Don't Miss!
- News ಬಿಜೆಪಿ ತೊರೆದ ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ಯಡಿಯೂರಪ್ಪ ಆಪ್ತ
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಹಾಸ್ಯ ನಟ ಯೋಗಿ ಬಾಬು ಜೊತೆ ಪ್ರಮೋದ್ ಶೆಟ್ಟಿ: ಇದು ಪ್ಯಾನ್ ಇಂಡಿಯಾ ಸಿನಿಮಾ!
ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದು ಈಗ ಟ್ರೆಂಡ್ ಆಗಿಬಿಟ್ಟಿದೆ. 'ಕೆಜಿಎಫ್ 2', 'ವಿಕ್ರಾಂತ್ ರೋಣ', '777 ಚಾರ್ಲಿ' , 'ಕಾಂತಾರ' ಬಳಿಕ ಪ್ಯಾನ್ ಇಂಡಿಯಾ ಸಿನಿಮಾ ಕಡೆಗೆನೇ ಎಲ್ಲರೂ ಕಣ್ಣಿಟ್ಟಿದ್ದಾರೆ. ಕನ್ನಡದ ಮತ್ತೊಬ್ಬ ನಿರ್ಮಾಪಕರು ಈಗ ಇಂತಹದ್ದೇ ಸಾಹಸಕ್ಕೆ ಕೈ ಹಾಕಿದ್ದಾರೆ.
ಕನ್ನಡದಲ್ಲಿ 'ತೂತು ಮಡಿಕೆ' ಅನ್ನೋ ಸಿನಿಮಾ ಮಾಡಿ ಮೆಚ್ಚುಗೆ ಗಳಿಸಿದ್ದ ನಿರ್ಮಾಪಕ ಮಧುಸೂಧನ್ ರಾವ್ ಈ ಸಾಹಸಕ್ಕೆ ಕೈ ಹಾಕಿದ್ದಾರೆ. ಮೊದಲ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡುವುದಕ್ಕೆ ರೆಡಿಯಾಗಿದ್ದಾರೆ. ಮುಂಬರುವ ಸಂಕ್ರಾಂತಿ ಹಬ್ಬದಂದು ಈ ಸಿನಿಮಾ ಸೆಟ್ಟೇರಲಿದೆ.
ದುಡ್ಡು ಕೊಟ್ರೆ ಕೋಟಿ ಕೋಟಿ ಯುಟ್ಯೂಬ್ ವ್ಯೂಸ್ ಸಿಗುತ್ತೆ, ಟ್ರೆಂಡ್ ಮಾಡೋಕಾಗಲ್ಲ ಎಂದ ದರ್ಶನ್!
ವಿಶೇಷ ಅಂದ್ರೆ, ತಮಿಳುನಾಡಿನ ಹಾಸ್ಯ ನಟ ಯೋಗಿ ಬಾಬು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರೊಂದಿಗೆ ಕನ್ನಡ ಪ್ರತಿಭಾವಂತ ನಟ ಪ್ರಮೋದ್ ಶೆಟ್ಟಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರ ಕಾಂಬಿನೇಷನ್ನಲ್ಲಿ ಸಿನಿಮಾ ಸೆಟ್ಟೇರಲಿದೆ.
ಅಂದ್ಹಾಗೆ ಸಿನಿಮಾದ ಹೆಸರು 'ಸನ್ನಿದಾನ ಪಿ.ಒ'. ಟೈಟಲ್ ವಿಭಿನ್ನವಾಗಿದ್ದು, ಸ್ಟಾರ್ ಕಾಸ್ಟ್ ಕೂಡ ಡಿಫ್ರೆಂಟ್ ಆಗಿಯೇ ಇರುತ್ತೆ ಅನ್ನೋ ಸುಳಿವನ್ನು ಸಿನಿಮಾತಂಡ ನೀಡಿದೆ. ಈ ಪ್ಯಾನ್ ಇಂಡಿಯಾ ಸಿನಿಮಾ ಜನವರಿ 14 ಸಂಕ್ರಾಂತಿ ಹಬ್ಬದಂದು ಶಬರಿ ಮಲೆಯ ಸನ್ನಿದಾನದಲ್ಲಿಯೇ ಸೆಟ್ಟೇರಲಿದೆ.
'ಸನ್ನಿದಾನ ಪಿ.ಒ' ಈ ಸಿನಿಮಾ ಪಕ್ಕಾ ಡಿವೈನ್ ಲವ್ ಸ್ಟೋರಿ. ಮಲಯಾಳಂ ಸಿನಿಮಾದ ನಿರ್ದೇಶಕ ರಾಜೀವ್ ವೈದ್ಯ ಇದಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಮಿಳಿನ ಹಾಸ್ಯ ನಟ ಯೋಗಿ ಬಾಬು ಹಾಗೂ ಸ್ಯಾಂಡಲ್ವುಡ್ ನಟ ಪ್ರಮೋದ್ ಶೆಟ್ಟಿ ಕಾಂಬಿನೇಷನ್ ಅನ್ನು ಈ ಸಿನಿಮಾದಲ್ಲಿ ನೋಡಬಹುದಾಗಿದೆ.
ಇವರಷ್ಟೇ ಅಲ್ಲದೆ ದಕ್ಷಿಣ ಭಾರತದ ಸ್ಟಾರ್ ನಟರು ಹಾಗೂ ನಟಿಯರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಸಿನಿಮಾ ತಂಡ ಇನ್ನೂ ಆ ಸೀಕ್ರೆಟ್ ಅನ್ನು ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ರಿವೀಲ್ ಮಾಡಲಿದೆ. ಮಧುಸುಧನ್ ರಾವ್ ಹಾಗೂ ಶಬೀರ್ ಪಠಾನ್ ಈ ಬಿಗ್ ಬಜೆಟ್ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ. ಈ ಸಿನಿಮಾ ಮೂಲಕ ದಕ್ಷಿಣ ಭಾರತ ಮೂರು ಚಿತ್ರರಂಗದ ನಟರು, ತಂತ್ರಜ್ಞರು ಒಂದಾಗುತ್ತಿದ್ದಾರೆ.