Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಿ ವಿಲನ್' ತಂಡಕ್ಕೆ ಬಾಯ್ ಬಾಯ್ ಹೇಳಿದ ನಟ ಶ್ರೀ ಕಾಂತ್
ಕನ್ನಡ ಸಿನಿಮಾರಂಗದಲ್ಲಿ ಈ ವರ್ಷ ಬಿಡುಗಡೆ ಆಗಲಿರುವ ಹಾಗೂ ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ 'ದಿ ವಿಲನ್' ಮೊದಲನೇ ಸ್ಥಾನದಲ್ಲಿದೆ. ಶಿವರಾಜ್ ಕುಮಾರ್ ಕಿಚ್ಚ ಸುದೀಪ್ ಅಭಿಮಾನಿಗಳು ಚಿತ್ರ ಬಿಡುಗಡೆ ಯಾವಾಗ ಎಂದು ತುದಿಗಾಲಲ್ಲಿ ಕಾಯುತ್ತಾ ಕುಳಿತಿದ್ದಾರೆ. ಚಿತ್ರದಲ್ಲಿ ಕಿಚ್ಚ ಹಾಗೂ ಹ್ಯಾಟ್ರಿಕ್ ಹೀರೋ ಜೊತೆಯಲ್ಲಿ ಸಾಕಷ್ಟು ಕಲಾವಿದರು ಅಭಿನಯಿಸುತ್ತಿದ್ದು ತಮಿಳು ನಟ ಶ್ರೀಕಾಂತ್ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯದ ಸುದ್ದಿಯ ಪ್ರಕಾರ ನಟ ಶ್ರೀಕಾಂತ್ ದಿ ವಿಲನ್ ಚಿತ್ರತಂಡಕ್ಕೆ ಬಾಯ್ ಹೇಳಿದ್ದಾರೆ. ಹಾಗಂತ ಸಿನಿಮಾ ತಂಡದಿಂದ ಹೊರ ಹೋಗಿಲ್ಲ. ತಮ್ಮ ಪಾಲಿನ ಚಿತ್ರೀಕರಣ ಕಂಪ್ಲೀಟ್ ಮಾಡಿ ತಮ್ಮ ಊರಿಗೆ ಪ್ರಯಾಣ ಬೆಳೆಸಿದ್ದಾರೆ. ದಿ ವಿಲನ್ ಸಿನಿಮಾ ಚಿತ್ರೀಕರಣದ ಆರಂಭದಲ್ಲೇ ಶ್ರೀಕಾಂತ್ ಅವರು ಶೂಟಿಂಗ್ ನಲ್ಲಿ ಭಾಗಿ ಆಗಿದ್ದರು. ಸಿನಿಮಾತಂಡದಿಂದ ಅವರನ್ನ ಅದ್ಧೂರಿ ಆಗಿ ಬರ ಮಾಡಿಕೊಳ್ಳಲಾಗಿತ್ತು.
ಕಿಚ್ಚನ ಆಕ್ಷನ್ ಕಟ್ ನಲ್ಲಿ ನವರಸ ನಾಯಕನ ಅಭಿನಯ ?
ಸದ್ಯ ಶ್ರೀಕಾಂತ್ ಅವರ ಪಾಲಿನ ಚಿತ್ರೀಕರಣ ಮುಗಿದಿರುವುದಾಗಿ ನಟ ಪ್ರೇಮ್ ತಿಳಿಸಿದ್ದಾರೆ. "ಇಂದು ನಿಮ್ಮ ಜೊತೆ ಕೊನೆಯ ದಿನದ ಚಿತ್ರೀಕರಣ, ಧನ್ಯವಾದಗಳು ಸರ್, ನಿಮ್ಮ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಚಿತ್ರತಂಡದ ಪ್ರತಿಯೊಬ್ಬರಿಗೂ ನೀವು ಸ್ಫೂರ್ತಿ. ಎಂದು ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ".
ದಿ ವಿಲನ್ ಚಿತ್ರದ ಚಿತ್ರೀಕರಣ ಕೊನೆಯ ಹಂತಕ್ಕೆ ತಲುಪಿದ್ದು ಸಿನಿಮಾ ನಿರ್ದೇಶಕರು ಹಾಡಿನ ಚಿತ್ರೀಕರಣ ಮಾಡುವಲ್ಲಿ ಬ್ಯುಸಿ ಆಗಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಕಿಚ್ಚ ಸುದೀಪ್ ಅಭಿನಯದ ಹಾಡನ್ನ ಚಿತ್ರೀಕರಿಸಲಾಗುತ್ತಿದೆ. ಇದೇ ತಿಂಗಳಲ್ಲಿ ದಿ ವಿಲನ್ ಸಿನಿಮಾದ ಟೀಸರ್ ಬಿಡುಗಡೆ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.
ಟಗರು ಸಿನಿಮಾ ವಿಮರ್ಶೆ ಮಾಡಿದ ರಾಕಿಂಗ್ ಸ್ಟಾರ್