Don't Miss!
- News ರಾಯಚೂರಿನಲ್ಲಿ ಭಿನ್ನಮತ ಸ್ಫೋಟ: ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ..!
- Automobiles ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Finance ಲೋಕಸಭಾ ಚುನಾವಣೆ ಟಿಕೆಟ್ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಂಸದ?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಒಂದಾದ ಶಿವಣ್ಣ - ಟಿ.ಎಸ್.ನಾಗಾಭರಣ ಜೋಡಿ
ನಟ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಪ್ರತಿ ವರ್ಷ ಸಹ ಸಾಲು ಸಾಲು ಸಿನಿಮಾಗಳು ಅನೌನ್ಸ್ ಆಗುತ್ತದೆ. ಈ ವರ್ಷ ಕೂಡ ಅನೇಕ ಸಿನಿಮಾಗಳ ಸುದ್ದಿ ಹೊರಬಂದಿದೆ. ಅದರಲ್ಲಿ ವಿಶೇಷವಾಗಿ ಮತ್ತೆ ಈ ವರ್ಷ ನಿರ್ದೇಶಕ ಟಿ.ಎಸ್.ನಾಗಾಭರಣ ಹಾಗೂ ಶಿವರಾಜ್ ಕುಮಾರ್ ಸಿನಿಮಾ ಮಾಡುತ್ತಿದ್ದಾರೆ.
500KM ಸೈಕಲ್ ತುಳಿದು ಬಂದ ಅಭಿಮಾನಿಯನ್ನು ಕಂಡು ಕರಗಿತು ಶಿವಣ್ಣನ ಮನ!
ನಿರ್ದೇಶಕ ಟಿ.ಎಸ್.ನಾಗಾಭರಣ ಈ ಹಿಂದೆ 'ಜನುಮದ ಜೋಡಿ' ಹಾಗೂ 'ಚಿಗುರಿದ ಕನಸು' ಸಿನಿಮಾವನ್ನು ಶಿವಣ್ಣನಿಗಾಗಿ ಮಾಡಿದ್ದರು. ಈ ಎರಡು ಸಿನಿಮಾಗಳು ಶಿವರಾಜ್ ಕುಮಾರ್ ಚಿತ್ರ ಬದುಕಿನಲ್ಲಿ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಆದರೆ, ಈ ಚಿತ್ರಗಳ ಬಳಿಕ ಈಗ ಮತ್ತೆ ಶಿವಣ್ಣ ಹಾಗೂ ಟಿ.ಎಸ್.ನಾಗಾಭರಣ ಇಬ್ಬರು ಒಂದಾಗುವ ಕಾಲ ಬಂದಿದೆ.
ವಿಶೇಷ ಅಂದರೆ, ಖ್ಯಾತ ಲೇಖಕರಾದ ಪೂರ್ಣಚಂದ್ರ ತೇಜಸ್ವಿ ಅವರ 'ಜುಗಾರಿ ಗ್ರಾಸ್' ಕಾದಂಬರಿಯನ್ನು ಈ ಬಾರಿ ನಿರ್ದೇಶಕ ಟಿ.ಎಸ್.ನಾಗಭರಣ ಸಿನಿಮಾ ಮಾಡಲು ಹೊರಟಿದ್ದಾರೆ ಎಂಬ ಮಾತಿದೆ. ಆದರೆ ಈ ವಿಷಯವನ್ನು ಅವರು ಇನ್ನು ಅಧಿಕೃತ ಪಡಿಸಿಲ್ಲ.
ಈ ಮೂಲಕ ಮತ್ತೆ ಶಿವರಾಜ್ ಕುಮಾರ್ ಕಾದಂಬರಿ ಆಧಾರಿತ ಸಿನಿಮಾ ಮಾಡುತ್ತಿದ್ದಾರೆ. 'ಕಡ್ಡಿಪುಡಿ' ಸಿನಿಮಾಗೆ ಬಂಡವಾಳ ಹಾಕಿದ್ದ ಚಂದ್ರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹೆಚ್.ಸಿ.ವೇಣು ಕ್ಯಾಮರಾ ನಿರ್ವಹಣೆ ಮಾಡಲಿದ್ದಾರೆ.