Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಟಗರು' ಅಂಥೋಣಿ ದಾಸನ್ ಅವರಿಂದ ಮತ್ತೊಂದು ಕನ್ನಡ ಹಾಡು
Recommended Video
'ಟಗರು' ಚಿತ್ರದ ಟೈಟಲ್ ಸಾಂಗಿಗೆ ಧ್ವನಿಯಾಗೋ ಮೂಲಕವೇ ಕನ್ನಡಿಗರಿಗೆಲ್ಲ ಪರಿಚಿತರಾಗಿದ್ದವರು ತಮಿಳು ಜನಪದ ಗಾಯಕ ಅಂಥೋಣಿ ದಾಸನ್. ಈ ಗಾಯಕ ಈಗ 'ದಂಡುಪಾಳ್ಯ' ಗ್ಯಾಂಗಿನ ಜೊತೆ ಸೇರಿಕೊಂಡಿದ್ದಾರೆ.
ವೆಂಕಟ್ ನಿರ್ಮಾಣದ 'ದಂಡುಪಾಳ್ಯ-4' ಚಿತ್ರ ಈಗ ನಾನಾ ಕಾರಣದಿಂದ ಸುದ್ದಿಯಾಗುತ್ತಿದೆ. ದಂಡುಪಾಳ್ಯ ಸರಣಿ ಕನ್ನಡದಲ್ಲಿ ಒಂದು ಮಟ್ಟಕ್ಕೆ ಗೆಲುವು ಕಂಡಿತ್ತು. ಇದೀಗ ಮತ್ತೊಂದು ಗೆಲುವು ಕಾಣುವ ನಿರೀಕ್ಷೆಯೊಂದಿಗೆ ದಂಡುಪಾಳ್ಯ 4 ಚಿತ್ರ ರೆಡಿಯಾಗಿದೆ.
ಬರ್ತಿದೆ 'ದಂಡುಪಾಳ್ಯ 4' : ಈ ಬಾರಿ ಗ್ಯಾಂಗ್ ಸೇರಿದ್ದಾರೆ ಯಾರು ಊಹೆ ಮಾಡದ ನಟಿ!
ಸದ್ಯ ಈ ಚಿತ್ರದ ಹಾಡುಗಳು ಸಿದ್ಧಗೊಂಡಿವೆ. ಆನಂದ್ ರಾಜಾ ವಿಕ್ರಮ್ ಸಂಗೀತ ನೀಡಿರೋ ಹಾಡೊಂದಕ್ಕೆ ಅಂಥೋಣಿ ದಾಸನ್ ಧ್ವನಿಯಾಗಿದ್ದಾರೆ. ಈ ಹಾಡು 'ಟಗರು' ಟೈಟಲ್ ಸಾಂಗಿನಂತೆಯೇ ಸದ್ದು ಮಾಡಲಿದೆ ಎಂಬ ಭರವಸೆ ಚಿತ್ರ ತಂಡದಲ್ಲಿದೆ.
ಇನ್ನುಳಿದಂತೆ ಈ ಚಿತ್ರದಲ್ಲಿ ಎರಡು ಹಾಡುಗಳಿರಲಿವೆ. ಅದರಲ್ಲೊಂದನ್ನು ಅಂಥೋಣಿ ದಾಸನ್ ಹಾಡಿದ್ದರೆ ಮತ್ತೊಂದಕ್ಕೆ Rap ಗಾಯಕ ಚಂದನ್ ಶೆಟ್ಟಿ ಧ್ವನಿಯಾಗಿದ್ದಾರೆ. ಇದಕ್ಕೆ ಸುನೀತಾ ಮತ್ತು ಇಂದೂ ನಾಗರಾಜ್ ಧ್ವನಿಗೂಡಿಸಿದ್ದಾರೆ. ಈ ಎರಡೂ ಹಾಡುಗಳಿಗೆ ನಿರ್ಮಾಪಕರಾದ ವೆಂಕಟ್ ಅವರೇ ಸಾಹಿತ್ಯ ಒದಗಿಸಿರೋದು ವಿಶೇಷ. ಈ ಎರಡು ಹಾಡುಗಳಲ್ಲಿ ಮೊದಲು ಅಂಥೋಣಿ ದಾಸನ್ ಹಾಡಿರುವ ಹಾಡು ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
ವಿಮರ್ಶೆ : 'ದಂಡುಪಾಳ್ಯ' ದಾರಿಯಲ್ಲಿ ಯಾವುದು ಸತ್ಯ, ಯಾವುದು ಸುಳ್ಳು
ಕ್ರೈಮ್ ಸಿನಿಮಾಗಳೆಂದರೆ ಹಾಡುಗಳಿಗೆ ಹೆಚ್ಚು ಪ್ರಾಮುಖ್ಯತೆ ಇರುವುದಿಲ್ಲ ಎಂಬ ನಂಬಿಕೆ ಇದೆ. ಆದರೆ ದಂಡುಪಾಳ್ಯ-4 ಸಿನಿಮಾದಲ್ಲಿ ಹಾಡುಗಳಿಗೆ ವಿಶೇಷ ಕಾಳಜಿ ವಹಿಸಲಾಗಿದೆ. ಒಂದು ಹಾಡಿನಲ್ಲಿ ಮುಮೈತ್ ಖಾನ್ ಮೋಹಕವಾಗಿ ಕುಣಿದಿದ್ದಾರೆ.
ರಜನಿಕಾಂತ್ ಸೇರಿದಂತೆ ಸಾಕಷ್ಟು ಸೂಪರ್ ಸ್ಟಾರ್ ಗಳ ಸಿನಿಮಾಗಳಿಗೆ ನೃತ್ಯ ಸಂಯೋಜನೆ ಮಾಡಿರುವ ತಮಿಳಿನ ಬಾಬಾ ಭಾಸ್ಕರ್ ಎರಡೂ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಕೆ.ಟಿ. ನಾಯಕ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು ಆರ್. ಗಿರಿ ಅವರ ಕ್ಯಾಮರಾ ಮತ್ತು ಎ ಶ್ರೀವತ್ಸ, ಪ್ರೀತಿ ಮೋಹನ್ ಅವರ ಸಂಕಲನ ಬಾಬು ಸಂಕಲನ ಈ ಚಿತ್ರಕ್ಕಿದೆ.
ಇನ್ನುಳಿದಂತೆ ಸುಮನ್ ರಂಗನಾಥ್, ಮುಮೈತ್ ಖಾನ್, ಬ್ಯಾನರ್ಜಿ, ರಾಕ್ ಲೈನ್ ಸುಧಾಕರ್, ಸಂಜೀವ್ ಕುಮಾರ್, ಅರುಣ್ ಬಚ್ಚನ್, ಬುಲೆಟ್ ಸೋಮು, ವಿಠ್ಠಲ್ ರಂಗಾಯಣ, ಜೀವಾ ಸೈಮನ್, ರಿಚ್ಚಾ ಶಾಸ್ತ್ರಿ, ಸ್ನೇಹಾ ಮುಂತಾದವರ ತಾರಾಗಣವಿದೆ. ನಿರ್ಮಾಪಕ ವೆಂಕಟ್ ಅವರು ಕೂಡಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರೋದು ವಿಶೇಷ.