Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದರ್ಬಾರ್' ಮುಗಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ 'ದರ್ಬಾರ್' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಂತರ ರಜನಿಕಾಂತ್ ಸಿನಿಮಾ ಮಾಡುವುದು ಅನುಮಾನ ಎಂದು ಹೇಳಲಾಗಿತ್ತು. ಆದ್ರೆ ದರ್ಬಾರ್ ಶುರು ಮಾಡುವ ಮೂಲಕ ಸಿನಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದರು.
ಆದ್ರೀಗ ಚಿತ್ರತಂಡದ ಕಡೆಯಿಂದ ಬಂದ ಸುದ್ದಿ ಅಂದ್ರೆ ತಲೈವಾ ದರ್ಬಾರ್ ಮುಗಿಸಿದ್ದಾರಂತೆ. ಬಿಡುವಿಲ್ಲದೆ ಚಿತ್ರೀಕರಣ ಮಾಡುತ್ತಿದ್ದ ರಜನಿಕಾಂತ್ ಭಾಗದ ಚಿತ್ರೀಕರಣ ಇಂದಿಗೆ ಮುಕ್ತಾಯವಾಗಿದೆ. ಈ ಬಗ್ಗೆ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದೆ.
'ದರ್ಬಾರ್' ನಂತರ ರಜನಿ ಮುಂದಿನ ಚಿತ್ರಕ್ಕೆ ಡೈರೆಕ್ಟರ್ ಫಿಕ್ಸ್
ಸದ್ಯ ದರ್ಬಾರ್ ಮುಗಿಸಿರುವ ಸೂಪರ್ ಸ್ಟಾರ್ ಮುಂದಿನ ಸಿನಿಮಾದ ತಯಾರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಎ.ಆರ್ ಮುರುಗದಾಸ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ದರ್ಬಾರ್ ಚಿತ್ರದ ಮೇಲೆ ಅಭಿಮಾನಿಗಳು ಬಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಚಿತ್ರದಲ್ಲಿ ರಜನಿಕಾಂತ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅನೇಕ ವರ್ಷಗಳ ಬಳಿಕ ಸೂಪರ್ ಸ್ಟಾರ್ ಖಾಕಿ ಧರಿಸಿ ಖದರ್ ತೋರಿಸಲು ಸಜ್ಜಾಗಿದ್ದಾರೆ. ರಜನಿಕಾಂತ್ ಗೆ ನಾಯಕಿಯಾಗಿ ನಯನತಾರಾ ಕಾಣಿಸಿಕೊಂಡಿದ್ದಾರೆ. ಇನ್ನು ಸೂಪರ್ ಸ್ಟಾರ್ ವಿರುದ್ಧ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅಬ್ಬರಿಸಿದ್ದಾರೆ.
ಸದ್ಯ ದರ್ಬಾರ್ ಚಿತ್ರೀಕರಣ ಮುಗಿಸಿರುವ ತಲೈವಾ ಮುಂದಿನ ಸಿನಿಮಾದ ಬಗ್ಗೆಯು ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ನಿರ್ದೇಶಕ ಸಿರುತೈ ಶಿವ ಜೊತೆ ಸೂಪರ್ ಸ್ಟಾರ್ ಮುಂದಿನ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ಇನ್ನು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.