Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯದಲ್ಲಿ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಆರಂಭಿಸಲಿರುವ ಅಭಿಷೇಕ್
'ಅಮರ್' ಸಿನಿಮಾದ ನಂತರ ಎರಡನೇ ಚಿತ್ರದ ಶೂಟಿಂಗ್ ಆರಂಭಿಸಲು ಎಲ್ಲ ತಯಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಲಾಕ್ಡೌನ್ ಆಯ್ತು. ದುನಿಯಾ ಸೂರಿ ಜೊತೆ ಅಭಿಷೇಕ್ ಎರಡನೇ ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದರು.
ಇದೀಗ ಚಿತ್ರೀಕರಣ ಆರಂಭಿಸಲು ದಿನಾಂಕ ನಿಗದಿಯಾಗಿದೆ. ಜನವರಿ 15 ರಿಂದ ಬ್ಯಾಡ್ ಮ್ಯಾನರ್ಸ್ ಶೂಟಿಂಗ್ ಶುರು ಮಾಡಲಾಗುತ್ತಿದೆ. ಮೊದಲ ಶೆಡ್ಯೂಲ್ನಲ್ಲಿ ಚಿತ್ರದ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
'ನಿಮ್ಮನ್ನು ನನ್ನ ಅಣ್ಣನಾಗಿ ಪಡೆದಿರುವುದು ನನ್ನ ಸೌಭಾಗ್ಯ': ದರ್ಶನ್ಗೆ ಅಭಿಷೇಕ್ ಹೀಗೆ ಹೇಳಿದ್ದೇಕೆ?
ಮಂಡ್ಯದಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದ್ದು, ಸುಮಾರು 12 ದಿನಗಳ ಕಾಲ ಬ್ಯಾಡ್ ಮ್ಯಾನರ್ಸ್ ತಂಡ ಸಕ್ಕರೆನಾಡಿನಲ್ಲಿ ಕೆಲಸ ಮಾಡಲಿದೆ. ಅದಕ್ಕಾಗಿ ಅಗತ್ಯ ಶೂಟಿಂಗ್ ಲೋಕೇಶನ್ಗಳನ್ನು ಗುರುತಿಸಿದ್ದಾರೆ.
ಸಾಹಸ ನಿರ್ದೇಶಕ ರವಿವರ್ಮ ಅವರ ಸಾರಥ್ಯದಲ್ಲಿ ಆಕ್ಷನ್ ದೃಶ್ಯಗಳ ಶೂಟಿಂಗ್ ನಡೆಯಲಿದ್ದು, ಹಿರಿಯ ನಟಿ ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ಹೆಚ್ಚು ಜೂನಿಯರ್ ಕಲಾವಿದರು ಪಾಲ್ಗೊಳ್ಳಲಿದ್ದಾರೆ.
ಅಮರ್ ಸಿನಿಮಾ ಬಳಿಕ ಅಭಿಷೇಕ್ ಮಾಡುತ್ತಿರುವ ಎರಡನೇ ಸಿನಿಮಾ ಎಂಬ ಕಾರಣಕ್ಕೆ ಹಾಗೂ ಸುಕ್ಕು ಸೂರಿ ನಿರ್ದೇಶನ ಮಾಡುತ್ತಿರುವ ಕಾರಣಕ್ಕೆ ಈ ಪ್ರಾಜೆಕ್ಟ್ ಭಾರಿ ನಿರೀಕ್ಷೆ ಮೂಡಿಸಿದೆ.
ಈ ಚಿತ್ರಕ್ಕಾಗಿ ಅಭಿಷೇಕ್ ಅಂಬರೀಶ್ ಪೂರ್ವ ತಯಾರಿ ನಡೆಸಿದ್ದಾರೆ. ಬಾಡಿ ಟ್ರಾನ್ಸ್ಫರ್ಮೇಶನ್ನ ಸಹ ಮಾಡಲಿದ್ದಾರೆ ಎನ್ನಲಾಗಿದೆ. ಸುಧೀರ್ ಕೆಎಂ ಈ ಚಿತ್ರ ನಿರ್ಮಾಣ ಮಾಡಲಿದ್ದು, ಚರಣ್ ರಾಜ್ ಸಂಗೀತ ಇರಲಿದೆ. ಸದ್ಯಕ್ಕೆ ಹೀರೋಯಿನ್ ಯಾರೆಂದು ಫಿಕ್ಸ್ ಆಗಿಲ್ಲ.