Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನರ ಪ್ರಾರ್ಥನೆ ಫಲಿಸಲಿಲ್ಲ, 'ಅಮ್ಮ' ಜಯಲಲಿತಾ ಇನ್ನಿಲ್ಲ
ಕೋಟ್ಯಾಂತರ ಜನರ ಪ್ರಾರ್ಥನೆಗೆ ಫಲ ಸಿಗಲಿಲ್ಲ. 'ಅಮ್ಮನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿ' ಎಂಬ ಅಭಿಮಾನಿಗಳ ಕೂಗು ದೇವರಿಗೆ ಕೇಳಿಸಲಿಲ್ಲ. ಹೃದಯ ಸ್ಥಂಭನಕ್ಕೆ ಒಳಗಾಗಿದ್ದ ತಮಿಳುನಾಡಿನ 'ಅಮ್ಮ' ಸೆಲ್ವಿ ಜಯಲಲಿತಾ ಬದುಕುಳಿಯಲಿಲ್ಲ.
ಕಳೆದ 74 ದಿನಗಳಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಸಿ.ಎಂ ಜೆ.ಜಯಲಲಿತಾ ಅವರಿಗೆ ಭಾನುವಾರ (ಡಿಸೆಂಬರ್ 4) ಹೃದಯ ಸ್ಥಂಭನ ಸಂಭವಿಸಿತ್ತು. ತೀವ್ರ ನಿಗಾ ಘಟಕದಲ್ಲಿ ತಜ್ಞರ ತಂಡ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. [ತಮಿಳುನಾಡಿನ 'ಅಮ್ಮ' ಜೆ ಜಯಲಲಿತಾ ವಿಧಿವಶ]
ಹೃದಯ ಸ್ಥಂಭನವಾದ ಬಳಿಕ ರಾತ್ರಿಯೇ ಆಂಜಿಯೋಪ್ಲಾಸ್ಟಿ ಸರ್ಜರಿ ಕೂಡ ಮಾಡಲಾಗಿತ್ತು. 68 ವರ್ಷ ವಯಸ್ಸಿನ ಜಯಲಲಿತಾ ಅವರ ಹೃದಯ ಬಡಿತ ಸುಸ್ಥಿತಿಯಲ್ಲಿಡಲು Extracorporeal membrane ಸಾಧಕವನ್ನು ಬಳಸಿಕೊಳ್ಳಲಾಗಿತ್ತು. ECMO ಜೊತೆಗೆ ಜೀವ ಸಂರಕ್ಷಕ ಸಾಧನಗಳನ್ನು ಉಪಯೋಗಿಸಿ, ಹೃದಯ ಹಾಗೂ ಶ್ವಾಸಕೋಶ ಸಮಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಲಾಗಿತ್ತು. ಕೃತಕ ಉಸಿರಾಟ ಸಾಧನದ ನೆರವಿನಿಂದ ಚಿಕಿತ್ಸೆ ನೀಡುತ್ತಿದ್ದರೂ, ವಿಧಿ ಲಿಖಿತವೇ ಬೇರೆ ಆಗಿತ್ತು.
ಸೋಮವಾರ ರಾತ್ರಿ 11.30 ರ ಸುಮಾರಿಗೆ ತಮಿಳುನಾಡು ಮುಖ್ಯಮಂತ್ರಿ, ಮಾಜಿ ತಾರೆ ಪುರುಚ್ಚಿ ತಲೈವಿ ಜೆ.ಜಯಲಲಿತಾ ಇಹಲೋಕ ತ್ಯಜಿಸಿದರು.[ತಮಿಳುನಾಡಿನಲ್ಲಿ ಶಾಲೆ, ಕಾಲೇಜುಗಳಿಗೆ 3 ದಿನಗಳ ರಜೆ ಘೋಷಣೆ]
It is with indescribable grief, we announce the sad demise of our esteemed Honourable Chief Minister of Tamil Nadu, Puratchi Thalaivi Amma. pic.twitter.com/vLloIw2qbE
— Apollo Hospitals (@HospitalsApollo) December 5, 2016
ದೇಹದಲ್ಲಿ ನೀರಿನ ಕೊರತೆ ಹಾಗೂ ಜ್ವರದ ಕಾರಣದಿಂದ ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ಜಯಲಲಿತಾ ದಾಖಲಾಗಿದ್ದರು. ಅಂದಿನಿಂದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ ಎಂಬ ಸುದ್ದಿಯ ಸಂತಸ ಆಚರಿಸುವಷ್ಟರಲ್ಲಿ ಹೃದಯ ಸ್ಥಂಭನವಾದ ಆಘಾತಕಾರಿ ಸುದ್ದಿ ಅಪೋಲೋ ಆಸ್ಪತ್ರೆಯಿಂದ ಹೊರಬಿತ್ತು.
While she's no longer with us, she would continue to live in our hearts. I join the country in mourning her loss. - Dr. Prathap C. Reddy
— Apollo Hospitals (@HospitalsApollo) December 5, 2016
ಕರ್ನಾಟಕದ ಮೇಲುಕೋಟೆಯ ಅಯ್ಯಂಗಾರಿ ಬ್ರಾಹ್ಮಣ ಕುಟುಂಬದಲ್ಲಿ ಜಯರಾಮ್ ಹಾಗೂ ವೇದವಲ್ಲಿ ದಂಪತಿಯ ಪುತ್ರಿಯಾಗಿ ಜನಿಸಿದ ಕೋಮಲವಲ್ಲಿ ಮುಂದೆ ನಟಿಯಾಗಿ, ತಮಿಳುನಾಡಿನ ಮುಖ್ಯಮಂತ್ರಿಯಾದ ಜಯಲಲಿತಾ ಇನ್ನೂ ನೆನಪು ಮಾತ್ರ.