Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿದೇಶದಿಂದ ಬಂದು 'ಅಮ್ಮ'ನಿಗೆ ಅಂತಿಮ ನಮನ ಸಲ್ಲಿಸಿದ ಅಜಿತ್
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯ ಸಂಸ್ಕಾರ ನಿನ್ನೆ (ಡಿಸೆಂಬರ್ 6) ರಂದು ಚೆನ್ನೈನ ಮರೀನಾ ಬೀಚ್ ನಲ್ಲಿ ನೆರೆವೇರಿತು. ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್, ಶರತ್ ಕುಮಾರ್, ವಿಜಯ್, ಧನುಷ್, ನಯನತಾರ, ಸೇರಿದಂತೆ ಬಹುತೇಕ ತಮಿಳು ಚಿತ್ರರಂಗ 'ಪುರಚ್ಚಿ ತಲೈವಿ'ಯ ಅಂತಿಮಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಆದ್ರೆ, ತಮಿಳು ನಟ ಅಜಿತ್ ಕುಮಾರ್ ಮಾತ್ರ ಜಯಲಲಿತಾ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿರಲಿಲ್ಲ. ಅಜಿತ್ ಎಲ್ಲಿದ್ದಾರೆ ? ಯಾಕೆ ಬರಲಿಲ್ಲ ಎಂಬ ಪ್ರಶ್ನೆಗಳು ಎಲ್ಲರನ್ನೂ ಕಾಡಿದವು. ಯಾಕಂದ್ರೆ, ಜಯಲಲಿತಾ ಅವರ ನಂತರ ತಲಾ ಅಜಿತ್ ಮುಂದಿನ ವಾರುಸ್ದಾರ ಎಂಬ ಸುದ್ದಿಗಳು ಈ ಹಿಂದಿನಿಂದ ತಮಿಳು ರಾಜಕೀಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಜಯಲಲಿತಾ ಅವರು ಕೂಡ ಇದರ ಬಗ್ಗೆ ವಿಲ್ ಬರೆದಿದ್ದಾರೆ ಎಂಬ ಸುದ್ದಿಗಳು ಹಲವು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಹಾಗಾಗಿ, ಅಜಿತ್ ಆಗಮನದ ಮೇಲೆ ನಿರೀಕ್ಷೆಯಿತ್ತು.[ಅಜಿತ್ -ತಮಿಳುನಾಡಿನ ಮುಂದಿನ ಸಿಎಂ: ಜಯಲಲಿತಾ ಆಸೆ]
ಇಂದು 'ಅಮ್ಮ'ನಿಗೆ ಅಂತಿಮ ನಮನ ಸಲ್ಲಿಸಿದ ಅಜಿತ್
ನಿನ್ನೆ ಜಯಲಲಿತಾ ಅವರ ಅಂತಿಮ ಯಾತ್ರೆಯಲ್ಲಿ ಭಾಗಿಯಾಗದ ಅಜಿತ್, ಇಂದು ಬೆಳ್ಳಂಬೆಳಗ್ಗೆಯೇ ಪತ್ನಿ ಶಾಲಿನಿ ಜೊತೆ ಮರೀನಾ ಬೀಚ್ ಗೆ ಭೇಟಿ ನೀಡಿ 'ಅಮ್ಮ'ನಿಗೆ ಅಂತಿಮ ನಮನ ಸಲ್ಲಿಸಿದರು.['ಅಮ್ಮ'ನ ಅಗಲಿಕೆಗೆ ಕಂಬನಿ ಮಿಡಿದ ಸಿನಿ ತಾರೆಯರು]
ನಿನ್ನೆ ಅಜಿತ್ ಯಾಕೆ ಬರಲಿಲ್ಲ?
ತಮ್ಮ 57ನೇ ಚಿತ್ರದ ಶೂಟಿಂಗ್ ಗಾಗಿ ಅಜಿತ್ ಬಲ್ಗೇರಿಯಾಗೆ ತೆರಳಿದ್ದರು. ಜಯಲಲಿತಾ ಅವರ ನಿಧನದ ಸುದ್ದಿ ಕೇಳಿದ ತಕ್ಷಣ, ಶೂಟಿಂಗ್ ನ ಅರ್ಧಕ್ಕೆ ಬಿಟ್ಟು ಚೆನ್ನೈಗೆ ಪ್ರಯಾಣ ಬೆಳೆಸಿದರು. ಆದ್ರೆ, ಪ್ರಯಾಣ ತಡವಾದ ಕಾರಣ ನಿನ್ನೆ (ಮಂಗಳವಾರ) ಅಂತಿಮ ಸಂಸ್ಕಾರದಲ್ಲಿ ಅಜಿತ್ ಪಾಲ್ಗೊಳ್ಳು ಆಗಲಿಲ್ಲ.[ಜನರ ಪ್ರಾರ್ಥನೆ ಫಲಿಸಲಿಲ್ಲ, 'ಅಮ್ಮ' ಜಯಲಲಿತಾ ಇನ್ನಿಲ್ಲ ]
ಚೆನ್ನೈಗೆ ಬಂದ ತಕ್ಷಣ ಮರೀನಾ ಬೀಚ್ ಕಡೆ ಪಯಣ
ಮುಂಜಾನೆ ಏರ್ ಪೋರ್ಟ್ ಗೆ ಬಂದಿಳಿದ ಅಜಿತ್ ಹಾಗೂ ಪತ್ನಿ, ನೇರವಾಗಿ ಜಯಲಲಿತಾ ಅವರ ಅಂತ್ಯ ಸಂಸ್ಕಾರ ನಡೆದ ಸ್ಥಳಕ್ಕೆ ಭೇಟಿ ನೀಡಿ 'ಅಮ್ಮ'ನಿಗೆ ನಮನ ಸಲ್ಲಿಸಿದರು.
ಅಜಿತ್ ರಾಜಕೀಯ ಪ್ರವೇಶ?
ಸದ್ಯ, ಜಯಲಲಿತಾ ಅವರ ನಿಧನದಿಂದ ಅಜಿತ್ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿಗಳು ಮತ್ತೆ ತಮಿಳುನಾಡಿನಲ್ಲಿ ಚರ್ಚೆಯಾಗುತ್ತಿದೆ. ಈ ಮಧ್ಯೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಕೂಡ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಆದ್ರೆ. ಅಮ್ಮನಿಲ್ಲದ ತಮಿಳುನಾಡು ರಾಜಕಾರಣ ಮುಂದೇನಾಗುತ್ತೆ ಎಂಬುದನ್ನ ಕಾದುನೋಡಬೇಕಿದೆ.