Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ನಲ್ಲಿ ಸದ್ದು ಮಾಡುತ್ತಿದೆ ಕನ್ನಡದ ಸಿನಿಮಾ
ರಥಾವರ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿದ್ದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಮತ್ತೊಂದು ವಿಭಿನ್ನ ಚಿತ್ರದ ಜೊತೆ ಸಿನಿಪ್ರಿಯರ ಮುಂದೆ ಬರಲು ಸಜ್ಜಾಗಿದ್ದಾರೆ. ಚಂದ್ರಶೇಖರ್ ಬಂಡಿಯಪ್ಪ ತಾರಕಾಸುರ ಸಿನಿಮಾವನ್ನ ನಿರ್ದೇಶನ ಮಾಡಿದ್ದು ಈ ಮೂಲಕ ನವ ನಾಯಕನನ್ನ ಚಿತ್ರರಂಗಕ್ಕೆ ಪರಿಚಯಿಸಲಿದ್ದಾರೆ.
ತಾರಾಕಾಸುರ ಸಿನಿಮಾದಲ್ಲಿ ವೈಭವ್ ನಾಯಕನಾಗಿ ಅಭಿನಯಿಸಿದ್ದು ಮಾನ್ವಿತಾ ಹರೀಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರುವ ನಿರ್ದೇಶಕರು ಶಿವರಾತ್ರಿ ಹಬ್ಬಕ್ಕೆ ಸಿನಿಮಾದ ಕುಂಬಳಕಾಯಿ ಹೊಡೆಯಲು ಸಿದ್ದತೆ ಮಾಡಿಕೊಂಡಿದ್ದಾರೆ.
ಚಿತ್ರ ಬಿಡುಗಡೆ ಮಾಡುವ ಮುನ್ನವೇ ಬಾಲಿವುಡ್ ನಿಂದ ಚಿತ್ರಕ್ಕೆ ಉತ್ತಮ ಬೇಡಿಕೆ ಬಂದಿದೆ. ತಾರಕಾಸುರ ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕು 1 ಕೋಟಿ 75 ಲಕ್ಷಕ್ಕೆ ಮಾರಾಟವಾಗಿರುವ ಬಗ್ಗೆ ಚಿತ್ರತಂಡ ತಿಳಿಸಿದೆ.
ತಾರಾಕಾಸುರ ಚಿತ್ರದಲ್ಲಿ ಖಳನಾಯಕನಾಗಿ ಡ್ಯಾನಿ ಸಫಾನಿ ಅಭಿನಯಿಸಿದ್ದಾರೆ. ಕಥೆಯೂ ವಿಭಿನ್ನವಾಗಿದೆ ಇದೇ ಕಾರಣದಿಂದ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರೆಯಲ್ಲಿ ಸಿನಿಮಾದ ಹಾಡಿನ ಚಿತ್ರೀಕರಣ ಮಾಡಲು ಸಿದ್ದತೆಗಳನ್ನ ಮಾಡಿಕೊಂಡಿರುವ ಚಿತ್ರತಂಡ ಇನ್ನು ಕೆಲವೇ ದಿನಗಳಲ್ಲಿ ಚಿತ್ರವನ್ನ ತೆರೆಗೆ ತರಲಿದೆ.