Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಶ್ಮೀರ ಹೂತೋಟದಲ್ಲಿ ರಾಧಿಕಾ ಕುಮಾರಸ್ವಾಮಿ
ರಾಜ್ಯ ರಾಜಕೀಯ ಹಾಗೂ ವಾತಾವರಣ ಎರಡರಲ್ಲೂ ತಾಪಮಾನ ಏರಿಕೆಯಾಗಿದೆ. ರಾಜಕಾರಣಿಗಳು ಬಣ್ಣಹಚ್ಚುತ್ತಿದ್ದಾರೆ. ಬಣ್ಣದ ಬಣ್ಣದ ಮಾತುಗಳಿಗೇನು ಕಡಿಮೆ ಇಲ್ಲ ಬಿಡಿ. ಈಗ ವಿಷಯಕ್ಕೆ ನೇರವಾಗಿ ಬರೋಣ. ಇಲ್ಲೇನೋ ತಾಪಮಾನ ಜೋರಾಗಿದೆ. ಆದರೆ ನಟಿ ರಾಧಿಕಾ ಕುಮಾರಸ್ವಾಮಿ ಮಾತ್ರ ಕಾಶ್ಮೀರದಲ್ಲಿ ತಂಪಾಗಿದ್ದಾರೆ.
ಕಾಶ್ಮೀರದ ಟುಲಿಪ್ ಉದ್ಯಾನವನದಲ್ಲಿ ರಾಧಿಕಾ ಅವರ ಮುಂದಿನ ಚಿತ್ರ 'ಸ್ವೀಟಿ' ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ. ಕಾಶ್ಮೀರದ ಟುಲಿಪ್ ಉದ್ಯಾನದಲ್ಲಿ 'ಸ್ವೀಟಿ' ಚಿತ್ರದ ಹಾಡನ್ನು ಚಿತ್ರೀಕರಿಸಿಕೊಳ್ಳಲಾಯಿತು. ರಾಧಿಕಾ ಜೊತೆ ಚಿತ್ರದ ನಾಯಕ ನಟ ಆದಿತ್ಯ ಸಹ ಹಾಡಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.
ಹರ್ಷಾ, ಇಮ್ರಾನ್ ಸರ್ದಾರಿಯಾ ಹಾಗೂ ಮುರಳಿ ನೃತ್ಯ ಸಂಯೋಜನೆಯಲ್ಲಿ ಹಾಡನ್ನು ಚಿತ್ರೀಕರಿಸಿಕೊಳ್ಳಲಾಗಿದೆ. ಇನ್ನೊಂದು ಹಾಡನ್ನು ಗೋವಾದ ಸಮುದ್ರ ತೀರದಲ್ಲಿ ಚಿತ್ರೀಕರಿಸಿಕೊಳ್ಳಲಾಗಿತ್ತು. ಈಗ ಕಾಶ್ಮೀರದ ಹಾಡಿನ ಮೂಲಕ ಸ್ವೀಟಿ ಚಿತ್ರದ ಶೂಟಿಂಗ್ ಬಹುತೇಕ ಮುಕ್ತಾಯವಾಗಿದೆ.
ಸ್ವೀಟಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ವಿಜಯಲಕ್ಷ್ಮಿ ಸಿಂಗ್. ಛಾಯಾಗ್ರಹಣ ಅಜಯ್ ವಿನ್ಸೆಂಟ್, ಸಂಭಾಷಣೆ ಬಿ.ಎ.ಮಧು. ಪಾತ್ರವರ್ಗದಲ್ಲಿ ಗಿರೀಶ್ ಕಾರ್ನಾಡ್, ಸಾಧು ಕೋಕಿಲ, ತಬಲಾ ನಾಣಿ, ಶರತ್ ಲೋಹಿತಾಶ್ವ ಮುಂತಾದವರಿದ್ದಾರೆ. (ಏಜೆನ್ಸೀಸ್)