Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಹದಾರಿ' ಮೂಲಕ ಚಿತ್ರರಂಗ ಪ್ರವೇಶಿಸಿದ 'ಸೀತಾ ವಲ್ಲಭ' ನಾಯಕಿ
ಕನ್ನಡದ ಮತ್ತೊಬ್ಬ ಸೀರಿಯಲ್ ನಾಯಕಿ ಸಿನಿಮಾರಂಗದ ಪ್ರವೇಶ ಮಾಡಿದ್ದಾರೆ. 'ಸೀತಾ ವಲ್ಲಭ' ಧಾರಾವಾಹಿಯ ನಟಿ ಸುಪ್ರಿತಾ ಸತ್ಯನಾರಾಯಣ್ 'ರಹದಾರಿ' ಮೂಲಕ ಗಾಂಧಿನಗರ ತಲುಪಿದ್ದಾರೆ.
ಇತ್ತೀಚಿಗಷ್ಟೆ 'ರಹದಾರಿ' ಹೆಸರಿನಲ್ಲಿ ಸಿನಿಮಾವೊಂದು ಬರುತ್ತಿರುವ ಸುದ್ದಿ ಫಿಲ್ಮಿಬೀಟ್ ಕನ್ನಡದಲ್ಲಿ ಪ್ರಕಟ ಆಗಿತ್ತು. ಈ ಸಿನಿಮಾದ ಮೂಲಕ ಶ್ವೇತಾ ಶ್ರೀವತ್ಸವ್ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಇದೇ ಸಿನಿಮಾಗೆ ಮತ್ತೊಬ್ಬ ನಟಿಯ ಆಗಮನ ಆಗಿದ್ದು, ಸುಪ್ರಿತಾ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಬರಿ ಕೇಸ್ ಬೆನ್ನು ಹತ್ತಿ 'ರಹದಾರಿ'ಯಲ್ಲಿ ಬಂದ್ರು ಶ್ವೇತಾ ಶ್ರೀವಾತ್ಸವ್
ಪೊಲೀಸ್ ಪಾತ್ರದಲ್ಲಿ ಶ್ವೇತಾ ಶ್ರೀವತ್ಸವ್ ನಟಿಸುತ್ತಿದ್ದಾರೆ. ರಾಬರಿ ಗ್ಯಾಂಗ್ ನಲ್ಲಿ ಇರುವ ಪಾತ್ರಗಳಲ್ಲಿ ಕೀರ್ತೇಶ್ ಹಾಗೂ ಸುಪ್ರಿತಾ ಪ್ರಮುಖರಾಗಿದ್ದಾರೆ. ರಾಬರಿ ಗ್ಯಾಂಗ್ ನಲ್ಲಿ ಇವರ ನಡುವೆ ಲವ್ ಸ್ಟೋರಿ ನಡೆಯಲಿದೆ.
ಸಿನಿಮಾದ ಪೋಸ್ಟರ್ ವೊಂದು ದೀಪಾವಳಿ ಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ. ಇಡೀ ಸಿನಿಮಾದ ಕಥೆಯನ್ನು ಪೋಸ್ಟರ್ ನಲ್ಲಿ ಹೇಳಲಾಗಿದೆ. ಚಂದ್ರಶೇಖರ್ ಎಂಬುವವರು ಪೋಸ್ಟರ್ ಡಿಸೈನ್ ಮಾಡಿದ್ದಾರೆ. ಅನೇಕ ಅಂಶಗಳು ಪೋಸ್ಟರ್ ನಲ್ಲಿ ಇದ್ದು, ಹೊಸದಾಗಿದೆ.
2ನೇ ಚಿತ್ರಕ್ಕೆ ಮೊದಲೇ 3ನೇ ಚಿತ್ರ ಅನೌನ್ಸ್ ಮಾಡಿದ ನಿರ್ದೇಶಕ ಗಿರೀಶ್
ಗಿರೀಶ್ ವೈರಮುಡಿ ನಿರ್ದೇಶನದ ಮೂರನೇ ಸಿನಿಮಾ ಇದಾಗಿದೆ. ಎರಡನೇ ಸಿನಿಮಾಗೆ ಮೊದಲೇ ಈ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ಹೆಚ್ಚು ಇರುವ ಕಾರಣ 'ರಹದಾರಿ' ಚಿತ್ರ ಮೊದಲು ಶುರು ಮಾಡಿದ್ದಾರೆ.
ಮುಕ್ತಾಂಬ ಬಸವರಾಜು ಹಾಗೂ ಮಂಜುನಾಥ್ ಶಾಮನೂರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೋಣದ ಬಕ್ಕೇಶ್ ಹಾಗೂ ಕೆ ಸಿ ರಾವ್ ಸಂಗೀತ ನೀಡುತ್ತಿದ್ದಾರೆ.