Don't Miss!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗನ ಮುಂದೆ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಕಣ್ಣೀರಿಟ್ಟಿದ್ದು ಯಾಕೆ.?
Recommended Video
'ನಾಗರಹೊಳೆ', 'ಕಿಲಾಡಿ ಜೋಡಿ', 'ಅಂತ', 'ಸಿಂಹದ ಮರಿ ಸೈನ್ಯ', 'ಕರ್ಣ', 'ಮುತ್ತಿನ ಹಾರ', 'ಬಂಧನ' ಸೇರಿದಂತೆ ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು.
ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗಾಗಿ 'ರಾಜ ವೀರ ಮದಕರಿ ನಾಯಕ' ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.
ಇಂತಿಪ್ಪ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿನ್ನೆ ಕಣ್ಣೀರಿಟ್ಟರು. ಮಗನ ಮುಂದೆ ಭಾವುಕರಾದರು.
ನಾನು ರೆಬೆಲ್ ಆದರೆ ದರ್ಶನ್ ಡಬಲ್ ರೆಬೆಲ್, ನಾವು ರೆಬೆಲ್ ಮಕ್ಕಳು ಎಂದ ಆದಿತ್ಯ.!
ಅಷ್ಟಕ್ಕೂ, ನಿನ್ನೆ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಪುತ್ರ ಆದಿತ್ಯ ಅಭಿನಯದ 'ಮುಂದುವರೆದ ಅಧ್ಯಾಯ' ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮ ಇತ್ತು. ಈ ವೇಳೆ ಇಲ್ಲಿಯವರೆಗೂ ತಮ್ಮ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ ನಿರ್ದೇಶಕರುಗಳಿಗೆ ಆದಿತ್ಯ ಸನ್ಮಾನ ಸಮಾರಂಭ ಆಯೋಜಿಸಿದ್ದರು.
ಮಗ ಆದಿತ್ಯಗಾಗಿ ತಂದೆ ಎಸ್.ವಿ.ರಾಜೇಂದ್ರ ಸಿಂಗ್ ಬಾಬು 'ಲವ್', 'ಮೋಹಿನಿ' ಮತ್ತು 'ರೆಬೆಲ್' ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹೀಗಾಗಿ, ತಂದೆಗೆ ಮಗ ಸನ್ಮಾನ ಮಾಡಲು ಮುಂದಾದರು. ಈ ಸಮಯದಲ್ಲಿ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಅವರ ಕಣ್ಣಾಲಿಗಳು ತುಂಬಿ ಬಂದವು.
ದಚ್ಚು ಇದ್ದ ಕಡೆ ಕಿಚ್ಚನ ಕಡೆಗಣನೆ: 'ಮುಂದುವರೆದ' ಸುದೀಪ್-ದರ್ಶನ್ ಶೀತಲ ಸಮರ 'ಅಧ್ಯಾಯ'.!
ಬಳಿಕ, ''ನನ್ನ ಮಗನಿಗೆ ನಾನು ಆಶೀರ್ವಾದ ಮಾಡುತ್ತೇನೆ. 75 ವರ್ಷಗಳಿಂದ ನಾವು ಚಿತ್ರರಂಗದಲ್ಲಿ ಇದ್ದೇವೆ. ಸುಮಾರು 108 ಚಿತ್ರಗಳನ್ನು ತೆರೆಗೆ ತಂದಿದ್ದೇವೆ. ನಮ್ಮ ಅಧ್ಯಾಯ ಮುಗಿಯುವುದಿಲ್ಲ. ಯಾವಾಗಲೂ ನಡೆಯುತ್ತಲೇ ಇರುತ್ತದೆ'' ಎಂದು 'ಮುಂದುವರೆದ ಅಧ್ಯಾಯ' ಚಿತ್ರತಂಡಕ್ಕೆ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಶುಭ ಹಾರೈಸಿದರು.