Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಸಿನಿಮಾ ಹಾಡು ಹಾಡಿಯೇ ಬಿಟ್ಟರು ತಮಿಳು ನಟ ಸಿಂಬು
Recommended Video
ಕಾವೇರಿ ನದಿ ನೀರು ವಿಚಾರದಲ್ಲಿ ತನ್ನ ಹೇಳಿಕೆ ಮೂಲಕ ಕನ್ನಡಿಗರ ಪ್ರೀತಿಗಳಿಸಿದ್ದ ತಮಿಳು ನಟ ಸಿಂಬು ಈಗ ಕನ್ನಡ ಸಿನಿಮಾಗೆ ಹಾಡು ಕೂಡ ಹಾಡಿದ್ದಾರೆ. ಕಾಂತ ಕನ್ನಲಿ ನಿರ್ದೇಶನದ 'ಇರುವುದೆಲ್ಲವ ಬಿಟ್ಟು ಇರುವ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾದ ಹಾಡಿನ ಮೂಲಕ ಸಿಂಬು ಕನ್ನಡಕ್ಕೆ ಕಾಲಿಟ್ಟಿದ್ದಾರೆ.
ಸಿನಿಮಾದಲ್ಲಿ ಇರುವ ''ಊರ ಸುದ್ದಿ ಕೇಳ್ತಾ ಇರುವೆ, ಎಲ್ಲರಿಗೂ ಹೇಳ್ತಾ ಇರುವೆ, ನಿಂದು ಸ್ವಲ್ಪ ಸೇರ್ಸುತ್ತಿರುವೆ ಯಾಕೆ ಬಿಟ್ಟು ಕೊಳ್ತಿ ಇರುವೆ... ಕುಣಿರಿ ತಕಥ ಕುಣಿಸಿ ತಕಥೈ ಕುಣಿರಿ ತಕಥ ಕುಣಿಸಿ ತಕಥೈ...'' ಎಂಬ ವಿಶೇಷ ಹಾಡಿಗೆ ಸಿಂಬು ಧ್ವನಿ ನೀಡಿದ್ದಾರೆ. ವಿ ಶ್ರೀಧರ್ ಸಂಭ್ರಮ್ ಸಂಗೀತ ಮತ್ತು ವಿ.ನಾಗೇಂದ್ರ ಪ್ರಸಾದ್ ಮುದ್ದಾದ ಸಾಹಿತ್ಯ ಹಾಡಿನಲ್ಲಿ ಇದೆ.
ಕಾವೇರಿ ಬಗ್ಗೆ ಮಾತನಾಡಿದ್ದ ಸಿಂಬು ಹಾಡುತ್ತಿರುವ ಮೊದಲ ಕನ್ನಡ ಗೀತೆ ಇದಾಗಿದ್ದು, ಹಾಡಿನ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಚಿತ್ರದ ನಿರ್ದೇಶಕ ಕಾಂತ ಕೂಡ ಹಾಡು ಹಿಟ್ ಆಗುತ್ತದೆ ಎಂಬ ಭರವಸೆ ಹೊಂದಿದ್ದಾರೆ. ಇನ್ನು ಹಾಡಿನ ರೆಕಾರ್ಡಿಂಗ್ ವೇಳೆ ಸಿಂಬು ಜೊತೆಗೆ ನಿರ್ದೇಶಕ ಕಾಂತ ಮತ್ತು ಸಂಗೀತ ನಿರ್ದೇಶಕ ವಿ ಶ್ರೀಧರ್ ಸಂಭ್ರಮ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
'ಇರುವುದೆಲ್ಲವ ಬಿಟ್ಟು ಇರುವ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾ ಈಗಾಗಲೇ ಅನೇಕ ವಿಚಾರಗಳಿಗೆ ದೊಡ್ಡ ಸುದ್ದಿ ಮಾಡಿದೆ. ನಟಿ ಮೇಘನಾ ರಾಜ್ ಈ ಚಿತ್ರದ ನಾಯಕಿ ಆಗಿದ್ದಾರೆ. ಇತ್ತೀಚಿಗಷ್ಟೆ ತಮ್ಮ ಮದುವೆಯ ಬಗ್ಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ನನ್ನ ಕೆರಿಯರ್ ನಲ್ಲಿ ಬಂದಿರುವ ಬೆಸ್ಟ್ ಸಿನಿಮಾ ಇದು ಅಂತ ಹೇಳಿಕೊಂಡಿದ್ದಾರೆ. ಇನ್ನು ಚಿತ್ರತಂಡ ಮೇಘನಾ ಮದುವೆಗೆ ಸಿನಿಮಾ ಟ್ರೇಲರ್ ಬಿಡುಗಡೆ ಮಾಡುವ ಪ್ಲಾನ್ ನಲ್ಲಿ ಇದೆ.
Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ. 'ರಂಗಿತರಂಗ' ಚಿತ್ರಕ್ಕೆ ಕೆಲಸ ಮಾಡಿದ್ದ ಸಿನಿಮಾಟೋಗ್ರಾಫರ್ ವಿಲಿಯಮ್ ಡೇವಿದ್ ಈ ಚಿತ್ರದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ. ಬೆಂಗಳೂರು, ಊಟಿ, ಮಂಗಳೂರು ನಲ್ಲಿ 45 ದಿನ ಚಿತ್ರೀಕರಣ ಮಾಡಲಾಗಿದೆ. ಅಚ್ಚುತ್ ಕುಮಾರ್ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರ ಮಾಡಿದ್ದಾರೆ. 'ಡ್ರಾಮಾ ಜೂನಿಯರ್ಸ್' ರನ್ನರ್ ಅಪ್ ಅಭಿಶೇಕ್ ರಾಯನ್ ಸಿನಿಮಾದಲ್ಲಿ ನಟಿಸಿದ್ದಾರೆ.