Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಹೆಜ್ಜೆಯಲ್ಲಿ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು
ಮೈಸೂರಿನಲ್ಲಿ ಹುಟ್ಟಿ ಬೆಳೆದ ಬಾಬು ಅವರು ಕನ್ನಡ ಚಿತ್ರಗರಂಗದ ನಿರ್ಮಾಪಕ ದಿವಂಗತ ಶಂಕರ್ ಸಿಂಗ್ ಅವರ ಪುತ್ರ. ಮಹಾತ್ಮ ಲಾಂಛನದಲ್ಲಿ ಹಲವಾರು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ ಸಂಸ್ಥೆ ಅವರದು.
ಈಗ ವಿಷಯ ಏನೆಂದರೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಮುನ್ನಡೆಸಿಕೊಂಡು ಬರುತ್ತಿರುವ 'ಬೆಳ್ಳಿಹೆಜ್ಜೆ' ಕಾರ್ಯಕ್ರಮದಲ್ಲಿ ಈ ಬಾರಿ ಅವರು ಚಿತ್ರರಸಿಕರಿಗೆ ಮುಖಾಮುಖಿಯಾಗಲಿದ್ದಾರೆ. ಈ ಹಿಂದೆ ಇದೇ 'ಬೆಳ್ಳಿಹೆಜ್ಜೆ' ಕಾರ್ಯಕ್ರಮದಲ್ಲಿ ಬಾಬು ಅವರ ತಾಯಿ ಪ್ರತಿಮಾ ದೇವಿ ಅವರು ಚಿತ್ರರಂಗದ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.
ತಿರುಗುಬಾಣ (ಅಂಬರೀಶ್), ಕಲಿಯುಗ (ರಾಜೇಶ್), ಕೃಷ್ಣಾ ನೀ ಬೇಗನೆ ಬಾರೋ (ವಿಷ್ಣುವರ್ಧನ್), ಯುಗ ಪುರುಷ (ರವಿಚಂದ್ರನ್), ಬುದ್ಧಿವಂತ (ಉಪೇಂದ್ರ) ಸೇರಿದಂತೆ ಮುಂತಾದ ಚಿತ್ರಗಳನ್ನು ಬಾಬು ನಿರ್ಮಿಸಿದ್ದಾರೆ. ಕೇವಲ ಕನ್ನಡದಲ್ಲಷ್ಟೇ ಅಲ್ಲದೆ ಹಿಂದಿಯಲ್ಲೂ ಕೈಯಾಡಿಸಿದ ಅನುಭವ ಅವರದು.
ಇದೇ ಶನಿವಾರ (ಸೆ.22) ಸಂಜೆ 5 ಗಂಟೆಗೆ ಬೆಳ್ಳಿಹೆಜ್ಜೆ ಕಾರ್ಯಕ್ರಮ ಆರಂಭವಾಗಲಿದೆ. ಸ್ಥಳ: ಬಾದಾಮಿ ಹೌಸ್, ಜೆಸಿ ರಸ್ತೆ, ಬೆಂಗಳೂರು. ರಾಜೇಂದ್ರ ಸಿಂಗ್ ಬಾಬು ಅವರು ಸುತ್ತು ಬಳಸಿ ಮಾತನಾಡುವ ಪೈಕಿಯಲ್ಲ. ಅವರದು ಏನಿದ್ದರೂ ನೇರಾನೇರ ನುಡಿ. ಬೆಳ್ಳಿಹೆಜ್ಜೆ ಕಾರ್ಯಕ್ರಮಕ್ಕೆ ಹೋಗಿ ನೋಡಿ. (ಒನ್ಇಂಡಿಯಾ ಕನ್ನಡ)