Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏಪ್ರಿಲ್ 15ಕ್ಕೆ 'ವಿಕ್ರಾಂತ್ ರೋಣ' ಚಿತ್ರತಂಡದಿಂದ ಸರ್ಪ್ರೈಸ್ ಪ್ರಕಟಣೆ
ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಸಿನಿಮಾ ಏಪ್ರಿಲ್ ತಿಂಗಳ ಕೊನೆಯಲ್ಲಿ ತೆರೆಗೆ ಬರಬೇಕಿತ್ತು. ಕೋವಿಡ್ ಪ್ರಕರಣಗಳ ಏರಿಕೆ ಹಿನ್ನೆಲೆ ಸದ್ಯಕ್ಕೆ ಕೋಟಿಗೊಬ್ಬ ಬರುವುದು ಅನುಮಾನವಾಗಿದೆ.
Recommended Video
ಕೋಟಿಗೊಬ್ಬ ಚಿತ್ರದ ಬಳಿಕ ಸುದೀಪ್ ನಟಿಸಿರುವ ಸಿನಿಮಾ 'ವಿಕ್ರಾಂತ್ ರೋಣ'. ದುಬೈನ ಬುರ್ಜ್ ಖಲೀಫಾದ ಮೇಲೆ ಕಿಚ್ಚನ 25ನೇ ವರ್ಷದ ಸಂಭ್ರಮ ಆಚರಿಸಿದ ಬಳಿಕ ಚಿತ್ರತಂಡ ಸೈಲೈಂಟ್ ಆಗಿತ್ತು. ಇದೀಗ, ಮತ್ತೆ ಸುದ್ದಿಗೆ ಬಂದಿದೆ.
'ವಿಕ್ರಾಂತ್ ರೋಣ' ಚಿತ್ರಕ್ಕೆ ನಿರೂಪ್ ಭಂಡಾರಿಯನ್ನು ಸೂಚಿಸಿದ್ದು ಯಾರು?
'ವಿಕ್ರಾಂತ್ ರೋಣ' ಸಿನಿಮಾದಿಂದ ಸರ್ಪ್ರೈಸ್ ಸುದ್ದಿಯೊಂದು ಹೊರಬಿದ್ದಿದೆ. ಆ ಸರ್ಪ್ರೈಸ್ ಏನು ತಿಳಿಯಬೇಕಾದರೆ ಏಪ್ರಿಲ್ 15 ನೇ ತಾರೀಖಿನವರೆಗೂ ಕಾಯಬೇಕಿದೆ. ಹೌದು, ಏಪ್ರಿಲ್ 15 ರಂದು ಬೆಳಗ್ಗೆ 11.10 ಗಂಟೆಗೆ ವಿಕ್ರಾಂತ್ ರೋಣ ಚಿತ್ರತಂಡ ಸರ್ಪ್ರೈಸ್ ಸುದ್ದಿಯನ್ನು ಘೋಷಣೆ ಮಾಡಲಿದೆ. ಈ ಕುರಿತು ಇಂದು ಸುದೀಪ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಆದರೆ, ಏಪ್ರಿಲ್ 15ನೇ ತಾರೀಖು ಚಿತ್ರತಂಡ ನೀಡಲಿರುವ ಆ ಸುದ್ದಿ ಏನು ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ಪೋಸ್ಟರ್, ಟೀಸರ್, ಬುರ್ಜ್ ಖಲೀಫಾ ಮೇಲೆ 2 ನಿಮಿಷದ ವಿಡಿಯೋ ಹಾಗೂ ಪಾತ್ರಗಳ ಪರಿಚಯ ಆಗಿದೆ. ಬಹುಶಃ ಚಿತ್ರದ ಹಾಡು ಅಥವಾ ರಿಲೀಸ್ ದಿನಾಂಕ ಪ್ರಕಟವಾಗಬಹುದು ಎಂಬ ನಿರೀಕ್ಷೆ ಇದೆ.
ಇನ್ನುಳಿದಂತೆ ಅನೂಪ್ ಭಂಡಾರಿ ಈ ಚಿತ್ರ ನಿರ್ದೇಶಿಸಿದ್ದು, ಸುದೀಪ್ ಅವರ ಆಪ್ತ ಹಾಗೂ ಮ್ಯಾನೇಜರ್ ಆಗಿರುವ ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.