಾಗಿದ್ದಾರೆ. ಸದ್ಯಮ ಸುದೀಪ್ ಮತ್ತು ಟೀಮ್ ಸರ್ಬಿಯಾ ದೇಶದ ಬೆಲ್ ಗ್ರೇಡ್ ನಲ್ಲಿದ್ದಾರೆ.
ಮತ್ತೊಂದೆಡೆ ಸಂಚಾರಿ ವಿಜಯ್ ಅಭಿನಯದ 'ಪಿರಂಗಿಪುರ' ಐದು ಭಾಷೆಗಳಲ್ಲಿ ಸಿದ್ಧವಾಗುತ್ತಿದ್ದು, ಮೇಕಿಂಗ್ ವಿಚಾರದಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ.