Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ; ಟಿಎಸ್ ನಾಗಾಭರಣ
ಕನ್ನಡ ಸಿನಿಮಾರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ. ಅವುಗಳಿಂದ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಖ್ಯಾತ ನಿರ್ದೇಶಕ, ನಟ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ಚಿತ್ರತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಿದೆ. ಈ ಬಗ್ಗೆ ಮಡಿಕೇರೆಯಲ್ಲಿ ಮಾತನಾಡಿದ ನಾಗಾಭರಣ ಭಾಷೆ ವಿಚಾರದಲ್ಲಿ ದರ್ಶನ್ ಮಾತ್ರವಲ್ಲ, ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದಿದ್ದಾರೆ.
ನಮ್ಮಲ್ಲಿರೋರು ಮೊದಲು ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು; ಫಿಲ್ಮ್ ಛೇಂಬರ್ ನಲ್ಲಿ ಗುಡುಗಿದ ದರ್ಶನ್
ಡಬ್ಬಿಂಗ್ ಸಿನಿಮಾಗಳು ಬರ್ತಿದ್ರೆ ನೇರ ಸಿನಿಮಾಗಳು ಯಾಕೆ ಬೇಕು, ಕನ್ನಡ ಚಲನಚಿತ್ರೋದ್ಯಮಕ್ಕೆ ಮಾರಕ ಕೆಲಸಗಳು ನಡೆಯುತ್ತಿದೆ. ಅವುಗಳಿಂದ ಕನ್ನಡ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
Recommended Video
ಇನ್ನು ಇದೆ ಸಮಯದಲ್ಲಿ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆಯೂ ಮಾತನಾಡಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತದೆ ಎಂಬ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹುಚ್ಚುತನದ ಮಾತನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದು ಎಂದಿದ್ದಾರೆ. ಬೆಳಗಾವಿಯಲ್ಲಿರುವ ಯಾವುದೇ ಭಾಷಿಕನಾದರೂ ಅವರು ಕನ್ನಡಿಗರೆ ಆಗಿರುತ್ತಾರೆ. ಕರ್ನಾಟಕದ ಒಂದಿಂಚು ಜಾಗವನ್ನು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.