Don't Miss!
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- News ಮನೆ ಕೆಲಸ ಮಾಡಿದ ಪತ್ನಿಗೆ ಪತಿಯಿಂದ 76 ಲಕ್ಷ ರೂಪಾಯಿ ಸಂಬಳ
- Automobiles Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Technology Lava: ಭಾರತದಲ್ಲಿ ಸುನಾಮಿ ಎಬ್ಬಿಸಲಿದೆ ಲಾವಾ O2! ನಿರೀಕ್ಷಿತ ಫೀಚರ್ಸ್ ಬಗ್ಗೆ ತಿಳಿಯಿರಿ
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಿಯಾ ಪ್ರಕಾಶ್ ವಾರಿಯರ್ ಗೆ ರಿಲೀಫ್ ನೀಡಿದ ಸುಪ್ರೀಂಕೋರ್ಟ್
ಕಣ್ಸನ್ನೆಯ ಮೂಲಕ ಇಡೀ ರಾಷ್ಟ್ರದಲ್ಲೇ ಸಂಚಲನ ಸೃಷ್ಠಿಸಿದ್ದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನ ಸುಪ್ರೀಂಕೋರ್ಟ್ ತಡೆ ಹಿಡಿದಿದೆ.
'ಒರು ಅದಾರ್ ಲವ್' ಚಿತ್ರದ ಹಾಡೊಂದರಲ್ಲಿ ಮುಸ್ಲಿಂ ಭಾವನೆಗಳಿಗೆ ಧಕ್ಕೆ ಉಂಟುಮಾಡಲಾಗಿದೆ ಎಂದು ಆರೋಪಿಸಿ ಕೆಲವು ಮುಸ್ಲಿಂ ಸಮುದಾಯಗಳು ಚಿತ್ರತಂಡ ಹಾಗೂ ನಟಿಯ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದರು.
ಈ ಪ್ರಕರಣದ ತನಿಖೆಗೆ ತಡೆ ನೀಡಬೇಕೆ ಎಂದು ಕೋರಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಮತ್ತು ನಿರ್ದೇಶಕ, ನಿರ್ಮಾಪಕ ಸುಪ್ರೀಂಕೋರ್ಟ್ ಮೊರೆಹೋಗಿದ್ದರು. ನಟಿಯ ಅರ್ಜಿಯನ್ನ ಸ್ವಾಗತಿಸಿದ ಕೋರ್ಟ್ ತನಿಖೆಗೆ ಮುಂದಾಗದಂತೆ ಪೊಲೀಸರಿಗೆ ಸೂಚಿಸಿದೆ.
ಕಣ್ಸನ್ನೆ ಮಾಡಿ 'ನ್ಯಾಷನಲ್ ಕ್ರಶ್' ಆಗಿದ್ದ ಪ್ರಿಯಾಗೆ ಈಗ ಸಂಕಷ್ಟ.!
'ಒರು ಅದಾರ್ ಲವ್' ಚಿತ್ರದ 'ಮಾಣಿಕ್ಯ ಮಲರಾಯ ಪೂವಿ' ಹಾಡು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಆದ್ರೆ, ಈ ಹಾಡಿನಲ್ಲಿ ಮುಸ್ಲಿಂರ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಹೈದರಾಬಾದ್ ನ ಫಲಕ್ನಾಮಾ ಠಾಣೆಯಲ್ಲಿ, ಮುಂಬೈನ ಔರಂಗಾಬಾದ್ ಹಾಗೂ ಇನ್ನೊಂದು ಕಡೆ ಸೇರಿ ಒಟ್ಟು ಮೂರು ನಗರಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು.