Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಅಪಘಾತದಲ್ಲಿ ತಮಿಳು ನಟ ನಿಧನ, ಬದುಕಿಗಾಗಿ ಪತ್ನಿ ಹೋರಾಟ
ತಮಿಳು ನಟ, ಖ್ಯಾತ ಮಿಮಿಕ್ರಿ ಕಲಾವಿದ ಮನು ಅಕ್ಟೋಬರ್ 28 ರಂದು ಚೆನ್ನೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮನು ಮತ್ತು ಆತನ ಪತ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲನೆಯ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿ ಹೊಡೆದಿದೆ.
ಈ ಅಪಘಾತದಿಂದ ಮನು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನ ಪತ್ನಿಯನ್ನು ಕೂಡಲೇ ನಗರದ ರಾಮಚಂದ್ರ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತೆಲುಗು ನಟನ ಕಾರು ಅಪಘಾತ: ಸಿಸಿಟಿವಿ ದೃಶ್ಯ ನೋಡಿದ್ಮೇಲೆ 'ಸ್ಟಾರ್' ಮೇಲೆ ಅನುಮಾನ.!
ಮನು ಅವರ ಪತ್ನಿ ಬಗ್ಗೆ ವಿವರ ನೀಡಿರುವ ವೈದ್ಯರು ''ಇನ್ನು ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಸದ್ಯಕ್ಕೆ ಏನು ಹೇಳಲು ಸಾಧ್ಯವಿಲ್ಲ'' ಎಂದಿದ್ದಾರಂತೆ. ಮನು ದಂಪತಿಗೆ ಏಳು ವರ್ಷದ ಮಗು ಇದೆ ಎಂದು ತಿಳಿದುಬಂದಿದೆ.
ರಸ್ತೆ ಅಪಘಾತದಲ್ಲಿ ಹಾಸ್ಯನಟನಿಗೆ ಗಂಭೀರ ಗಾಯ
ಮನು ಅವರು ತಮಿಳಿನ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. 2010ರಲ್ಲಿ ತೆರೆಕಂಡಿದ್ದ ಪುಜಾಲ್ ಸಿನಿಮಾದಲ್ಲಿ ನಟ ಮುರಳಿ ಜೊತೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಟಿವಿ ವಾಹಿನಿಯಲ್ಲಿ ನಿರೂಪಣೆ ಮಾಡುವ ಮೂಲಕ ತಮ್ಮ ವೃತ್ತಿ ಆರಂಭಿಸಿದ್ದ ಮನು, ಮಿಮಿಕ್ರಿ ಮತ್ತು ಡ್ಯಾನ್ಸ್ ಮಾಡುವ ಕಲೆ ಹೊಂದಿದ್ದರು. ಜಗತ್ತಿನಾದ್ಯಂತ ಮಿಮಿಕ್ರಿಯಲ್ಲಿ ಕಾರ್ಯಕ್ರಮಗಳನ್ನ ನೀಡಿದ್ದಾರೆ. ಮನು ಅವರ ನಿಧನದ ಸುದ್ದಿ ಕೇಳಿ ಇಂಡಸ್ಟ್ರಿಯ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ.