Don't Miss!
- News ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಂತ್ ಸಾಹಸ ಹಾಗೂ ಸ್ನೇಹ ಗುಣವನ್ನು ನೆನೆದ ಮಾಳವಿಕಾ, ಸೀತಾರಾಂ
ಅನಂತ್ ಕುಮಾರ್ ಅವರ ನಿಧನದ ನೋವನ್ನು ಅವರ ಆಪ್ತರು ಹಂಚಿಕೊಳ್ಳುತ್ತಿದ್ದಾರೆ. ಸದ್ಯ, ನಿರ್ದೇಶಕ ಟಿ ಎನ್ ಸೀತಾರಾಂ ಹಾಗೂ ಬಿಜೆಪಿ ವಕ್ತಾರೆ ಹಾಗೂ ನಟಿ ಮಾಳವಿಕಾ ಅನಂತ್ ಕುಮಾರ್ ಅವರ ಗುಣವನ್ನು ನೆನೆದಿದ್ದಾರೆ.
''ಅನಂತ್ ಕುಮಾರ್ ಅತ್ಯಂತ ಸೌಜನ್ಯದ ಸಜ್ಜನಿಕೆಯ ವ್ಯಕ್ತಿ. ಸಂಗೀತ ಸಾಹಿತ್ಯದ ಬಗ್ಗೆ ಅವರು ಆಸಕ್ತಿ ಹೊಂದಿದ್ದರು. ಎಲ್ಲರ ಜೊತೆಗೆ ಸ್ನೇಹಿತರಾಗಿದ್ದರು. ತುರ್ತು ಪರಿಸ್ಥಿತಿ ಕಾಲದಿಂದ ನನಗೆ ಮಿತ್ರರಾಗಿದ್ದರು. ಕನ್ನಡ ನಾಡಿಗೆ ಇದು ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಅನಂತ್ ಕುಮಾರ್ ಅವರಿಗೆ ಸೀತಾರಂ ಸಂತಾಪ ಸೂಚಿಸಿದ್ದಾರೆ.
This is just not believable...we saw him in full action Vajpayeeji’s #AstiKalashYatra on 23rd August right here in our State Office & its a matter of days...the man simply departs???? Shraddhanjali...🙏🏽🙏🏽🙏🏽 #AnanthKumar ji An incredible political journey...an icon pic.twitter.com/shkvh31FHV
— MALAVIKA AVINASH (@MALAVIKAAVINASH) November 12, 2018
ಜೀವದ ಗೆಳೆಯನನ್ನು ಕಳೆದುಕೊಂಡ ಶ್ರೀನಾಥ್ ನೋವಿನ ನುಡಿ
''ಇದು ನಂಬಲು ಆಸಾಧ್ಯ. ಬಿಜೆಪಿ ಕಛೇರಿಯಲ್ಲಿ ಆಗಸ್ಟ್ 23 ರಂದು ನಡೆದ ವಾಜಪೇಯಿ ಅವರ ಅಸ್ತಿಕಾಲಶಯಾತ್ರೆಯಲ್ಲಿ ಅವರು ಎಷ್ಟು ಲವಲವಿಕೆಯಿಂದ ಭಾಗಯಿಸಿದರು. ಆದಾಗಿ ಕೆಲವೇ ದಿನಗಳ ಕಳೆದಿವೆ ಅಷ್ಟೇ. ಈಗ ಇವರು ಹೊರಟು ಬಿಟ್ಟರು. ಅನಂತ್ ಜೀ ಅವರದ್ದು ಅದ್ಬುತವಾದ ರಾಜಕೀಯ ಪಯಣ.'' ಎಂದು ಮಾಳವಿಕಾ ಟ್ವೀಟ್ ಮಾಡಿದ್ದಾರೆ.
ಅಗಲಿದ ಅನಂತ್ ಕುಮಾರ್ ರಿಗೆ ಗಣೇಶ್ ದಂಪತಿ ಅಂತಿಮ ನಮನ
ಅಂದಹಾಗೆ, ಕೇಂದ್ರ ಸಚಿವ, ಬಿಜೆಪಿಯ ಪ್ರಮುಖ ನಾಯಕ ಅನಂತ್ ಕುಮಾರ್ (59) ಅವರು ನವೆಂಬರ್ 12ರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಅವರು ನಗರದ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಕಡೆಯ ಹಂತದಲ್ಲಿ ಲಂಡನ್ ಗೆ ಹೋಗಿ ಚಿಕಿತ್ಸೆ ಪಡೆದು, ಸಾಕಷ್ಟು ಹೋರಾಟ ನಡೆಸಿದರೂ ಗೆಲ್ಲಲು ಸಾಧ್ಯವಾಗಲೇ ಇಲ್ಲ.