Don't Miss!
- News Gold Price: ಗಗನ ಕುಸುಮವಾದ ಬಂಗಾರ: ಮಾರ್ಚ್ 28ರ ಚಿನ್ನ ಮತ್ತು ಬೆಳ್ಳಿ ದರ ವಿವರ
- Sports SRH vs MI: ಇತಿಹಾಸದ ಪುಟ ಸೇರಿದ ಪಂದ್ಯ; ಈ ಪಂದ್ಯದಲ್ಲಿ ದಾಖಲಾದ ರೆಕಾರ್ಡ್ ಪಟ್ಟಿ ಇಲ್ಲಿದೆ
- Finance 7th pay Commission: ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ, ಒಂದು ದಿನ ಮುಂಚಿತವಾಗಿ ಸಂಬಳ
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನಿಗೆ ಫಿಟ್ ಆಗಿ ಎಂದು ಹಾರೈಸಿದ ತಮಿಳು ಸೂಪರ್ ಸ್ಟಾರ್
ನಟ ಸಾರ್ವ ಭೌಮ ಅವರ ಹಿರಿಯ ಪುತ್ರ ಶಿವರಾಜ್ ಕುಮಾರ್ ಅಂದರೆ ಗಾಂಧಿನಗರದ ಶಿವಣ್ಣ ಅಭಿಮಾನಿಗಳಿಗೆ ಒಂಥರಾ ಪ್ರೀತಿ ಗೌರವ ಇದ್ದೇ ಇದೆ. ಜೊತೆಗೆ ಶಿವಣ್ಣ ಅವರದು ಸಿಂಪಲ್ ಹಾಗೂ ಡೌನ್ ಟು ಅರ್ಥ್ ನೇಚರ್.
ಅಂದಹಾಗೆ ಡಾ.ರಾಜ್ ಕುಮಾರ್ ಕುಡಿ ಶಿವಣ್ಣ ಅವರು ಅಸ್ವಸ್ಥಗೊಂಡು ಮಂಗಳವಾರದಂದು (ಅಕ್ಟೋಬರ್ 6) ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸಿರುವ ಶಿವಣ್ಣ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.[ಮಲ್ಯ ಆಸ್ಪತ್ರೆಯಿಂದ 'ಮನಮೋಹಕ' ಶಿವಣ್ಣ ಮನೆಗೆ]
ಇಂದು (ಅಕ್ಟೋಬರ್ 8) ಬೆಳಿಗ್ಗೆ 11.30ಕ್ಕೆ ನಟ ಶಿವರಾಜ್ ಕುಮಾರ್ ಅವರು ಬೆಂಗಳೂರಿನ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ರಾಜ್ ಕಮಾರ್ ಅವರು ಅಸ್ವಸ್ಥಗೊಂಡ ಸುದ್ದಿ ತಿಳಿದ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ದೂರವಾಣಿ ಕರೆ ಮಾಡುವ ಮೂಲಕ ಶಿವಣ್ಣ ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ನೀವು ಬೇಗನೇ ಫಿಟ್ ಅಂಡ್ ಫೈನ್ ಆಗಿ ಎಂದು ಹಾರೈಸಿದ್ದಾರೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ.
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಹರಡುತ್ತಿದ್ದಂತೆ, ಅಭಿಮಾನಿಗಳು ಮಲ್ಯ ಆಸ್ಪತ್ರೆಯ ಆವರಣದಲ್ಲಿ ಜಮಾಯಿಸಿ ತಮ್ಮ ಪ್ರೀತಿ-ಅಭಿಮಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಶಿವಣ್ಣ ಅವರ ಆರೋಗ್ಯ ಬೇಗ ಸುಧಾರಿಸಲಿ ಎಂದು ದೇವರಿಗೆ ಪೂಜೆ ಸಲ್ಲಿಸಿದ್ದರು.['ವಜ್ರಕಾಯ' ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ]
ಅಲ್ಲದೇ ಇಂದು ಶಿವಣ್ಣ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಂದರ್ಭದಲ್ಲೂ, ಆಸ್ಪತ್ರೆಯ ಆವರಣದಲ್ಲಿ ಅಭಿಮಾನಿಗಳು ಶಿವರಾಜ್ ಕುಮಾರ್ ಅವರ ಮೇಲೆ ಹೂವಿನ ಮಳೆಗರೆವ ಮೂಲಕ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಸ್ಯಾಂಡಲ್ ವುಡ್ ನ ಎಲ್ಲಾ ಸ್ಟಾರ್ ಗಳು ಹಾಗೂ ರಾಜಕೀಯ ನಾಯಕರುಗಳು ಮಲ್ಯ ಆಸ್ಪತ್ರೆಗೆ ಧಾವಿಸಿ ಶಿವಣ್ಣ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.