Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಹದಾರಿ' ಮೂಲಕ ಚಿತ್ರರಂಗ ಪ್ರವೇಶಿಸಿದ 'ಸೀತಾ ವಲ್ಲಭ' ನಾಯಕಿ
ಕನ್ನಡದ ಮತ್ತೊಬ್ಬ ಸೀರಿಯಲ್ ನಾಯಕಿ ಸಿನಿಮಾರಂಗದ ಪ್ರವೇಶ ಮಾಡಿದ್ದಾರೆ. 'ಸೀತಾ ವಲ್ಲಭ' ಧಾರಾವಾಹಿಯ ನಟಿ ಸುಪ್ರಿತಾ ಸತ್ಯನಾರಾಯಣ್ 'ರಹದಾರಿ' ಮೂಲಕ ಗಾಂಧಿನಗರ ತಲುಪಿದ್ದಾರೆ.
ಇತ್ತೀಚಿಗಷ್ಟೆ 'ರಹದಾರಿ' ಹೆಸರಿನಲ್ಲಿ ಸಿನಿಮಾವೊಂದು ಬರುತ್ತಿರುವ ಸುದ್ದಿ ಫಿಲ್ಮಿಬೀಟ್ ಕನ್ನಡದಲ್ಲಿ ಪ್ರಕಟ ಆಗಿತ್ತು. ಈ ಸಿನಿಮಾದ ಮೂಲಕ ಶ್ವೇತಾ ಶ್ರೀವತ್ಸವ್ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಇದೇ ಸಿನಿಮಾಗೆ ಮತ್ತೊಬ್ಬ ನಟಿಯ ಆಗಮನ ಆಗಿದ್ದು, ಸುಪ್ರಿತಾ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಬರಿ ಕೇಸ್ ಬೆನ್ನು ಹತ್ತಿ 'ರಹದಾರಿ'ಯಲ್ಲಿ ಬಂದ್ರು ಶ್ವೇತಾ ಶ್ರೀವಾತ್ಸವ್
ಪೊಲೀಸ್ ಪಾತ್ರದಲ್ಲಿ ಶ್ವೇತಾ ಶ್ರೀವತ್ಸವ್ ನಟಿಸುತ್ತಿದ್ದಾರೆ. ರಾಬರಿ ಗ್ಯಾಂಗ್ ನಲ್ಲಿ ಇರುವ ಪಾತ್ರಗಳಲ್ಲಿ ಕೀರ್ತೇಶ್ ಹಾಗೂ ಸುಪ್ರಿತಾ ಪ್ರಮುಖರಾಗಿದ್ದಾರೆ. ರಾಬರಿ ಗ್ಯಾಂಗ್ ನಲ್ಲಿ ಇವರ ನಡುವೆ ಲವ್ ಸ್ಟೋರಿ ನಡೆಯಲಿದೆ.
ಸಿನಿಮಾದ ಪೋಸ್ಟರ್ ವೊಂದು ದೀಪಾವಳಿ ಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ. ಇಡೀ ಸಿನಿಮಾದ ಕಥೆಯನ್ನು ಪೋಸ್ಟರ್ ನಲ್ಲಿ ಹೇಳಲಾಗಿದೆ. ಚಂದ್ರಶೇಖರ್ ಎಂಬುವವರು ಪೋಸ್ಟರ್ ಡಿಸೈನ್ ಮಾಡಿದ್ದಾರೆ. ಅನೇಕ ಅಂಶಗಳು ಪೋಸ್ಟರ್ ನಲ್ಲಿ ಇದ್ದು, ಹೊಸದಾಗಿದೆ.
2ನೇ ಚಿತ್ರಕ್ಕೆ ಮೊದಲೇ 3ನೇ ಚಿತ್ರ ಅನೌನ್ಸ್ ಮಾಡಿದ ನಿರ್ದೇಶಕ ಗಿರೀಶ್
ಗಿರೀಶ್ ವೈರಮುಡಿ ನಿರ್ದೇಶನದ ಮೂರನೇ ಸಿನಿಮಾ ಇದಾಗಿದೆ. ಎರಡನೇ ಸಿನಿಮಾಗೆ ಮೊದಲೇ ಈ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ಹೆಚ್ಚು ಇರುವ ಕಾರಣ 'ರಹದಾರಿ' ಚಿತ್ರ ಮೊದಲು ಶುರು ಮಾಡಿದ್ದಾರೆ.
ಮುಕ್ತಾಂಬ ಬಸವರಾಜು ಹಾಗೂ ಮಂಜುನಾಥ್ ಶಾಮನೂರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೋಣದ ಬಕ್ಕೇಶ್ ಹಾಗೂ ಕೆ ಸಿ ರಾವ್ ಸಂಗೀತ ನೀಡುತ್ತಿದ್ದಾರೆ.