Don't Miss!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಹೆಜ್ಜೆಯಲ್ಲಿ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು
ಮೈಸೂರಿನಲ್ಲಿ ಹುಟ್ಟಿ ಬೆಳೆದ ಬಾಬು ಅವರು ಕನ್ನಡ ಚಿತ್ರಗರಂಗದ ನಿರ್ಮಾಪಕ ದಿವಂಗತ ಶಂಕರ್ ಸಿಂಗ್ ಅವರ ಪುತ್ರ. ಮಹಾತ್ಮ ಲಾಂಛನದಲ್ಲಿ ಹಲವಾರು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ ಸಂಸ್ಥೆ ಅವರದು.
ಈಗ ವಿಷಯ ಏನೆಂದರೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಮುನ್ನಡೆಸಿಕೊಂಡು ಬರುತ್ತಿರುವ 'ಬೆಳ್ಳಿಹೆಜ್ಜೆ' ಕಾರ್ಯಕ್ರಮದಲ್ಲಿ ಈ ಬಾರಿ ಅವರು ಚಿತ್ರರಸಿಕರಿಗೆ ಮುಖಾಮುಖಿಯಾಗಲಿದ್ದಾರೆ. ಈ ಹಿಂದೆ ಇದೇ 'ಬೆಳ್ಳಿಹೆಜ್ಜೆ' ಕಾರ್ಯಕ್ರಮದಲ್ಲಿ ಬಾಬು ಅವರ ತಾಯಿ ಪ್ರತಿಮಾ ದೇವಿ ಅವರು ಚಿತ್ರರಂಗದ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.
ತಿರುಗುಬಾಣ (ಅಂಬರೀಶ್), ಕಲಿಯುಗ (ರಾಜೇಶ್), ಕೃಷ್ಣಾ ನೀ ಬೇಗನೆ ಬಾರೋ (ವಿಷ್ಣುವರ್ಧನ್), ಯುಗ ಪುರುಷ (ರವಿಚಂದ್ರನ್), ಬುದ್ಧಿವಂತ (ಉಪೇಂದ್ರ) ಸೇರಿದಂತೆ ಮುಂತಾದ ಚಿತ್ರಗಳನ್ನು ಬಾಬು ನಿರ್ಮಿಸಿದ್ದಾರೆ. ಕೇವಲ ಕನ್ನಡದಲ್ಲಷ್ಟೇ ಅಲ್ಲದೆ ಹಿಂದಿಯಲ್ಲೂ ಕೈಯಾಡಿಸಿದ ಅನುಭವ ಅವರದು.
ಇದೇ ಶನಿವಾರ (ಸೆ.22) ಸಂಜೆ 5 ಗಂಟೆಗೆ ಬೆಳ್ಳಿಹೆಜ್ಜೆ ಕಾರ್ಯಕ್ರಮ ಆರಂಭವಾಗಲಿದೆ. ಸ್ಥಳ: ಬಾದಾಮಿ ಹೌಸ್, ಜೆಸಿ ರಸ್ತೆ, ಬೆಂಗಳೂರು. ರಾಜೇಂದ್ರ ಸಿಂಗ್ ಬಾಬು ಅವರು ಸುತ್ತು ಬಳಸಿ ಮಾತನಾಡುವ ಪೈಕಿಯಲ್ಲ. ಅವರದು ಏನಿದ್ದರೂ ನೇರಾನೇರ ನುಡಿ. ಬೆಳ್ಳಿಹೆಜ್ಜೆ ಕಾರ್ಯಕ್ರಮಕ್ಕೆ ಹೋಗಿ ನೋಡಿ. (ಒನ್ಇಂಡಿಯಾ ಕನ್ನಡ)