Don't Miss!
- Sports Hardik Pandya: ಹಾರ್ದಿಕ್ ಪಾಂಡ್ಯರಲ್ಲಿನ ನಾಯಕತ್ವದ ಗುಣಗಳು ಕಾಣೆಯಾಗಿವೆಯಾ?
- Finance ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಬ್ಬಿಂಗ್ ವಿರೋಧಿ ಹೋರಾಟಗಾರರ ಕೊನೆಯ ದಾರಿಯೂ ಬಂದ್.!
ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ವಿರೋಧಿಸಿದ ಹಿನ್ನೆಲೆ ಭಾರತದ ಸ್ಪರ್ದಾತ್ಮಕ ಆಯೋಗ (ಸಿಸಿಐ) ಕರ್ನಾಟಕ ವಾಣಿಜ್ಯ ಮಂಡಳಿ ಹಾಗೂ ಕನ್ನಡ ಪರ ಹೋರಾಟಗಾರರಿಗೆ ನೋಟಿಸ್ ನೀಡಿತ್ತು. ಅದರ ಜೊತೆ ಫಿಲ್ಮ್ ಚೇಂಬರ್ ಗೆ 16 ಲಕ್ಷ ದಂಡ ವಿಧಿಸಿತ್ತು.
ಸಿಸಿಐ ಆದೇಶವನ್ನ ಪ್ರಶ್ನಿಸಿ ಚಲನಚಿತ್ರ ವಾಣಿಜ್ಯ ಮಂಡಳಿ ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಡಬ್ಬಿಂಗ್ ವಿರೋಧಿ ಹೋರಾಟಗಾರರ ಅರ್ಜಿಯನ್ನ ತಿರಸ್ಕರಿಸಿದೆ.
ಹಾಗಿದ್ರೆ, ಮುಂದೇನು? ಎಂಬ ಪ್ರಶ್ನೆ ಈಗ ಡಬ್ಬಿಂಗ್ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.....
ಡಬ್ಬಿಂಗ್ ಸಿನಿಮಾಗಳಿಗೆ ನೋ ಪ್ರಾಬ್ಲಂ.!
ಸುಪ್ರೀಂ ಕೋರ್ಟ್ ನಲ್ಲೂ ಡಬ್ಬಿಂಗ್ ವಿರೋಧಿ ಹೋರಾಟಗಾರರಿಗೆ ಹಿನ್ನಡೆಯಾಗಿರುವುದರಿಂದ ಡಬ್ಬಿಂಗ್ ಸಿನಿಮಾಗಳಿಗೆ ಈಗ ಯಾವುದೇ ಭಯ ಮತ್ತು ಆತಂಕ ಇಲ್ಲ. ಯಾವುದೇ ಅಡೆ ತಡೆ ಇಲ್ಲದೇ ಚಿತ್ರಮಂದಿರಕ್ಕೆ ಬರಬಹುದಾಗಿದೆ.
ಕನ್ನಡ ಚಿತ್ರರಂಗದ ವಿರುದ್ಧ ಕೆರಳಿದ ಕನ್ನಡ ಗ್ರಾಹಕರ ಕೂಟ: ಟ್ವಿಟ್ಟರ್ ನಲ್ಲಿ ಕನ್ನಡ ದ್ರೋಹ ಅಭಿಯಾನ
ವಾಣಿಜ್ಯ ಮಂಡಳಿಯ ನಡೆ ಏನು?
ಪರೋಕ್ಷವಾಗಿ ಡಬ್ಬಿಂಗ್ ಸಂಸ್ಕೃತಿಯನ್ನ ವಿರೋಧಿಸಿರುವ ವಾಣಿಜ್ಯ ಮಂಡಳಿಯ ಡಬ್ಬಿಂಗ್ ಸಿನಿಮಾಗಳು ತೆರೆಕಂಡ್ರೆ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಕೂಡ ಈಗ ಕಾಡುತ್ತಿದೆ.
'ಸತ್ಯದೇವ್' ನಂತರ 'ಧೀರ': ಮತ್ತೊಂದು ಡಬ್ಬಿಂಗ್ ಸಿನಿಮಾ ರಿಲೀಸ್.!
ಹೋರಾಟಗಾರರಿಗೂ ಆತಂಕ.!
ಇನ್ನು ಡಬ್ಬಿಂಗ್ ವಿರುದ್ಧ ಹೋರಾಟ ಮಾಡಿದ್ದಕ್ಕೆ ನಟ ಜಗ್ಗೇಶ್, ವಾಟಳ್ ನಾಗರಾಜ್, ಸಾರಾ ಗೋವಿಂದು ಸೇರಿದಂತೆ ಹಲವರಿಗೆ ಸಿಸಿಐ ನೋಟಿಸ್ ನೀಡಿತ್ತು. ಈಗ ಸುಪ್ರೀಂ ಕೋರ್ಟ್ ನಲ್ಲಿ ಸಿಸಿಐ ಆದೇಶ ಎತ್ತಿಹಿಡಿಯಲಾಗಿದೆ. ಹೀಗಾಗಿ, ಹೋರಾಟಗಾರರ ಮುಂದಿನ ನಡೆ ಏನಿರಬಹುದು ಎಂಬ ಆತಂಕ ಸೃಷ್ಟಿಯಾಗಿದೆ.
ಡಬ್ಬಿಂಗ್ ಬೇಡ ಅಂತಾರೆ, ಪರಭಾಷೆ ಸಿನಿಮಾ ಬೆಂಬಲಿಸ್ತಾರೆ: ಇದು ಕನ್ನಡ ದ್ರೋಹ ಅಲ್ಲವೇ?
'ಧೀರ' ಬಿಡುಗಡೆಗೆ ರೆಡಿ
ಇನ್ನು 'ಸತ್ಯದೇವ್ ಐಪಿಎಸ್' ಚಿತ್ರದ ನಂತರ ಈಗ ಮತ್ತೊಂದು ತಮಿಳು ಸಿನಿಮಾ ಕನ್ನಡದಲ್ಲಿ ಡಬ್ಬಿಂಗ್ ಆಗಿ ಬಿಡುಗಡೆಯಾಗಲು ಸಜ್ಜಾಗಿದೆ. ಈಗಾಗಲೇ 'ಧೀರ' ಚಿತ್ರದ ಟ್ರೈಲರ್ ಮತ್ತು ಹಾಡುಗಳು ರಿಲೀಸ್ ಆಗಿದ್ದು, ಸದ್ಯದಲ್ಲೇ ತೆರೆಕಾಣಲಿದೆ.