Don't Miss!
- Automobiles Kia EV9: 2024ರ ವಿಶ್ವ ಕಾರು ಪ್ರಶಸ್ತಿಯಲ್ಲಿ ಡಬಲ್ ಗೆಲುವು ಸಾಧಿಸಿದ ಕಿಯಾ ಇವಿ9
- News ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ನಿಷೇಧಾಜ್ಞೆ, ಮಹತ್ವದ ದಿನಾಂಕಗಳು
- Finance ಲೋಕಸಭಾ ಚುನಾವಣೆ ಟಿಕೆಟ್ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಂಸದ?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಿ ವಿಲನ್' ತಂಡಕ್ಕೆ ಬಾಯ್ ಬಾಯ್ ಹೇಳಿದ ನಟ ಶ್ರೀ ಕಾಂತ್
ಕನ್ನಡ ಸಿನಿಮಾರಂಗದಲ್ಲಿ ಈ ವರ್ಷ ಬಿಡುಗಡೆ ಆಗಲಿರುವ ಹಾಗೂ ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ 'ದಿ ವಿಲನ್' ಮೊದಲನೇ ಸ್ಥಾನದಲ್ಲಿದೆ. ಶಿವರಾಜ್ ಕುಮಾರ್ ಕಿಚ್ಚ ಸುದೀಪ್ ಅಭಿಮಾನಿಗಳು ಚಿತ್ರ ಬಿಡುಗಡೆ ಯಾವಾಗ ಎಂದು ತುದಿಗಾಲಲ್ಲಿ ಕಾಯುತ್ತಾ ಕುಳಿತಿದ್ದಾರೆ. ಚಿತ್ರದಲ್ಲಿ ಕಿಚ್ಚ ಹಾಗೂ ಹ್ಯಾಟ್ರಿಕ್ ಹೀರೋ ಜೊತೆಯಲ್ಲಿ ಸಾಕಷ್ಟು ಕಲಾವಿದರು ಅಭಿನಯಿಸುತ್ತಿದ್ದು ತಮಿಳು ನಟ ಶ್ರೀಕಾಂತ್ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯದ ಸುದ್ದಿಯ ಪ್ರಕಾರ ನಟ ಶ್ರೀಕಾಂತ್ ದಿ ವಿಲನ್ ಚಿತ್ರತಂಡಕ್ಕೆ ಬಾಯ್ ಹೇಳಿದ್ದಾರೆ. ಹಾಗಂತ ಸಿನಿಮಾ ತಂಡದಿಂದ ಹೊರ ಹೋಗಿಲ್ಲ. ತಮ್ಮ ಪಾಲಿನ ಚಿತ್ರೀಕರಣ ಕಂಪ್ಲೀಟ್ ಮಾಡಿ ತಮ್ಮ ಊರಿಗೆ ಪ್ರಯಾಣ ಬೆಳೆಸಿದ್ದಾರೆ. ದಿ ವಿಲನ್ ಸಿನಿಮಾ ಚಿತ್ರೀಕರಣದ ಆರಂಭದಲ್ಲೇ ಶ್ರೀಕಾಂತ್ ಅವರು ಶೂಟಿಂಗ್ ನಲ್ಲಿ ಭಾಗಿ ಆಗಿದ್ದರು. ಸಿನಿಮಾತಂಡದಿಂದ ಅವರನ್ನ ಅದ್ಧೂರಿ ಆಗಿ ಬರ ಮಾಡಿಕೊಳ್ಳಲಾಗಿತ್ತು.
ಕಿಚ್ಚನ ಆಕ್ಷನ್ ಕಟ್ ನಲ್ಲಿ ನವರಸ ನಾಯಕನ ಅಭಿನಯ ?
ಸದ್ಯ ಶ್ರೀಕಾಂತ್ ಅವರ ಪಾಲಿನ ಚಿತ್ರೀಕರಣ ಮುಗಿದಿರುವುದಾಗಿ ನಟ ಪ್ರೇಮ್ ತಿಳಿಸಿದ್ದಾರೆ. "ಇಂದು ನಿಮ್ಮ ಜೊತೆ ಕೊನೆಯ ದಿನದ ಚಿತ್ರೀಕರಣ, ಧನ್ಯವಾದಗಳು ಸರ್, ನಿಮ್ಮ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಚಿತ್ರತಂಡದ ಪ್ರತಿಯೊಬ್ಬರಿಗೂ ನೀವು ಸ್ಫೂರ್ತಿ. ಎಂದು ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ".
ದಿ ವಿಲನ್ ಚಿತ್ರದ ಚಿತ್ರೀಕರಣ ಕೊನೆಯ ಹಂತಕ್ಕೆ ತಲುಪಿದ್ದು ಸಿನಿಮಾ ನಿರ್ದೇಶಕರು ಹಾಡಿನ ಚಿತ್ರೀಕರಣ ಮಾಡುವಲ್ಲಿ ಬ್ಯುಸಿ ಆಗಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಕಿಚ್ಚ ಸುದೀಪ್ ಅಭಿನಯದ ಹಾಡನ್ನ ಚಿತ್ರೀಕರಿಸಲಾಗುತ್ತಿದೆ. ಇದೇ ತಿಂಗಳಲ್ಲಿ ದಿ ವಿಲನ್ ಸಿನಿಮಾದ ಟೀಸರ್ ಬಿಡುಗಡೆ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.
ಟಗರು ಸಿನಿಮಾ ವಿಮರ್ಶೆ ಮಾಡಿದ ರಾಕಿಂಗ್ ಸ್ಟಾರ್