ಸೆಟ್ಟೇರಿತು ಪಾರ್ವತಮ್ಮ ರಾಜ್ ಕುಮಾರ್ ಅಳಿಯನ ಹೊಸ ಚಿತ್ರ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಗರಡಿಯಲ್ಲಿ ಬೆಳೆದ ಪಾರ್ವತಮ್ಮ ರಾಜ್ ಕುಮಾರ್ ಅವರ ಸಹೋದರರ ಮಗ ಸೂರಜ್ ಕುಮಾರ್ ಸಿನಿಮಾರಂಗಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎನ್ನುವ ವಿಚಾರವನ್ನು ಫಿಲ್ಮೀ ಬೀಟ್ ನಲ್ಲಿ ಓದಿದ್ರಿ. ಈಗ ಸೂರಜ್ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಟ್ಟಾಗಿದೆ.
'ಕಥಾವಿಚಿತ್ರ' ಸಿನಿಮಾವನ್ನು ನಿರ್ದೇಶನ ಮಾಡಿದ್ದ ಅನೂಪ್ ಆಂಟನಿ ಡೈರೆಕ್ಟ್ ಮಾಡುತ್ತಿರುವ 'ಅಖಿಲ್' ಚಿತ್ರದಲ್ಲಿ ಸೂರಜ್ ನಾಯಕನಾಗಿ ಅಭಿನಯ ಮಾಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಸಿನಿಮಾ ಸ್ಕ್ರಿಪ್ಟ್ ಪೂಜೆ ಮಾಡಿ ಮುಗಿಸಿದ್ದಾರೆ.
ಅನೂಪ್ ಆಂಟನಿ ನಿರ್ದೇಶನ ಮಾಡುವುದರ ಜೊತೆಯಲ್ಲಿ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. 'ಅಖಿಲ್' ಸಿನಿಮಾದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. 'ಅಖಿಲ್' ಯೂಥ್ ಫುಲ್ ಎಂಟರ್ಟೈನಮೆಂಟ್ ಸಿನಿಮಾ ಆಗಿದ್ದು ಬೆಂಗಳೂರಿನಲ್ಲಿ ಸಂಪೂರ್ಣ ಚಿತ್ರೀಕರಣವನ್ನು ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ.

'ಅಖಿಲ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿರುವ ಸೂರಜ್ ಜೊತೆಯಗಿ ಶಾನ್ವಿ ಶ್ರೀವಾತ್ಸವ್ ಅಥವಾ ಆಶಿಕಾ ರಂಗನಾಥ್ ನಾಯಕಿ ಆಗುವ ಸಾಧ್ಯತೆ ಇದೆ. ಆರಂಭದಲ್ಲಿಯೇ ಕಮರ್ಷಿಯಲ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡುತ್ತಿರುವ ಸೂರಜ್ ಮುಂದಿನ ದಿನಗಳಲ್ಲಿ ಚಿತ್ರರಂಗಕ್ಕೆ ಭರವಸೆ ನಾಯಕನಾಗಿ ಉಳಿದುಕೊಳ್ಳುತ್ತಾರಾ ಕಾದು ನೋಡಬೇಕಿದೆ.


Click it and Unblock the Notifications











