Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪೈಲ್ವಾನ್' ತಂಡ ಸೇರುವ ಮೊದಲ ಸುನೀಲ್ ಶೆಟ್ಟಿ ಮಾಡಿದ ಟ್ವೀಟ್
Recommended Video
ಬಾಲಿವುಡ್ ಸೂಪರ್ ಸ್ಟಾರ್ ನಟ ಸುನೀಲ್ ಶೆಟ್ಟಿ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡ್ತಿದ್ದಾರೆ. ಕಿಚ್ಚ ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸುನೀಲ್ ಶೆಟ್ಟಿ, ಕನ್ನಡ ಮೊದಲ ಸಿನಿಮಾ ಮಾಡಲು ಬಹಳ ಕಾತುರದಿಂದ ಕಾಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ''ಚೊಚ್ಚಲ ಚಿತ್ರದ ಬಗ್ಗೆ ತುಂಬ ನರ್ವಸ್ ಆಗಿದ್ದೀನಿ, ಕಾತುರದಿಂದ ಎದುರು ನೋಡುತ್ತಿದ್ದೇನೆ'' ಎಂದು ಅಭಿಪ್ರಾಯ ಹೊರಹಾಕಿದ್ದಾರೆ.
ಮೊದಲ ಹಂತ ಚಿತ್ರೀಕರಣ ಮುಗಿಸಿದ ಪೈಲ್ವಾನ್ !
ಸದ್ಯ, ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಈಗ ಎರಡನೇ ಹಂತದ ಶೂಟಿಂಗ್ ಶುರುವಾಗಬೇಕಿದೆ. ಕಳೆದ 15 ದಿನಗಳಿಂದ ಚೆನೈನಲ್ಲಿ ಶೂಟಿಂಗ್ ಮಾಡಿರುವ ಟೀಂ ಸದ್ಯ ಬೆಂಗಳೂರಿಗೆ ವಾಪಾಸ್ ಆಗಿದೆ. ಈಗ ಎರಡನೇ ಹಂತದಲ್ಲಿ ಸುನೀಲ್ ಶೆಟ್ಟಿ ಚಿತ್ರತಂಡ ಸೇರಲಿದ್ದಾರೆ.
Looking forward my lil brother! Excited & nervous too! My debut after all 😊
— Suniel Shetty (@SunielVShetty) June 1, 2018
ಸುನೀಲ್ ಶೆಟ್ಟಿ ಬಾಲಿವುಡ್ ನಟ ಎನ್ನುವುದಕ್ಕಿಂತ ಕನ್ನಡಿಗ ಎನ್ನುವುದು ವಿಶೇಷ. ಯಾಕಂದ್ರೆ, ಸುನೀಲ್ ಶೆಟ್ಟಿ ಹುಟ್ಟಿದ್ದು ಮಂಗಳೂರಿನ ತುಳು ಕುಟುಂಬದಲ್ಲಿ. ಆದ್ರೆ, ವೃತ್ತಿ ಆರಂಭಿಸಿದ್ದು ಮಾತ್ರ ಹಿಂದಿ ಚಿತ್ರರಂಗದಲ್ಲಿ 1992ರಲ್ಲಿ 'ಬಲ್ವಾನ್' ಚಿತ್ರದ ಮೂಲಕ ಕೆರಿಯರ್ ಶುರು ಮಾಡಿದ ನಟ ಸುಮಾರು 26 ವರ್ಷಗಳ ಕಾಲ ಬಾಲಿವುಡ್ ನಲ್ಲಿ ನಟಿಸಿದ್ದಾರೆ.
ತಮಿಳಿನಲ್ಲೂ ಅಭಿನಯಿಸಿರುವ ಸುನೀಲ್ ಶೆಟ್ಟಿ, ಇದುವರೆಗೂ ಯಾವುದೇ ಕನ್ನಡ ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಸುದೀಪ್ ಸಿನಿಮಾ ಮೂಲಕ ನಮ್ ಇಂಡಸ್ಟ್ರಿಗೆ ಲಗ್ಗೆ ಇಡ್ತಿದ್ದಾರೆ.
ಇನ್ನುಳಿದಂತೆ ಸುದೀಪ್ ಗೆ ನಾಯಕಿಯಾಗಿ ಮುಂಬೈನ ಆಕಾಂಕ್ಷ ಸಿಂಗ್ ಆಯ್ಕೆ ಆಗಿದ್ದು ಕಬೀರ್ ದುಹಾನ್ ಸಿಂಗ್ ಕೂಡ ಸಿನಿಮಾದ ಮುಖ್ಯ ಪಾತ್ರದಲ್ಲಿ ಅಭಿನಯ ಮಾಡುತ್ತಿದ್ದಾರೆ. ಹೆಬ್ಬುಲಿ ಕೃಷ್ಣ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದು, ಅವರೇ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.