Just In
- 5 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 6 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 6 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 8 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕರ್ನಾಟಕದಲ್ಲಿ 'ಕಾಲಾ' ನಿಷೇಧವನ್ನ ಪ್ರಶ್ನಿಸಿದ ತಮಿಳು ನಟ ವಿಶಾಲ್
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಾಲಾ' ಸಿನಿಮಾವನ್ನ ಕರ್ನಾಟಕದಲ್ಲಿ ನಿಷೇಧ ಮಾಡಲಾಗಿದೆ. ಕಾವೇರಿ ವಿವಾದದ ಬಗ್ಗೆ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆ ಕನ್ನಡ ಪರ ಸಂಘಟನೆಗಳು ರಜನಿ ಚಿತ್ರವನ್ನ ಬ್ಯಾನ್ ಮಾಡಲು ನಿರ್ಧರಿಸಿದೆ.
ಈ ನಿರ್ಧಾರಕ್ಕೆ ಕರ್ನಾಟಕ ಜನ, ಕನ್ನಡದ ಹೋರಾಟಗಾರರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಕರ್ನಾಟಕದಲ್ಲಿ ಕಾಲಾ ನಿಷೇಧ ಮಾಡಿರುವುದನ್ನ ತಮಿಳು ನಟ ವಿಶಾಲ್ ಖಂಡಿಸಿದ್ದಾರೆ.
'ಕಾಲಾ' ವಿವಾದ: ಅವರು ಮಾಡಿದ್ರೆ ಸರಿ, ನಾವ್ ಮಾಡಿದ್ರೆ ತಪ್ಪಾ.?
ತಮಿಳು ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷನಾಗಿರುವ ವಿಶಾಲ್ ಕಾಲಾ ಚಿತ್ರವನ್ನ ರಿಲೀಸ್ ಮಾಡಬೇಕು. ಹೀಗೆ ಮಾಡುತ್ತಿರುವುದು ಸರಿಯಿಲ್ಲ'' ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ವಿಶಾಲ್ ಅಭಿವ್ಯಕ್ತಿ ಸ್ವಾತಂತ್ಯದ ಬಗ್ಗೆ ಮಾತನಾಡಿದ್ದಾರೆ. ಅಷ್ಟಕ್ಕೂ, ವಿಶಾಲ್ ಏನಂದ್ರು.? ಮುಂದೆ ಓದಿ....

ರಜನಿ ಮಾತನಾಡಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯ
ಸೂಪರ್ ಸ್ಟಾರ್ ರಜನಿಕಾಂತ್ ಕಾವೇರಿ ವಿವಾದದ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಮಾತನಾಡಿರುವುದರ ಪರವಾಗಿ ವಕಾಲತ್ತು ವಹಿಸಿರುವ ತಮಿಳು ನಟ ವಿಶಾಲ್ ''ಕಾವೇರಿ ವಿಷ್ಯದ ಬಗ್ಗೆ ರಜನಿಕಾಂತ್ ಅವರು ಮಾತನಾಡಿರುವುದು ಅವರ ಜವಾಬ್ದಾರಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ
'' ಎಂದು ಹೇಳಿದ್ದಾರೆ.

'ಕಾಲಾ' ಯಾಕೆ ನಿಷೇಧ ಮಾಡಲಾಗುತ್ತಿದೆ.?
ರಜನಿಕಾಂತ್ ಅವರ ಅಭಿಪ್ರಾಯವನ್ನ ವಿರೋಧಿಸಿ ''ಅದರ ಪ್ರತೀಕಾರವಾಗಿ 'ಕಾಲಾ' ಚಿತ್ರವನ್ನ ಹೇಗೆ ಕರ್ನಾಟಕದಲ್ಲಿ ತಡೆಯುತ್ತಿದ್ದಾರೆ. ಕರ್ನಾಟಕ ವಾಣಿಜ್ಯ ಮಂಡಳಿ ಮತ್ತು ನನ್ನ ಸಹೋದರರು ಈ ಸಮಸ್ಯೆಯನ್ನ ಬಗೆಹರಿಸುತ್ತಾರೆ ಎಂಬ ಭರವಸೆ ನನಗೆ ಇದೆ'' ಎಂದು ವಿಶಾಲ್ ಟ್ವೀಟ್ ಮಾಡಿದ್ದಾರೆ.
ಕನ್ನಡಿಗರ ಕೋಪಕ್ಕೆ ಗುರಿಯಾಗಿದ್ದ ತಮಿಳು ಚಿತ್ರಗಳು
|
ನಾವೆಲ್ಲ ಭಾರತೀಯರು
ಇನ್ನು ಇಷ್ಟೆಲ್ಲಾ ಹೇಳಿದ ನಟ ವಿಶಾಲ್ ''ಅಂತಿಮವಾಗಿ ನಾವೆಲ್ಲ ಭಾರತೀಯರು'' ಎಂದು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಇದು ಸಹಜವಾಗಿ ಕನ್ನಡಿಗರನ್ನ ಮತ್ತು ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಟ್ವೀಟ್ ಮೂಲಕವೇ ಕಿಡಿಕಾರುತ್ತಿದ್ದಾರೆ.

ಮುಖ್ಯಮಂತ್ರಿಯನ್ನ ಭೇಟಿ ಮಾಡುತ್ತೇವೆ
ಅಗತ್ಯ ಬಿದ್ದರೇ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯನ್ನ ಭೇಟಿ ಮಾಡುತ್ತೇವೆ ತಮಿಳು ನಟ ಹಾಗೂ ತಮಿಳು ನಿರ್ಮಾಪಕರ ಸಂಘದ ಅಧ್ಯಕ್ಷ ವಿಶಾಲ್ ಹೇಳಿದ್ದಾರೆ. ಮತ್ತೊಂದೆಡೆ ಕರ್ನಾಟಕ ಸಿಎಂ ಎಚ್.ಡಿ ಕುಮಾರಸ್ವಾಮಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನ ನಿಷೇಧ ಮಾಡಲು ತೀರ್ಮಾನಿಸಿದ್ದಾರೆ ಎಂಬುದು ಗಮನಕ್ಕೆ ಬಂದಿದೆ, ಚರ್ಚೆ ಮಾಡುತ್ತೇವೆ ಎಂದಿದ್ದರು.
ಕಾಲಾ ಸಿನಿಮಾ ಪ್ರದರ್ಶನದ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ
|
ನಾವೆಲ್ಲ ಭಾರತೀಯರು ಎಂದು ಈಗ ಅರ್ಥವಾಯಿತು
''ಡಿಯರ್ ವಿಶಾಲ್ ಅವರೇ ನಾವೆಲ್ಲ ಭಾರತೀಯರು ಎಂದು ತಮಿಳುನಾಡಿನ ಜನತೆಗೆ ಈಗ ಅರ್ಥವಾಯಿತಾ. ಕರ್ನಾಟಕದಲ್ಲಿ ಯಾರೋಬ್ಬರು ರಜನಿಕಾಂತ್ ಸಿನಿಮಾ ನೋಡುವುದಿಲ್ಲ. ನೋಡಬೇಕಾ ಅಥವಾ ಬೇಡವಾ ಎನ್ನುವುದು ನಮ್ಮ ಸ್ವಾತಂತ್ಯ. ನಮಗೆ ಹೇಳಲು ಬರಬೇಡಿ. ನಾವು ಕಾಲಾ ಚಿತ್ರವನ್ನ ನಿಷೇಧ ಮಾಡುತ್ತೇವೆ'' ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
"ಕಾಲಾ" ಚಿತ್ರ ಬಿಡುಗಡೆ ವಿರೋಧಿಸಿ ಪ್ರತಿಭಟನೆ
|
ಅವಶ್ಯಕತೆ ಇದ್ದಾಗ ಸಹೋದರ ಅಂತೀರಾ.?
ನಿಮ್ಮ ಸಿನಿಮಾಗಳ ಬಂಡವಾಳ ಗಳಿಸಲು ಕರ್ನಾಟಕ ಬೇಕು, ಆಗ ಇಲ್ಲಿಯವರನ್ನ ಸಹೋದರರು ಎನ್ನುತ್ತೀರಾ. ಅದೇ ಕಾವೇರಿ ವಿಷ್ಯ ಬಂದಾಗ, ಇಲ್ಲಿಯವರನ್ನ ಶತ್ರುಗಳಂತೆ ಕಾಣುತ್ತೀರಾ. ಹೀಗಿದ್ದ ಮೇಲೆ ನೀವು ಬಿಸಿನೆಸ್ ಮಾಡಲು ನಾವು ಯಾಕೆ ಅವಕಾಶ ಕೊಡಬೇಕು ಎನ್ನುವುದಕ್ಕೆ ಒಂದೇ ಒಂದು ಕಾರಣ ನೀಡಿ ನೋಡೋಣ'' ಎಂದು ಪ್ರಶ್ನಿಸುತ್ತಿದ್ದಾರೆ.