Don't Miss!
- Sports
ಐಪಿಎಲ್ 2021: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್
- News
ಕೊರೊನಾ ಏರಿಕೆ; ಭಾರತವನ್ನು ಕೆಂಪು ಪಟ್ಟಿಗೆ ಸೇರಿಸಲು ಬ್ರಿಟನ್ ನಿರ್ಧಾರ
- Finance
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಏಪ್ರಿಲ್ 19ರ ಮಾರುಕಟ್ಟೆ ದರ ಇಲ್ಲಿದೆ
- Education
GIC Of India Officer Scale I Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Automobiles
ಪವರ್ಫುಲ್ ಎಂಜಿನ್ ಹೊಂದಿರುವ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್ಯುವಿ ಕಾರಿನ ವಿಡಿಯೋ
- Lifestyle
ಪ್ರತಿದಿನ ಒಂದು ಕಪ್ ಅನಾನಸ್ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ದಿ ವಿಲನ್' ತಂಡಕ್ಕೆ ಬಾಯ್ ಬಾಯ್ ಹೇಳಿದ ನಟ ಶ್ರೀ ಕಾಂತ್
ಕನ್ನಡ ಸಿನಿಮಾರಂಗದಲ್ಲಿ ಈ ವರ್ಷ ಬಿಡುಗಡೆ ಆಗಲಿರುವ ಹಾಗೂ ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ 'ದಿ ವಿಲನ್' ಮೊದಲನೇ ಸ್ಥಾನದಲ್ಲಿದೆ. ಶಿವರಾಜ್ ಕುಮಾರ್ ಕಿಚ್ಚ ಸುದೀಪ್ ಅಭಿಮಾನಿಗಳು ಚಿತ್ರ ಬಿಡುಗಡೆ ಯಾವಾಗ ಎಂದು ತುದಿಗಾಲಲ್ಲಿ ಕಾಯುತ್ತಾ ಕುಳಿತಿದ್ದಾರೆ. ಚಿತ್ರದಲ್ಲಿ ಕಿಚ್ಚ ಹಾಗೂ ಹ್ಯಾಟ್ರಿಕ್ ಹೀರೋ ಜೊತೆಯಲ್ಲಿ ಸಾಕಷ್ಟು ಕಲಾವಿದರು ಅಭಿನಯಿಸುತ್ತಿದ್ದು ತಮಿಳು ನಟ ಶ್ರೀಕಾಂತ್ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯದ ಸುದ್ದಿಯ ಪ್ರಕಾರ ನಟ ಶ್ರೀಕಾಂತ್ ದಿ ವಿಲನ್ ಚಿತ್ರತಂಡಕ್ಕೆ ಬಾಯ್ ಹೇಳಿದ್ದಾರೆ. ಹಾಗಂತ ಸಿನಿಮಾ ತಂಡದಿಂದ ಹೊರ ಹೋಗಿಲ್ಲ. ತಮ್ಮ ಪಾಲಿನ ಚಿತ್ರೀಕರಣ ಕಂಪ್ಲೀಟ್ ಮಾಡಿ ತಮ್ಮ ಊರಿಗೆ ಪ್ರಯಾಣ ಬೆಳೆಸಿದ್ದಾರೆ. ದಿ ವಿಲನ್ ಸಿನಿಮಾ ಚಿತ್ರೀಕರಣದ ಆರಂಭದಲ್ಲೇ ಶ್ರೀಕಾಂತ್ ಅವರು ಶೂಟಿಂಗ್ ನಲ್ಲಿ ಭಾಗಿ ಆಗಿದ್ದರು. ಸಿನಿಮಾತಂಡದಿಂದ ಅವರನ್ನ ಅದ್ಧೂರಿ ಆಗಿ ಬರ ಮಾಡಿಕೊಳ್ಳಲಾಗಿತ್ತು.
ಕಿಚ್ಚನ ಆಕ್ಷನ್ ಕಟ್ ನಲ್ಲಿ ನವರಸ ನಾಯಕನ ಅಭಿನಯ ?
ಸದ್ಯ ಶ್ರೀಕಾಂತ್ ಅವರ ಪಾಲಿನ ಚಿತ್ರೀಕರಣ ಮುಗಿದಿರುವುದಾಗಿ ನಟ ಪ್ರೇಮ್ ತಿಳಿಸಿದ್ದಾರೆ. "ಇಂದು ನಿಮ್ಮ ಜೊತೆ ಕೊನೆಯ ದಿನದ ಚಿತ್ರೀಕರಣ, ಧನ್ಯವಾದಗಳು ಸರ್, ನಿಮ್ಮ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಚಿತ್ರತಂಡದ ಪ್ರತಿಯೊಬ್ಬರಿಗೂ ನೀವು ಸ್ಫೂರ್ತಿ. ಎಂದು ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ".
ದಿ ವಿಲನ್ ಚಿತ್ರದ ಚಿತ್ರೀಕರಣ ಕೊನೆಯ ಹಂತಕ್ಕೆ ತಲುಪಿದ್ದು ಸಿನಿಮಾ ನಿರ್ದೇಶಕರು ಹಾಡಿನ ಚಿತ್ರೀಕರಣ ಮಾಡುವಲ್ಲಿ ಬ್ಯುಸಿ ಆಗಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಕಿಚ್ಚ ಸುದೀಪ್ ಅಭಿನಯದ ಹಾಡನ್ನ ಚಿತ್ರೀಕರಿಸಲಾಗುತ್ತಿದೆ. ಇದೇ ತಿಂಗಳಲ್ಲಿ ದಿ ವಿಲನ್ ಸಿನಿಮಾದ ಟೀಸರ್ ಬಿಡುಗಡೆ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.
ಟಗರು ಸಿನಿಮಾ ವಿಮರ್ಶೆ ಮಾಡಿದ ರಾಕಿಂಗ್ ಸ್ಟಾರ್